ಮೈಸೂರು | ಅತಿದೊಡ್ಡ ಆರ್ಥಿಕ ವ್ಯವಸ್ಥೆಗೆ ಮಹಿಳಾ ಉದ್ಯೋಗಿಗಳ ಹೆಚ್ಚಳ ಅವಶ್ಯಕ: ಶ್ರೀರಾಮ್ ರಂಗನಾಥನ್

Date:

ಭಾರತವು ಅತಿದೊಡ್ಡ ಅಥವಾ ಎರಡನೆಯ ದೊಡ್ಡ ಆರ್ಥಿಕ ವ್ಯವಸ್ಥೆಗೆ ಬಯಸಿದರೆ, ತನ್ನ ಮಹಿಳಾ ಉದ್ಯೋಗಿಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿಪ್ರೋ ಲಿಮಿಟೆಡ್ ಗ್ಲೋಬಲ್ ಟ್ಯಾಕ್ಸ್ ಮುಖ್ಯಸ್ಥ ಶ್ರೀರಾಮ್ ರಂಗನಾಥನ್ ಅಭಿಪ್ರಾಯಪಟ್ಟರು.

ಮೈಸೂರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್‌ಮೆಂಟ್‌ ಡೆವಲಪ್‌ಮೆಂಟ್‌ ಸಂಸ್ಥೆಯವರು ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್(ಬಿಸಿಐಸಿ) ಸಹಯೋಗದೊಂದಿಗೆ ಆಯೋಜಿಸಿದ್ದ “ಕಾರ್ಪೊರೇಟ್ ಹಣಕಾಸು ಮತ್ತು ಹಣಕಾಸು ಮಾರ್ಕೆಟ್‌ಗಳಲ್ಲಿನ ಉದಯೋನ್ಮುಖ ಪ್ರವೃತ್ತಿಗಳು” ವಿಷಯ ಕುರಿತ 12ನೇ ಅಂತಾರಾಷ್ಟ್ರೀಯ ಆರ್ಥಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಹಾನಗರಗಳಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿದೆ. ಆದರೆ ರಾಷ್ಟ್ರಮಟ್ಟದಲ್ಲಿ ಈ ಏರಿಕೆಯು ಕಡಿಮೆಯಿದೆ. ಭಾರತದ ಆರ್ಥಿಕ ಮಟ್ಟ ಉತ್ತಮವಾಗಲು ಈ ಅಂತರವನ್ನು ಕಡಿಮೆ ಮಾಡಿಕೊಳ್ಳಬೇಕು. ನಮ್ಮ ದೇಶದ ಜನಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡರೆ, ಮಹಿಳಾ ಕಾರ್ಯಪಡೆಯ ಈಗಿನ ಸಂಖ್ಯೆ ಕಡಿಮೆ. ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಂಡು, ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗುವತ್ತ ಮುಂದುವರೆಯಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಬಂಡವಾಳ ಮಾರುಕಟ್ಟೆಗಳ ವಿಕಾಸ, ವಿದೇಶಿ ಬಂಡವಾಳ ಹೂಡಿಕೆಗಳ ಚಂಚಲತೆಯ ವಿರುದ್ಧ ಸ್ಥಿರತೆ ಒದಗಿಸುವಲ್ಲಿ ದೇಶೀಯ ಹಣಕಾಸು ಸಂಸ್ಥೆಗಳ ಪ್ರಾಮುಖ್ಯತೆ, ಜಾಗತಿಕ ಅನಿಶ್ಚಿತತೆ ಈ ಸಂದರ್ಭದಲ್ಲಿ ಭಾರತೀಯ ಮಾರುಕಟ್ಟೆಯ ಚೇತರಿಕೆಯು ಭವಿಷ್ಯದ ಬೆಳವಣಿಗೆಯ ಧನಾತ್ಮಕ ಲಕ್ಷಣವಾಗಿದೆ. ಆರ್ಥಿಕತೆಯ ಭವಿಷ್ಯವನ್ನು ರೂಪುಗೊಳಿಸುವಲ್ಲಿ ಆಧುನಿಕ ಬುದ್ಧಿಮತ್ತೆಯ ಪಾತ್ರದ ಒಳನೋಟ ಬಹುಮುಖ್ಯ” ಎಂದರು.‌

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಅಸೋಸಿಯೇಟ್ ಪ್ರೊಫೆಸರ್ ಡಾ ಶ್ರೀರಾಮ್ ಅವರು ಆರ್ಥಿಕ ವಿಷಯ ಹಾಗೂ ಜಾಗತಿಕ ಸವಾಲುಗಳ ನಡುವೆ ಭಾರತೀಯ ಆರ್ಥಿಕ ಮಾರುಕಟ್ಟೆಯ ಅಭಿವೃದ್ಧಿಗೆ ಅನುಕೂಲಕರ ಅಂಶಗಳ ಬಗ್ಗೆ ಮಾತನಾಡಿದರು.

ಪ್ರಾಧ್ಯಾಪಕರು ಮತ್ತು ಡೀನ್ ಅಂತಾರಾಷ್ಟ್ರೀಯ ಸಂಬಂಧಗಳು, ಎಸ್‌ಡಿಎಂಐಎಂಡಿ ಡಾ ಮೌಸುಮಿ ಸೇನ್ ಗುಪ್ತರವರು, ಹಣಕಾಸು ವಿನಿಮಯದ ಡಿಜಿಟಲೀಕರಣ, ಅದರ ಮಹತ್ವ ಹಾಗೂ ಆರ್ಥಿಕ ಒಳಗೊಳ್ಳುವಿಕೆಯ ಬಗ್ಗೆ ಮಾತನಾಡಿದರು.

ದೇಶದ ವಿವಿಧ ಭಾಗಗಳಿಂದ ಸಮ್ಮೇಳನಕ್ಕೆ ಆಗಮಿಸಿರುವ ತಜ್ಞರು, ಅಸೋಸಿಯೇಟ್ ಪ್ರೊಫೆಸರ್, ಲೇಖಕ ಡಾ ಎಸ್ ಕಣ್ಣದಾಸ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...