ಮೈಸೂರು | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿತ

Date:

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿದಿದೆ.

ಕಾಲೇಜು ಶಿಕ್ಷಣ ಇಲಾಖೆಯು ಬುಧವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 79.89ರಿಂದ ಶೇ83.13ಕ್ಕೆ ಏರಿಕೆಯಾಗಿದೆ. ‌ರಾಜ್ಯದಲ್ಲಿ ಟಾಪ್‌ 10ರಲ್ಲಿ ಕಾಣಿಸಿಕೊಳ್ಳಬೇಕೆಂಬ ಮೈಸೂರು ಜಿಲ್ಲೆಯ ಕನಸು ಈ ಬಾರಿಯೂ ಈಡೇರಲಿಲ್ಲ.

ವಿಜ್ಞಾನ ವಿಭಾಗದಲ್ಲಿ ಕುವೆಂಪುನಗರದ ಆದಿಚುಂಚನಗಿರಿ ಪಿಯು ಕಾಲೇಜಿನ ಕೆ ಎಚ್ ಉರ್ವಿಶ್‌ ಪ್ರಶಾಂತ್‌ ಹಾಗೂ ಮೇಟಗಳ್ಳಿಯ ಆರ್‌ವಿಪಿಬಿ ಕಾಲೇಜಿನ ಜಾಹ್ನವಿ ತುಮಕೂರು ಗುರುರಾಜ್‌ ತಲಾ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉರ್ವಿಶ್ ಪ್ರಶಾಂತ್ ಅವರು ಕನ್ನಡ, ಇಂಗ್ಲಿಷ್, ಭೌತವಿಜ್ಞಾನದಲ್ಲಿ ತಲಾ 99, ರಸಾಯನ ವಿಜ್ಞಾನ, ಗಣಿತ ಹಾಗೂ ಜೀವವಿಜ್ಞಾನದಲ್ಲಿ 100 ಅಂಕ ಪಡೆದಿದ್ದಾರೆ. ಭಾರತೀಯ ತಾಂತ್ರಿಕ ಸಂಸ್ಥೆಯಲ್ಲಿ (ಐಐಟಿ) ಎಂಜಿನಿಯರಿಂಗ್ ಮಾಡಿ, ಇಸ್ರೊ ಸೇರುವ ಕನಸಿರುವುದಾಗಿ ಹೇಳಿಕೊಂಡಿದ್ದಾರೆ.

ಜಾಹ್ನವಿ ಅವರು ಸಂಸ್ಕೃತ, ಗಣಿತ, ಜೀವವಿಜ್ಞಾನ ಹಾಗೂ ರಸಾಯನ ವಿಜ್ಞಾನದಲ್ಲಿ ತಲಾ 100 ಅಂಕ, ಇಂಗ್ಲಿಷ್‌ನಲ್ಲಿ 99 ಮತ್ತು ಭೌತವಿಜ್ಞಾನದಲ್ಲಿ 98 ಅಂಕ ಗಳಿಸಿದ್ದಾರೆ. ಮಹಾರಾಣಿ ಪಿಯು ಕಾಲೇಜಿನ ಶ್ರೇಯಾ ಗಣೇಶ್ ಅಯ್ಯರ್ 5ನೇ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನಗರದ ಸದ್ವಿದ್ಯಾ ಪಿಯು ಕಾಲೇಜಿನ ಸ್ವಾತಿ ಎಸ್ ಭಟ್ 594 ಅಂಕಗಳೊಂದಿಗೆ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದು, ವ್ಯವಹಾರಿಕ ಅಧ್ಯಯನ, ಅಕೌಂಟೆನ್ಸಿ, ಗಣಿತ ಹಾಗೂ‌ ಸಂಸ್ಕೃತದಲ್ಲಿ ತಲಾ 100, ಇಂಗ್ಲಿಷ್‌ನಲ್ಲಿ 96, ಸಂಖ್ಯಾಶಾಸ್ತ್ರದಲ್ಲಿ 98 ಅಂಕ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಫಲಿತಾಂಶ ಹೆಚ್ಚಳ: “ಜಿಲ್ಲೆಯು ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ. ಶೇ.79.89ರಿಂದ ಶೇ.83.13ಕ್ಕೆ ಏರಿಕೆಯಾಗಿದೆ. ರ‍್ಯಾಂಕಿಂಗ್‌ನಲ್ಲಿ ಮಾತ್ರ 17ನೇ ಸ್ಥಾನ ಸಿಕ್ಕಿದೆ” ಎಂದು ಡಿಡಿಪಿಯು ಮರಿಸ್ವಾಮಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...