ಮೈಸೂರು | ಸಂಗೀತ – ಸಾಹಿತ್ಯದ ಮಿಲನ; ಜನರಲ್ಲಿ ಪ್ರೀತಿ, ಸೌಹಾರ್ದತೆ, ಜನಜೀವನವನ್ನು ಉಲ್ಲೇಖಿಸುವ ಕ್ಷೇತ್ರ : ವೈ ಕೆ ಮುದ್ದುಕೃಷ್ಣ

Date:

ಮೈಸೂರಿನ ಕಲಾ ಮಂದಿರದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ʻ ಗೀತೋತ್ಸವ-2025 ʼ ರ ರಾಜ್ಯ ಮಟ್ಟದ ಸುಗಮ ಸಂಗೀತ ಸಮ್ಮೇಳನದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಅಧ್ಯಕ್ಷರಾದ ವೈ ಕೆ ಮುದ್ದುಕೃಷ್ಣ ಮಾತನಾಡಿ ‘ ಸಂಗೀತ ಹಾಗೂ ಸಾಹಿತ್ಯದ ಮಿಲನ ಜನರಲ್ಲಿ ಪ್ರೀತಿ, ಸೌಹಾರ್ದತೆ, ಜನಜೀವನವನ್ನು ಉಲ್ಲೇಖಿಸುವ ಕ್ಷೇತ್ರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

” ಸಾಹಿತ್ಯ ಎಲ್ಲಿರುತ್ತದೆ ಅಲ್ಲಿ ಖಂಡಿತವಾಗಿ ಜಾನಪದ ಇರುತ್ತದೆ. ಜಾನಪದವೇ ಸಾಹಿತ್ಯದ ಬೇರು. ಓದಲು, ಬರೆಯಲು ಬಾರದ, ಅಕ್ಷರದ ಜ್ಙಾನವೇ ಇಲ್ಲದ ನಮ್ಮ ಪೂರ್ವಜರು ತಮ್ಮ ಜೀವನ ಶೈಲಿಯ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ರಾಷ್ಟ್ರಕವಿ ಕುವೆಂಪು , ಬೇಂದ್ರೆಯವರು ಸೇರಿದಂತೆ ಸಾಹಿತ್ಯ ಲೋಕದ ಅನೇಕ ದಿಗ್ಗಜರು ಜನಜೀವನವನ್ನು ಸಾಹಿತ್ಯಗಳಾಗಿ ಪರಿವರ್ತಿಸಿ ಲೋಕದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. “

” ಸಾಹಿತ್ಯದ ಜೊತೆಗೆ ಸಂಗೀತ ಸೇರಿ ಕೇಳುಗರಿಗೆ ಮುದವನ್ನು ನೀಡುವ ಪ್ರಯತ್ನ ಒಂದಡೆಯಾದರೆ, ಅವರ ಬದುಕಿನ ಸಂಕಷ್ಟಗಳ ಜೊತೆಗೆ ಮಿಲನವಾಗಿ ಅವರ ಪ್ರೀತಿ, ಉತ್ಸಾಹ, ಸೌಹಾರ್ದ ಬದುಕಿಗೆ ಪ್ರೇರಣೆಯಾಗಿದೆ. ಇಂತಹ ಸುಗಮ ಸಂಗೀತ ಕ್ಷೇತ್ರಕ್ಕೆ ವ್ಯಾಪಕ ಬೆಂಬಲ ದೊರೆತದ್ದು ಮೈಸೂರು ಅರಸರಿಂದ. ರಾಜಾಶ್ರಯದಿಂದ ಬೆಳದ ಈ ಸಂಗೀತ ಹಾಗೂ ಸಾಹಿತ್ಯ ಕ್ಷೇತ್ರ ಹೆಚ್ಚು ಅಭ್ಯುದಯವನ್ನು ಕಂಡು ಸಮಾಜವನ್ನು ತಿದ್ದಿ, ಯುವ ಸಮಾಜವನ್ನು ಸರಿದಿಕ್ಕಿನಲ್ಲಿ ಕೊಂಡೊಯ್ಯುವಲ್ಲಿ ಮತ್ತು ಸ್ವಾತಂತ್ರ್ಯದ ಉದ್ದೇಶ, ಸಂವಿಧಾನದ ಆಶಯ ಅರ್ಥೈಸಿ ಬಹುತ್ವವನ್ನು ರಕ್ಷಣೆ ಮಾಡುತ್ತಿದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಮಾತನಾಡಿ ” ಸುಗಮ ಸಂಗೀತವನ್ನು ಪ್ರೋತ್ಸಾಹಿಸುವ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ಕಾರ್ಯಕ್ರಮಕ್ಕೆ ₹25 ಲಕ್ಷ ಅನುದಾನವನ್ನು ಒದಗಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಮ ತೆಗೆದುಕೊಳ್ಳಲಾಗುವುದು ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ‘ ಕಲಾ ತರಬೇತಿ – 2025 ‘ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಮಹದೇವಪ್ಪ

ಕಾರ್ಯಕ್ರಮದಲ್ಲಿ ಪದ್ಮಭೂಷಣ ಡಾ. ಚಂದ್ರಶೇಖರ ಕಂಬಾರ, ಉಪ ಕುಲಪತಿ ನಾಗೇಶ್ ಬೆಟ್ಟಕೋಟೆ, ಶ್ರೀನಿವಾಸ ಉಡುಪ, ಕಿಕ್ಕೇರಿ ಕೃಷ್ಣಮೂರ್ತಿ, ನ್ಯಾಯಮೂರ್ತಿ ಗೋಪಾಲಗೌಡ, ಶ್ರೀನಿವಾಸ ಉಡುಪ, ಡಾ. ಸಿದ್ದಲಿಂಗಪಟ್ಟಣ ಶೆಟ್ಟಿ,ಎನ್ ಎಸ್. ಪ್ರಸಾದ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...