ಮೈಸೂರು | ಫೆ.14ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Date:

ಮೈಸೂರು ನಗದರ ವಿಶ್ವೇಶ್ವರನಗರ ಇಂಡಸ್ಟ್ರಿಯಲ್ ಸಬರ್ಬ್ ವ್ಯಾಪ್ತಿಯ ಮಹರ್ಷಿ ಪಬ್ಲಿಕ್‌ ಶಾಲೆಯಲ್ಲಿ ಫೆಬ್ರವರಿ 14ರಂದು ಉಚಿತವಾಗಿ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮ ನಡೆಯುವ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟರ್‌ ಬಿಡುಗಡೆ ಮಾಡಿದರು.

ಪೋಸ್ಟರ್‌ ಬಿಡುಗಡೆಗೊಳಿಸಿದ ಪ್ರತಾಪ್‌ ಸಿಂಹ ಮಾತನಾಡಿ, “ಪ್ರತಿಯೊಬ್ಬ ನಾಗರಿಕನಿಗೂ ಜೀವಿಸಲು ಮನೆ, ಆಹಾರ, ಬಟ್ಟೆ ಸೇರಿದಂತೆ ಇತರೆ ಮೂಲಭೂತ ವ್ಯವಸ್ಥೆಗಳ ಅಗತ್ಯವಿದೆ. ಅಲ್ಲದೆ ಹುಟ್ಟಿದ ಮಗುವಿಗೂ ಕೂಡಾ ಅನ್ನ, ಅಕ್ಷರ, ಆರೋಗ್ಯ ಪ್ರಮುಖ‌ ಅವಶ್ಯವಾಗಿದೆ. ಹಾಗಾಗಿ, ಮಗುವಿಗೆ ಮಾತನಾಡುವ ಭಾಷೆ ಮತ್ತು ವಿದ್ಯೆ ಕಲಿಸುವ ಪ್ರಾರಂಭ ಹಂತದಲ್ಲಿ ಅಕ್ಷರಾಭ್ಯಾಸ ಮಾಡಿಸುವುದು ಪೋಷಕರ ಮೂಲ ಕರ್ತವ್ಯ” ಎಂದು ತಿಳಿಸಿದರು.

“ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ತಾಯಿಯೇ ಮೊದಲ ಗುರು. ಮಗುವಿಗೆ ಅಕ್ಷರಭ್ಯಾಸ ಎನ್ನುವುದು ಜ್ಞಾನ ದೇಗುಲದ ಪ್ರಮುಖ ಘಟ್ಟ. ಅಕ್ಷರಾಭ್ಯಾಸದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, “ಉಚಿತ ಸಾಮೂಹಿಕ ಅಕ್ಷರಾಭ್ಯಾಸ ಹಾಗೂ ಸರಸ್ವತಿ ಪೂಜೆ ಫೆ.14ರ ಬುಧವಾರ ಬೆಳಿಗ್ಗೆ 8ರಿಂದ 10-30ರವರೆಗೂ ನಡೆಯಲಿದೆ. ಎಲ್ಲ ಜನಾಂಗದವರೂ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಕೋರಿದರು. ‌

ಈ ಸುದ್ದಿ ಓದಿದ್ದೀರಾ? ಹಾವೇರಿ | ಗೃಹ ಲಕ್ಷ್ಮೀ ಹಣ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಅಕ್ಷರಾಭ್ಯಾಸನವನ್ನು ಮಾಡಲಿಚ್ಚಿಸುವ ಮಕ್ಕಳ ಪೋಷಕರು ದೂರವಾಣಿ 9880752727 ಅಥವಾ 7829067769 ಮೊಬೈಲ್‌ ಸಂಖ್ಯೆಗೆ ನೋಂದಾಯಿಸಿಕೊಳ್ಳಬಹುದು. ಫೆಬ್ರವರಿ 13 ನೋಂದಣಿಗೆ ಕಡೆಯದಿನವಾಗಿದೆ.

ಅಕ್ಷರಾಭ್ಯಾಸ ಮಾಡಿಸುವವರ ಗಮನಕ್ಕೆ: “ಸ್ಲೇಟ್-ಬಳಪ ಇತ್ಯಾದಿ ಅಗತ್ಯ ಸಲಕರಣೆಗಳನ್ನು ನಮ್ಮ ಟ್ರಸ್ಟ್‌ನಿಂದಲೇ ಉಚಿತವಾಗಿ ನೀಡಲಾಗುವುದು. ಪ್ರತ್ಯೇಕವಾಗಿ ತರುವ ಅಗತ್ಯವಿರುವುದಿಲ್ಲ” ಎಂದು ತಿಳಿಸಿದರು.

ಮಹರ್ಷಿ ಪಬ್ಲಿಕ್ ಶಾಲೆಯ ಸಿಇಓ ತೇಜಸ್ ಶಂಕರ್, ಬಿಜೆಪಿ ಮುಖಂಡ ಆರ್ ಪರಮೇಶ್ ಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...