ಮೈಸೂರು | ನಾನಾ ರಾಜ್ಯಗಳ ರೈತ ಸಂಘದ ಮುಖಂಡರೊಂದಿಗೆ ‘ಕಾವೇರಿ ಸಮನ್ವಯ ಸಭೆ’

Date:

ಪ್ರಕೃತಿ ಒಲವು ತೋರಿದ ಸಂದರ್ಭದಲ್ಲಿ ಕಾವೇರಿ ವಿವಾದವಾಗದೆ ಒಬ್ಬರಿಗೊಬ್ಬರು ನೆಮ್ಮದಿ ಕಂಡುಕೊಂಡಿದ್ದೇವೆ. ಸಮಸ್ಯೆ ಇರುವುದು ಬರಗಾಲದ ಸಂದರ್ಭದಲ್ಲಿ ನಮಗೆ ಕುಡಿಯಲು ನೀರಿಲ್ಲದ ಸಂದರ್ಭದಲ್ಲಿ  ಬೆಳೆಗೆ ನೀರು ಕೊಡಿ ಎಂದಾಗ ನಮಗೆ ಧರ್ಮ ಸಂಕಟವಾಗುತ್ತದೆ. ಉದ್ದೇಶಿತ ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ನಾಲ್ಕು ರಾಜ್ಯಗಳ ಬೇಡಿಕೆ ಬಗೆ ಹರಿದು ಸೌಹಾರ್ದಯುತ ವಾತಾವರಣ ನಿರ್ಮಾಣವಾಗುತ್ತದೆ. ಇದಕ್ಕೆ ಕಾವೇರಿ ಕುಟುಂಬ ಒಟ್ಟಾಗಿ ಪ್ರಯತ್ನಿಸಿದರೆ ದಶಕಗಳ ಸಮಸ್ಯೆ ಪರಿಹಾರವಾಗಲಿದೆ ಎಂದು ರೈತ ನಾಯಕ ಕುರುಬೂರು ಶಾಂತಕುಮಾರ್ ಹೇಳಿದರು.

ಅವರು ಅ.22ರ ಮಂಗಳವಾರ ಮೈಸೂರಿನ ತೋಟಗಾರಿಕೆ ಇಲಾಖೆಯ ಸಭಾಂಗಣದಲ್ಲಿ ಕರ್ನಾಟಕ-ತಮಿಳುನಾಡು-ಕೇರಳ-ಪಾಂಡಿಚೇರಿ ರಾಜ್ಯಗಳ ರೈತ ಸಂಘಗಳ ನಿಯೋಗದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾವೇರಿ ಸಮನ್ವಯ ಸಭೆಯಲ್ಲಿ ಮಾತನಾಡಿದರು.

1002120550

ಇದರಲ್ಲಿ ತಮಿಳುನಾಡಿನ ತಮಿಜಗ ಕಾವೇರಿ ಫಾರ್ಮರ್ಸ್ ಅಸೋಸಿಯೇಷನ್ ಸಂಘಟನೆಯ ಪಿ.ಆರ್ ಪಾಂಡೊಯನ್ , ಕೇರಳದ ಬಿಜು ನೇತೃತ್ವದ ರೈತ ಸಂಘಟನೆಯ ರೈತರು ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಯ ರೈತರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನಗರ ಜಿಲ್ಲೆಯ ರೈತರ ನಿಯೋಗದ ಪರವಾಗಿ ಭಾಗವಹಿಸಿದ್ದ ಪ್ರಶಾಂತ್ ಹೊಸದುರ್ಗ ಮಾತನಾಡಿ ನಮ್ಮ , ನೆಲ, ಜೀವರಾಶಿ, ಅರಣ್ಯ ಸಂಪತ್ತು, ಧನ ಸಂಪತ್ತು, ಜನ ಜೀವನ ಎಲ್ಲವನ್ನೂ ನಾವು ನಿಮಗಾಗಿ  ಕಳೆದುಕೊಂಡು ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿದರೆ , ವ್ಯರ್ಥವಾಗಿ ಹೋಗುವ ನೀರನ್ನು ಸಂರಕ್ಷಿಸಿಕೊಂಡು ನಿಮಗೆ ನೀಡಲು ಸಿದ್ದವಿದ್ದೇವೆ. ಇದರ ಬಹುಪಾಲು ಫಲಾನುಭವಿಗಳು ನೀವೇ ಆಗಿರುವಿರಿ. ನಮ್ಮ ತಾತ, ತಂದೆ ಕಾಲದಲ್ಲಿ ಪರಿಹಾರ ಕಾಣದೆ ಬಸವಳಿದು ನಾವು ಉಂಡ ನೋವನ್ನು ನಮ್ಮ ಮಕ್ಕಳಿಗೆ ಉಳಿಸಿ ಹೋಗಲು ಸಾಧ್ಯವಿಲ್ಲ. ದಯವಿಟ್ಟು ಈ ಸೌಹಾರ್ದ ಸಭೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ಸಮ್ಮತಿ ಸೂಚಿಸಿದರೆ ಅದು ಕೇವಲ ಅಣೆಕಟ್ಟು ಎನಿಸಿಕೊಳ್ಳದೆ ಎರಡು ರಾಜ್ಯಗಳ ಶಾಂತಿ ಸೌಹಾರ್ದತೆಯ ಸೇತುವೆಯಾಗುತ್ತದೆ ಎಂದು ಪ್ರಾರ್ಥಿಸಿದರು.

1002120551

ಹಲವು ವರ್ಷಗಳ ಹಿಂದೆ ಕಾವೇರಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾವೇರಿ ಕುಟುಂಬ ಎಂಬ ಹೆಸರಿನಲ್ಲಿ ಒಂದುಗೂಡಿದ್ದ ನಾಲ್ಕು ರಾಜ್ಯಗಳ ರೈತರು ನಂತರದ ದಿನಗಳಲ್ಲಿ ಕಾವೇರಿ ವಿವಾದದ ಬಗ್ಗೆ ದೂರ ಉಳಿದಿದ್ದರು. ಈಗ ಸೌಹಾರ್ದ ವಾಗಿ ಬಗೆಹರಿಸುವ ನಿಟ್ಟಿನಲ್ಲಿ  ಎರಡನೇ ಬಾರಿ ಸಭೆ ಸೇರಲಾಗಿತ್ತು.

ಸಭೆಯಲ್ಲಿ ಕರ್ನಾಟಕದ ಪರ ರೈತ ನಾಯಕರು ಮೇಕೆದಾಟು ಯೋಜನೆ ಬಗ್ಗೆ ಸಹಕಾರ ಕೋರಿದರೆ, ತಮಿಳುನಾಡು ಹಾಗೂ ಪಾಂಡಿಚೆರಿಯ ರೈತ ನಾಯಕರು ಮೇಕೆದಾಟು ನಿರ್ಮಾಣ ಬೇಡ ಗಡಿಭಾಗದಲ್ಲಿ ರಾಶಿ ಮನಾಲ್ ಡ್ಯಾಮ್ ನಿರ್ಮಾಣಕ್ಕೆ ಸಹಕಾರ ಕೋರಿದರು. ಕೇರಳದ ರೈತರು ಹೆಚ್ಚಿನ ಟಿಎಂಸಿ ನೀರಿಗಾಗಿ ಬೇಡಿಕೆಯಿತ್ತರು. ಬುಧವಾರ ಈ ರೈತರ ನೇತೃತ್ವದ ನಿಯೋಗವು ಕನಕಪುರ ತಾಲೂಕಿನ ಉದ್ದೇಶಿತ ಮೇಕೆದಾಟು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ರಾಜ್ಯ ರೈತ ಸಂಘ ಕಗ್ಗಲೀಪುರ ವೃತ್ತದ ಅಧ್ಯಕ್ಷ ನದೀಂ ಪಾಷ, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಬಿ.ಎಂ ಪ್ರಕಾಶ್, ಗಜೇಂದ್ರ ಸಿಂಗ್, ಶ್ರೀನಿವಾಸ್, ಬಡಗಲಪುರ ನಾಗರಾಜು, ಮುಂತಾದವರು ಹಾಜರಿದ್ದರು.

1002120552
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...