ಮೈಸೂರು | ಕರ್ತವ್ಯಲೋಪ; ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತ್ತು

Date:

ಮೈಸೂರಿನ ಹೊರ ವಲಯದಲ್ಲಿ ಮಾದಕ ವಸ್ತು ತಯಾರಿಸುತಿದ್ದ ಘಟಕದ ಮೇಲೆ ಭಾನುವಾರ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದ ಪ್ರಕರಣದಲ್ಲಿ, ಕರ್ತವ್ಯಲೋಪ ಎಸಗಿರುವ ನರಸಿಂಹರಾಜ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಮಾದಕ ವಸ್ತು ತಯಾರಿಕಾ ಘಟಕ ನಡೆಸುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬೆಂಗಳೂರು, ಮಂಗಳೂರು, ಬೆಳಗಾವಿ ಬಳಿಕ ಮೈಸೂರಿನಲ್ಲಿ ಡ್ರಗ್ಸ್ ಜಾಲದ ನಂಟು ಬಯಲಾಗಿದೆ. ಖಚಿತ ಸುಳಿವಿನ ಮೇರೆಗೆ ಮಹಾರಾಷ್ಟ್ರ ಪೊಲೀಸರು ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 13 ಕೆಜಿ ಎಂಡಿಎಂಎ, 50 ಕೆಜಿ ದ್ರವರೂಪದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸರಿ ಸುಮಾರು 100 ಕೋಟಿ ಎನ್ನಲಾಗಿದೆ.

ಮೈಸೂರಿನ ತಯಾರಿಕಾ ಘಟಕದಿಂದ ಮಹಾರಾಷ್ಟ್ರಕ್ಕೆ ಡ್ರಗ್ಸ್ ಪೂರೈಕೆಯಾಗಿತಿತ್ತು. ಪೊಲೀಸರು ಈ ಸಂಭಂದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯರಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರ ಮೂಲದವರೆನ್ನಾಲಾಗಿದೆ. ಮಹಾರಾಷ್ಟ್ರ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಡ್ರಗ್ಸ್ ಪೆಡ್ಲರ್ ಮೈಸೂರಿನಿಂದ ಡ್ರಗ್ಸ್ ಪೂರೈಕೆಯಾಗುತ್ತಿರುವುದರ ಬಗ್ಗೆ ಮಾದಕ ವಸ್ತು ನಿಗ್ರಹ ದಳದ ಪೊಲೀಸರಿಗೆ ಮಾಹಿತಿ ನೀಡಿದ್ದನೆನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಭಿನ್ನ ಸಾಹಿತ್ಯಕ್ಕೆ ಓದುಗರ ಪಡೆ ಇದ್ದೇ ಇರುತ್ತದೆ : ಸುತ್ತೂರು ಶ್ರೀ

ನರಸಿಂಹರಾಜ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ರನ್ನು ಕರ್ತವ್ಯಲೋಪದಡಿ ಅಮಾನತ್ತುಗೊಳಿಸಿ, ಸದರಿ ಸ್ಥಾನಕ್ಕೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಶಬ್ಬೀರ್ ಹುಸೇನ್ ಅವರನ್ನು ಪ್ರಬಾರ ಇನ್ಸ್ಪೆಕ್ಟರ್ ಆಗಿ ನೇಮಕ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...