‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

Date:

ಮೈಸೂರು ನಗರದ ಪುರಭವನದ ಮುಂಭಾಗದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಚಾಲನೆ ನೀಡಿದರು.

“ಭಾರತದ ಇಂದಿನ ರಾಜಕೀಯ ದುಃಸ್ಥಿತಿ ಅತೀವ ಆತಂಕಕ್ಕೆ ದೂಡಿದೆ. ಇದೇ ರೀತಿ ರಾಜಕೀಯ ಕೆಟ್ಟ ಪರಿಸ್ಥಿತಿಯಲ್ಲಿ ಸಾಗಿದರೆ ಹಸಿವು, ಅಸಮಾನತೆ ಮತ್ತು ಶೋಷಣೆಯಿಂದ ಬಿಡುಗಡೆ ಸಾಧ್ಯವೇ ಇಲ್ಲ. ಸುಳ್ಳು, ಅಸಹನೆ, ದ್ವೇಷಗಳಿಂದ ದೇಶ ಕಟ್ಟಲು ಸಾಧ್ಯವಿಲ್ಲ. ರಾಜಕೀಯ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ. ಅಲ್ಲದೆ, ಜನರ ಪರಿಸ್ಥಿತಿ ಉನ್ನತ ಮಟ್ಟಕ್ಕೆ ತರಲು ಸಾಧ್ಯವೇ ಇಲ್ಲ. ಇದನ್ನೆಲ್ಲ ಮನಗಂಡು ರಾಜ್ಯದಲ್ಲಿ’ಜಾಗೃತ ಕರ್ನಾಟಕ’ವು ಇದೀಗ ರಾಜಕೀಯ ಸಂಘಟನೆಯಾಗಿ ರೂಪುಗೊಂಡಿದೆ.

ಮಾಜಿ ಪೊಲೀಸ್ ಅಧಿಕಾರಿ ಸುಹೇಲ್ ಅಹಮದ್ ಅವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದಿದ ಕಾರ್ಯಕರ್ತರು “ರಾಜ್ಯದಲ್ಲಿ ಯುವಜನರನ್ನು ಒಳಗೊಂಡ ಪರ್ಯಾಯ ರಾಜಕಾರಣ, ಪ್ರಜಾಪ್ರಭುತ್ವ ಆಶಯದೊಂದಿಗೆ ಜನಪರವಾದ ಕೆಲಸ ಮಾಡುವ ಉದ್ದೇಶದಿಂದ ಜಾಗೃತ ಕರ್ನಾಟಕವನ್ನು ಇಂದು ರಾಜಕೀಯ ಸಂಘಟನೆಯಾಗಿ ಚಾಲನೆ ನೀಡಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಸಕ್ರಿಯವಾದ ರಾಜಕಾರಣ, ಯುವಜನರ ಒಳಗೊಳ್ಳುವಿಕೆ, ಸರ್ಕಾರಗಳ ಅನೀತಿಗಳ ವಿರುದ್ಧ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತ ಪರ್ಯಾಯ ರಾಜಕೀಯ ಶಕ್ತಿಯಾಗಿ ಮುಂದಿನ ದಿನಗಳಲ್ಲಿ ರೂಪಿಸಲಿದ್ದೇವೆ” ಎಂದರು.

ಇಂದು ಮೈಸೂರಿನಲ್ಲಿ ಚಾಲನೆ ನೀಡಿದ್ದೇವೆ ಇಡೀ ರಾಜ್ಯಾದ್ಯಂತ ಸದೃಢವಾದ ಕಾರ್ಯಕರ್ತರ ಪಡೆಯನ್ನು ರೂಪಿಸಿ, ರಾಜ್ಯದಲ್ಲಿ ಹೊಸದೊಂದು ರಾಜಕಾರಣಕ್ಕೆ ಭಾಷ್ಯ ಬರೆಯಲಿದ್ದೇವೆ ಎನ್ನುವ ಆಶಯ ನುಡಿಗಳನ್ನಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಡಾ ಬಾಬು ಜಗಜೀವನ ರಾಂ,ಡಾ ರಾಜ್ ಕುಮಾರ್ ಪ್ರತಿಮೆಗಳಿಗೆ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ

ಸುಬ್ರಹ್ಮಣ್ಯ, ಜಗದೀಶ್ ನಗರಕೆರೆ, ಚೇತನ್ ಕಾಗೆಪುರ, ಮಹೇಶ್ ಗೊರವನಹಳ್ಳಿ, ಮೋಹನ್ ಜಿ ಕೆ, ಮಂಡ್ಯ ನಾಗೇಶ್, ಸಂತೋಷ್, ಪೃಥ್ವಿರಾಜ್‌ ಬೊಪ್ಪ ಸಮುದ್ರ, ಕಿರಣ ಕನಕಪುರ, ರಾಘುರಾಮ್ ಬೆಂಗಳೂರು, ಜಗದೀಶ್ ನುಡಿ ಕರ್ನಾಟಕ, ಮಂಜುನಾಥ್ ಮಂಡ್ಯ, ಮಂಜುನಾಥ್ ಮಳವಳ್ಳಿ, ನವೀನ ಮಂಡ್ಯ, ಅಮೀರ್ ಅಮ್ಜ, ಸ್ವಾಮಿ ಹೊಂಗನೂರು, ಮಹದೇವ್ ಪ್ರಸಾದ್ ಹೊಂಗನೂರು, ಮಧು ಬಳ್ಳೂರು, ಕೃಷ್ಣಮೂರ್ತಿ ಚಂಗಚಹಳ್ಳಿ, ಹರೀಶ್ ಕುಮಾರ್ ಮೈಸೂರು, ಅಬ್ದುಲ್ಲ ಹಪೀಚ್, ದಿನೇಶ್ ರಾಮ ನಾಯಕ, ಈದಿನ.ಕಾಮ್ ವರದಿಗಾರ ಮೋಹನ್ ಮೈಸೂರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...