ಮೈಸೂರು | ಗೌರಿ ಗಣೇಶ ಹಬ್ಬ; ಸೌಹಾರ್ದತೆ ಸಂದೇಶ ಸಾರಿದ ಹಿಂದೂ, ಮುಸ್ಲಿಂ ಯುವಕರು

Date:

ಮೈಸೂರು ಕೆ ಆರ್ ಮೊಹಲ್ಲಾದ ತೊಗರಿ ಬೀದಿಯಲ್ಲಿ ಪಂಚಮುಖಿ ವಿನಾಯಕ ಯುವಕರ ಬಳಗದ ಯುವಕರು ತಮ್ಮ ಮುಸಲ್ಮಾನ್ ಸ್ನೇಹಿತರ ಜೊತೆ ಸೇರಿ ಗೌರಿ ಗಣೇಶ ಪೂಜೆಯನ್ನು ಒಟ್ಟಾಗಿ ಸಲ್ಲಿಸುವ ಮೂಲಕ ಸಮಾಜಕ್ಕೆ ಮಾದರಿಯಾದರು.

ಪೂಜೆಯ ಬಳಿಕ ಸಿಹಿಯನ್ನು ಪರಸ್ಪರ ತಿನ್ನಿಸಿ ಖುಷಿಪಟ್ಟರು. ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಹಿಂದೂ ಮುಸ್ಲಿಂ ಭಾಯಿ ಭಾಯಿ ಎಂಬ ಸಂದೇಶವನ್ನು ಜನತೆಗೆ ರವಾನಿಸಿದರು.

ಪಂಚಮುಖಿ ವಿನಾಯಕ ಯುವಕರ ಬಳಗದ ಅಧ್ಯಕ್ಷ ರವಿನಂದನ್ ಮಾತನಾಡಿ “ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ಧವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ, ಕೆಲವು ಕಿಡಿಗೇಡಿಗಳಿಂದ ಎರಡು ಸಮುದಾಯದಲ್ಲಿ ಶಾಂತಿಯನ್ನು ಕದಡುವ ಯತ್ನಗಳು ನಡೆಯುತ್ತಿದೆ. ಆದ್ದರಿಂದ, ಹಿಂದೂ, ಮುಸ್ಲಿಂ ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯ ವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕರು ಒಟ್ಟಾಗಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತಾ ಬಂದಿರುವುದು ಬಹಳ ಸಂತಸದ ವಿಚಾರ. ಇದೇ ಥರ ಸೌಹಾರ್ದತೆ ಆಚರಣೆ ಪ್ರತಿ ಜಿಲ್ಲೆಯಲ್ಲಿ ಆದರೆ ಬಹಳ ಉತ್ತಮ ಬೆಳವಣಿಗೆ ರಾಜ್ಯದಲ್ಲಿ ಕಾಣಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕರಡಿ ದಾಳಿಗೊಳಗಾದ ಅರಣ್ಯ ಇಲಾಖೆ ಸಿಬ್ಬಂದಿ; ಅಧಿಕಾರಿಗಳಿಂದ ವೈಯಕ್ತಿಕ ಆರ್ಥಿಕ ನೆರವು

ಕಾರ್ಯಕ್ರಮದಲ್ಲಿ ಮುಸಲ್ಮಾನ್ ಬಾಂಧವರಾದ ಗುಲ್ಸಿಯನ್ ಪಾಷಾ, ಅಮೀನ್, ಕೊಹಿಲ್, ಅಹಮದ್ ಜೂನಿಯರ್, ಮುಶೀರ್, ಸಲ್ಮಾನ್ ಪಾಷಾ, ಸಮೀರ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜಿ ರಾಘವೇಂದ್ರ, ರವಿತೇಜ, ಗಿರೀಶ್, ಹರ್ಷ, ಸುಭಾಷ್, ಉಮೇಶ್ ಮತ್ತು ಇನ್ನಿತರ ಯುವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...