ಮೈಸೂರು | ಜನವಸತಿ ಪ್ರದೇಶದಲ್ಲಿ ಹುಲಿಯಿರುವುದು ಅಸ್ಪಷ್ಟ: ಸಿಬ್ಬಂದಿಗಳು ಹೈರಾಣು

Date:

ಮೈಸೂರು ತಾಲೂಕಿನ ಜನವಸತಿ ಪ್ರದೇಶಗಳ ಬಳಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಬ್ಯಾತಹಳ್ಳಿ ಬಳಿ ಹುಲಿ ಕಾಣಿಸಿಕೊಂಡು ಸುಮಾರು ಎರಡು ತಿಂಗಳು ಕಳೆದಿದ್ದು, ನವೆಂಬರ್ ಅಂತ್ಯದಿಂದ ಅದರ ಸುಳಿಲು ಸಿಕ್ಕಿಲ್ಲ. ಒಂದು ವಾರದ ಹಿಂದೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವ ನಗರದ ಬಳಿ ಮತ್ತೊಂದು ಹುಲಿ ಸಿಸಿಟಿವಿಗೆ ಕಾಣಿಸಿಕೊಂಡಿದ್ದು, ಕಾಲುವೆಯ ಬಳಿ ಅದರ ಹೆಜ್ಜೆ ಗುರುತುಗಳೂ ಕಂಡುಬಂದಿವೆ.

“ಹೆಜ್ಜೆಗುರುತುಗಳನ್ನು ಗಮನಿಸಿದರೆ ಸುಮಾರು ಎರಡು ವರ್ಷ ವಯಸ್ಸಿನ ಹುಲಿಯಿರಬಹುದು ಎಂಬುದು ತಿಳಿಯುತ್ತದೆ. ಇಲಾಖೆಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಹುಲಿಗಳು ಈವರೆಗೆ ಪತ್ತೆಯಾಗಿಲ್ಲ. ಹುಲಿಗಳು ಅರಣ್ಯ ಪ್ರದೇಶಗಳಿಗೆ ಮರಳಿರಬಹುದು ಅಥವಾ ಹೊಲಗಳಲ್ಲಿ ಅಡಗಿರಬಹುದು” ಎಂದು ಕೆಲವು ಅಧಿಕಾರಿಗಳು ವಾದಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಲಿಗಳು ಈವರೆಗೆ ಜಾನುವಾರುಗಳನ್ನು ಕೊಂದಿರುವ ಯಾವುದೇ ಘಟನೆಗಳು ನಡೆದಿಲ್ಲ. ಜತೆಗೆ ಈ ಹುಲಿಗಳನ್ನು ಯಾರೂ ನೋಡಿದ ವರದಿಗಳಿಲ್ಲ. ಆದರೂ ಸಿಬ್ಬಂದಿಗಳನ್ನು ಅವುಗಳನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

“ಹುಲಿಗಳನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಇಲಾಖೆ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ. ಹುಲಿ ಇರುವುದು ಎರಡು ಬಾರಿ ಕಾಣಿಸಿಕೊಂಡ ನಂತರ ಮತ್ತು ಹೆಜ್ಜೆ ಗುರುತುಗಳು ಕಂಡುಬಂದ ನಂತರ, ಅವುಗಳನ್ನು ಮೊದಲು ನೋಡಿದ ಪ್ರದೇಶಗಳಲ್ಲಿ ನೋಡಲಾಗುವುದಿಲ್ಲ. ಮೈಸೂರು ವೃತ್ತವು ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಒಳಗೊಂಡಿದೆ” ಎಂದು ಅರಣ್ಯ ಸಂರಕ್ಷಣಾಧಿಕಾರಿ (ಮೈಸೂರು ವೃತ್ತ) ಮಾಲತಿ ಪ್ರಿಯಾ ಹೇಳಿದ್ದಾರೆ.

“ಚಿರತೆ ಕಾರ್ಯಪಡೆಯ ಸಿಬ್ಬಂದಿ ಈ ಪ್ರದೇಶದಲ್ಲಿ ದಿನದ 24 ಗಂಟೆಯೂ ಕಣ್ಗಾವಲು ಇಡುತ್ತಿದ್ದಾರೆ. ಬೋನುಗಳನ್ನು ಇಡುವುದರ ಜೊತೆಗೆ ಅವುಗಳನ್ನು ಪತ್ತೆಹಚ್ಚಲು ಥರ್ಮಲ್ ಡ್ರೋನ್‌ಗಳಂತಹ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಈವರೆಗೆ, ಈ ಸ್ಥಳಗಳಲ್ಲಿ ಹುಲಿಗಳು ಜಾನುವಾರುಗಳನ್ನು ಕೊಂದಿರುವ ಬಗ್ಗೆ ಗ್ರಾಮಸ್ಥರಿಂದ ಯಾವುದೇ ಮಾಹಿತಿ ಬಂದಿಲ್ಲ” ಎಂದು ಮಾಲತಿ ಹೇಳಿದರು.

“ಶ್ರೀರಂಗಪಟ್ಟಣದ ಅಧಿಕಾರಿಯೊಬ್ಬರು 4 ಕಿ.ಮೀ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳನ್ನು ಕೂಂಬಿಂಗ್ ಮಾಡಿದರು. ಆದರೆ ಕೆಲವು ದಿನಗಳಿಂದ ಹುಲಿ ಕಾಣಿಸಲಿಲ್ಲ. ಕುರಿ ಮಾಲೀಕರು ತಮ್ಮ ಹಿಂಡಿನಿಂದ ಯಾವುದೇ ಕುರಿಗಳನ್ನು ಕಳೆದುಕೊಂಡಿದ್ದಾರೆಯೇ ಎಂದು ತಿಳಿಯಲು ನಾವು ಸುತ್ತಮುತ್ತಲಿನ ಕುರಿಗಾಹಿಗಳನ್ನು ವಿಚಾರಿಸುತ್ತಿದ್ದೇವೆ. ಸ್ಥಳೀಯ ಪೊಲೀಸರೂ ಕೂಡ ಚನ್ನನಹಳ್ಳಿ, ಮಹದೇವಪುರ, ಬಿದರಹಳ್ಳಿ ಮತ್ತು ತಾರಿಪುರ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಒಂದು ವಾರದ ಹಿಂದೆ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಪ್ರಕಟಣೆಗಳನ್ನು ಮಾಡಲಾಗಿತ್ತು. ಆದರೆ, ಜನರು ಯಾವುದೇ ಭಯವಿಲ್ಲದೆ ಎಂದಿನಂತೆ ಓಡಾಡುತ್ತಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ʼಸಂವಿಧಾನ ಸಮರ್ಪಣೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಗೂ ಸಮಾನತೆ ದೊರಕಿದ ದಿನʼ

“ಮಹದೇವಪುರದಿಂದ ಸುಮಾರು 8 ಕಿಮೀ ದೂರದಲ್ಲಿರುವ ತಮ್ಮ ಗ್ರಾಮದ ಬಳಿ ಹುಲಿಯನ್ನು ನೋಡಿದ್ದಾರೆ. ಆ ಹುಲಿ ಹಸುವನ್ನು ಗಾಯಗೊಳಿಸಿದೆ ಎಂದು ತಡಗವಾಡಿ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಕರೆಸಿದ್ದಾರೆ. ಆದರೆ, ಪರಿಶೀಲನೆ ವೇಳೆ ನಮಗೆ ಯಾವುದೇ ಹೆಜ್ಜೆ ಗುರುತುಗಳು ಕಂಡುಬಂದಿಲ್ಲ. ಆದರೂ ಮುನ್ನೆಚ್ಚರಿಕೆಯಾಗಿ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು.

“ಈ ಪ್ರದೇಶವು ಕಬ್ಬಿನ ಗದ್ದೆಗಳು ಮತ್ತು ಪೊದೆಗಳಿಂದ ಕೂಡಿದ ಬಯಲು ಪ್ರದೇಶವಾಗಿದೆ. ಇದು ಹುಲಿ ಪೊಟರೆಗಳನ್ನು ಮಾಡಿಕೊಳ್ಳಲು ಸೂಕ್ತ ಸ್ಥಳಗಳಾಗಿವೆ. ಈವರೆಗೆ ಯಾವುದೇ ದೃಶ್ಯ, ಹೆಜ್ಜೆಗುರುತುಗಳು ಅಥವಾ ಯಾವುದೇ ಹತ್ಯೆಗಳಂತಹ ಘಟನೆಗಳು ನಡೆದಿಲ್ಲ. ಆದರೆ ಜನರು ಇನ್ನೂ ಭಯಭೀತರಾಗಿದ್ದಾರೆ” ಎಂದು ಮೈಸೂರು ತಾಲೂಕಿನ ಚಿಕ್ಕಕನ್ಯ ಗ್ರಾಮಸ್ಥರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...