ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

Date:

ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಕೊಡುವ ಕ್ಷೇತ್ರ ಕೃಷಿ ಮಾತ್ರ. ಕೃಷಿಯಲ್ಲಿ ಎಲ್ಲರೂ ಉತ್ತಮ ಜೀವನ ಕಂಡುಕೊಂಡಿದ್ದಾರೆ ಅನ್ನುವುದು ಸೂಕ್ತವಲ್ಲ. ನಾನು ಕೂಡ ಕೃಷಿಕ ಕುಟುಂಬದವನೆ ನನಗೂ ಕೂಡ ಅದರ ಅರಿವಿದೆ. ರೈತ ಸಾಲದಲ್ಲಿ ಮುಳುಗಿದ್ದಾನೆಯೇ ಹೊರತು ನೆಮ್ಮದಿಯ ಬದುಕು ಕಂಡಿಲ್ಲ. ಹಾಗಾಗಿ ವೃದ್ಧಾಪ್ಯದಲ್ಲಿ ವೃದ್ಧ ರೈತನ ನೆರವಿಗೆ ಪಿಂಚಣಿ ಕೊಡುವ ವ್ಯವಸ್ಥೆಯಾಗಬೇಕು. ಇದಕ್ಕಾಗಿ ಸರ್ಕಾರದ ಮೇಲೆ ಕರ್ನಾಟಕ ರಾಜ್ಯ ರೈತ ಸಂಘ ಒತ್ತಡ ಹಾಕಬೇಕು ಎಂದು ಶಾಸಕ ಬಿ ಆರ್ ಪಾಟೀಲ್ ಸಲಹೆ ನೀಡಿದರು.

ಮೈಸೂರಿನ ಕೃಷಿ ಉತ್ಪನ್ನ ಅಧ್ಯಯನ ಸಂಸ್ಥೆಯಲ್ಲಿ ಈ ದಿನ.ಕಾಮ್ ಸಹಯೋಗದೊಂದಿಗೆ ನಡೆದ ‘ಹುತಾತ್ಮ ಎಂ ರಾಮು ಮತ್ತು ಜಿ.ಟಿ ರಾಮಸ್ವಾಮಿ ಸ್ಮರಣೆ’ ಹಾಗೂ ಪಡಿತರ ವ್ಯವಸ್ಥೆಗೆ ರೈತರಿಂದಲೇ ಕೊಳ್ಳಬಹುದಾದ ಬೆಳೆಗಳ ಕುರಿತಾಗಿ ವಿಚಾರ ಮಂಡನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ನಾನೂ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಚಳುವಳಿಗೆ ಧುಮುಕಿದವನು. ನನಗೆ ಪ್ರೊ. ನಂಜುಂಡಸ್ವಾಮಿ ಅವರ ಪ್ರೇರಣೆ ಇದೆ. ಹಾಗಾಗಿಯೇ ರೈತ ಹೋರಾಟಕ್ಕೆ ಬಂದು ಸಾಕಷ್ಟು ಹೋರಾಟದಲ್ಲಿ ತೊಡಗಿಸಿಕೊಂಡವನು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಳ್ಳಿಗಾಡಿನ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಸಿಗುತ್ತಿಲ್ಲ ಹಾಗೂ ಹೀಗೂ ವಿದ್ಯಾಭ್ಯಾಸ ಪೂರೈಸಿ ಪಟ್ಟಣಕ್ಕೆ ಬಂದರೆ ಆಂಗ್ಲ ಮಾಧ್ಯಮದಲ್ಲಿ ಓದಿದ ಮಕ್ಕಳ ಜೊತೆ ಪೈಪೋಟಿ ನಡೆಸಲು ಆಗುವುದಿಲ್ಲ. ಹಾಗಾಗಿ ಮಕ್ಕಳು ಎಲ್ಲ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಇದ್ದಂತಹ ಗ್ರಾಮೀಣ ಮಕ್ಕಳಿಗೆ ಕೃಪಾಂಕ ನೀಡುವ ವ್ಯವಸ್ಥೆ ಮರು ಜಾರಿಯಾಗಬೇಕು” ಎಂದು ಆಗ್ರಹಿಸಿದರು.

ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ನಾವು ಒಂದು ಹಂತದ ಹಳೆ ತಲೆಮಾರುಗಳು. ನಮಗೂ ವಯಸ್ಸಾಗಿದೆ. ಆದರೂ ರಾಜ್ಯಾದ್ಯಂತ ಹೋರಾಟ, ಚಳವಳಿ ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದೇವೆ. ಈಗಿನ ಯುವ ಪೀಳಿಗೆ ರೈತ ಚೇತನ ಪುಟ್ಟಣ್ಣಯ್ಯ ಅವರ ಕನಸಿನಂತೆ ಯುವ ಘಟಕ ಸ್ಥಾಪಿತವಾಗಬೇಕು. ಯುವಕರು ಜಾಗೃತರಾಗಿ ಶಿಸ್ತು, ಶಾಂತಿ, ಸಂಯಮದಿಂದ ಸಂಘಟನೆ ಕಟ್ಟಬೇಕು” ಎಂದು ಹೇಳಿದರು.

“ಜವಾಬ್ದಾರಿ ಹೊತ್ತು ಶಕ್ತಿಯುತವಾದ ಯುವ ಘಟಕದ ಮೂಲಕ ಹೋರಾಟದ ರೂಪುರೇಷೆ ಕೈಗೊಳ್ಳಬೇಕು. ಆಗ ಕರ್ನಾಟಕ ರಾಜ್ಯ ರೈತ ಸಂಘ ಇನ್ನಷ್ಟು ಬಲಗೊಳ್ಳುತ್ತದೆ. ಯುವಕರು ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು. ಸಂಘಟನೆಯ ಸಿದ್ದಾಂತ ಮೈಗೂಡಿಸಿಕೊಂಡು ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಗ ಮಾತ್ರ ಒಬ್ಬ ಚಳವಳಿಗಾರನಾಗಲೂ ಸಾಧ್ಯ” ಎಂದು ಕಿವಿಮಾತು ಹೇಳಿದರು.

ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, “2021 ಜುಲೈನಲ್ಲಿ ನಡೆದ ನರಗುಂದ, ನವಲಗುಂದ ರೈತ ಹುತಾತ್ಮ ದಿನದಂದು ರಾಮು ಹಾಗೂ ರಾಮಸ್ವಾಮಿ ಭಾಗಿಯಾಗಿ ಒಟ್ಟಿಗೆ ಉಪಹಾರ ಸೇವಿಸಿ ತೆರಳಿದ್ದರು. 2021ರ ಜುಲೈ 22ರಂದು ದುರದೃಷ್ಟವಶಾತ್ ಅಪಘಾತಕ್ಕೆ ಈಡಾಗಿ ಇಹಲೋಕ ತ್ಯಜಿಸಿದ್ದಾರೆ. ಸಂಘಟನೆ ಕೆಲಸಕ್ಕಾಗಿ ಪ್ರಾಣ ತೆತ್ತ ಇಂತಹ ಹುತಾತ್ಮರನ್ನು ಸ್ಮರಿಸಬೇಕು. ಇವರೆಲ್ಲರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮನೆಯಂಗಳದಲ್ಲೇ ಅಂತ್ಯಸಂಸ್ಕಾರಕ್ಕೆ ಮುಂದಾದ ಪ್ರಕರಣ; ಸೂರನ್ನೂ ಕಳೆದುಕೊಳ್ಳುವ ಭೀತಿ

ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಮ್ಯ ರಾಮಣ್ಣ, ಯುವ ಘಟಕ ಅಧ್ಯಕ್ಷ ಆದಿತ್ಯ ನಾರಾಯಣ ಕೊಲ್ಲಾಜೇ, ಯುವ ಮುಖಂಡರುಗಳಾದ ಪ್ರಸನ್ನ ಎನ್ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ವಿಜಯೇಂದ್ರ, ಅನಂದೂರು ಪ್ರಭಾಕರ್, ಚಂದ್ರಶೇಖರ್, ರಾಘವೇಂದ್ರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...