ಮೈಸೂರು | ಅಂಬೇಡ್ಕರ್ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ದೇಶಕ್ಕೆ ಒಳಿತು: ಶಂಕರ ದೇವನೂರು

Date:

ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಕೇವಲ ಆಚರಣೆಗಳಿಗೆ ಮಾತ್ರ ಸೀಮಿತಗೊಳಿಸಬಾರದು. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡರೆ ದೇಶಕ್ಕೆ ಒಳಿತು ಎಂದು ಸಂಸ್ಕೃತಿ ಚಿಂತಕ ಹಾಗೂ ವಿಶ್ರಾಂತ ಮುಖ್ಯ ಅಭಿಯಂತರರಾದ ಶಂಕರ ದೇವನೂರು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಅಂಬೇಡ್ಕರ್‌ ಅವರು ಯಾವುದೇ ಒಂದು ಜಾತಿಗಾಗಿ ಹೋರಾಟ ಮಾಡಿದವರಲ್ಲ. ಈ ದೇಶದ ಶೋಷಿತ ಸಮುದಾಯಕ್ಕೆ ಕೊಟ್ಟಂತಹ ಕೊಡುಗೆ ಅಪಾರ. ಅಲ್ಲದೆ ಈ ದೇಶದ ಮಹಿಳೆಯರು, ದಲಿತರು, ಕಾರ್ಮಿಕರು, ಹಿಂದುಳಿದ ವರ್ಗಗಳ ಏಳಿಗೆಗಾಗಿ ಬದುಕಿರುವವರೆಗೂ ಶ್ರಮಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಸಂವಿಧಾನ ಸಂವಿಧಾನದ ಮೂಲಕ ಕಲ್ಪಿಸಿದ್ದು, ಎಲ್ಲರಲ್ಲೂ ಭ್ರಾತೃತ್ವ ಭಾವನೆಗಳು ಮೂಡಿ ಪ್ರೀತಿಯಿಂದ ಬದುಕುವಂತಹ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅಂಬೇಡ್ಕರ್‌ ಜಯಂತಿ ಯುವರಾಜ ಕಾಲೇಜು

“ಮಹಿಳೆಯರ ಹಕ್ಕು ಮತ್ತು ರಕ್ಷಣೆಗಾಗಿ ರಚಿಸಿದ್ದ ಹಿಂದೂ ಕೋಡ್ ಬಿಲ್ ಅನ್ನು ಪಾರ್ಲಿಮೆಂಟ್‌ನಲ್ಲಿ ಮಂಡಿಸಿದರು. ಆದರೆ ಆ ಮಸೂದೆಯನ್ನು ಜಾರಿಗೊಳಿಸಲು ಒಪ್ಪಿಗೆ ಸಿಗಲಿಲ್ಲವೆಂಬ ಕಾರಣಕ್ಕೆ ತನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಏಕೈಕ ಧೀಮಂತ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾತ್ರ” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಡಾ. ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅನಾವರಣ

ಆಡಳಿತಾಧಿಕಾರಿ ಕೆ ಅಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲರು ಎಸ್ ಮಹದೇವಮೂರ್ತಿ ಅಧ್ಯಕ್ಷತೆಯ ಭಾಷಣವನ್ನು ನುಡಿದರು.

ಕಾರ್ಯಕ್ರಮದಲ್ಲಿ ಪ್ರೊ. ಕೃಷ್ಣಮೂರ್ತಿ, ಪ್ರೊ. ಸಿ ನಾಗೇಶ್ ಬಾಬು, ಬಿ ಎಂ ವೆಂಕಟೇಶ್, ಡಾ. ಎಂ ಕೆ ಗಿರೀಶ್ ಚಂದ್ರ, ಡಾ. ರವಿಚಂದ್ರನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...