ಮೈಸೂರು | ಮುಡಾ ಪ್ರಕರಣದ ವರದಿ ಸಲ್ಲಿಕೆಗೆ ಮೇ 31ರವರೆಗೆ ಗಡುವು ವಿಸ್ತರಣೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ.

ಆಯೋಗವು ಆರಂಭದಲ್ಲಿ ಜನವರಿ ಮಧ್ಯದ ವೇಳೆಗೆ ತನ್ನ ವರದಿಯನ್ನು ಸಲ್ಲಿಸುವುದಾಗಿ ಹೇಳಲಾಗಿತ್ತು. ಆದರೆ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ನೇತೃತ್ವದ ಆಯೋಗವು ಹೆಚ್ಚುವರಿ ಸಮಯವನ್ನು ಕೋರಿದ್ದರಿಂದ, ಸರ್ಕಾರವು ಗಡುವನ್ನು ವಿಸ್ತರಿಸಿದೆ.

ಮುಡಾದಲ್ಲಿ ಅವ್ಯವಹಾರದ ಆರೋಪಗಳು ಮತ್ತು ಅಕ್ರಮಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದ ನಂತರ, ಸರ್ಕಾರವು ಜುಲೈ 2024ರ ಮಧ್ಯದಲ್ಲಿ ವಿಚಾರಣಾ ಆಯೋಗದ ಕಾಯ್ದೆಯಡಿ ಆಯೋಗವನ್ನು ರಚಿಸಿ, ತನ್ನ ವರದಿಗಳನ್ನು ಸಲ್ಲಿಸಲು ಆರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಆದರೆ 2025ರ ಜನವರಿ ಮಧ್ಯದಲ್ಲಿ ಗಡವು ಕೊನೆಗೊಂಡಿದೆ. ಇದೀಗ ಆಯೋಗವು ಹೆಚ್ಚಿನ ಸಮಯವನ್ನು ಕೋರಿದ್ದರಿಂದ, ಸರ್ಕಾರವು ಗಡುವನ್ನು ಇನ್ನೂ ನಾಲ್ಕೂವರೆ ತಿಂಗಳಿಗೆ ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾ | ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ

“ನಗರ ಸಂಸ್ಥೆಯಲ್ಲಿನ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಪಿ ಎನ್ ದೇಸಾಯಿ ಆಯೋಗದ ಗಡುವನ್ನು ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ” ಎಂದು ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ದೃಢಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...