ಮೈಸೂರು | ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಕುವೆಂಪುನಗರ ಎಸ್‌ಐ

Date:

ಪ್ರಕರಣವೊಂದಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರಿಂದ ಠಾಣೆಯೊಳಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೈಸೂರಿನ ಕುವೆಂಪುನಗರ ಪೊಲೀಸ್‌ ಠಾಣೆಯ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಅನ್ನು ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್‌ ಆಗಿ ಸೆರೆ ಹಿಡಿದಿದ್ದಾರೆ.

ಕುವೆಂಪುನಗರ ಠಾಣೆ ಎಸ್‌ಐ ರಾಧಾ ಸಿಕ್ಕಿಬಿದ್ದವರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮೈಸೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಹಣದೊಂದಿಗೆ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿತು. ಬಂಧಿತ ಎಸ್‌ಐ ರಾಧಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಲೋಕಾಯುಕ್ತ ಮೈಸೂರು ವಿಭಾಗದ ಎಸ್ಪಿ ಎಂ.ಎಸ್.ಸಜಿತ್‌ ತಿಳಿಸಿದ್ದಾರೆ.

ಮೈಸೂರಿನ ಕುವೆಂಪುನಗರ ಠಾಣೆ ವ್ಯಾಪ್ತಿಯ ವ್ಯಕ್ತಿಯೊಬ್ಬರ ಲಾಕರ್‌ ಅನ್ನು ಜಪ್ತಿ ಮಾಡಲಾಗಿತ್ತು. ಕೆಲ ದಿನಗಳ ಹಿಂದೆ ಲಾಕರ್‌ ವಿಚಾರದಲ್ಲಿ ದೂರು ದಾಖಲಾಗಿದ್ದರಿಂದ ಜಪ್ತಿಯಾಗಿತ್ತು. ಈ ಕುರಿತು ವಿಚಾರಣೆಯೂ ನಡೆಯುತ್ತಿದೆ. ಕುವೆಂಪುನಗರ ಠಾಣೆಯ ಈ ಪ್ರಕರಣದಲ್ಲಿ ತಮ್ಮ ಲಾಕರ್‌ ಅನ್ನು ವಾಪಾಸ್‌ ಪಡೆಯುವ ನಿಟ್ಟಿನಲ್ಲಿ ಕಾನೂನು ರೀತಿಯಲ್ಲಿ ಪ್ರಯತ್ನವೂ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
SI RADHA
ಕಣ್ಣೀರು ಹಾಕಿದ ಕುವೆಂಪುನಗರ ಠಾಣೆ ಎಸ್‌ಐ ರಾಧಾ

 

ಇದರ ನಡುವೆ ಲಾಕರ್‌ ನೀಡಲು ಒಂದು ಲಕ್ಷ ರೂ.ಗಳನ್ನು ಕುವೆಂಪುನಗರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಕೇಳಿದ್ದರು. ಆದರೆ 50 ಸಾವಿರ ರೂ.ಗೂ ಮಾತುಕತೆ ನಡೆದಿತ್ತು. ಹಣವನ್ನು ನೀಡಿದರೆ ಲಾಕರ್‌ ಬಿಡುಗಡೆ ಮಾಡಿಕೊಡುವುದಾಗಿ ಎಸ್‌ಐ ಭರವಸೆ ನೀಡಿದ್ದರು. ಠಾಣೆಗೆ ಅಲೆದು ಸುಸ್ತಾಗಿದ್ದ ವ್ಯಕ್ತಿ ಹಣಕ್ಕೆ ಒಪ್ಪಿಕೊಂಡು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಾಕರ್‌ ನೀಡುವ ವಿಚಾರದಲ್ಲಿ ಕುವೆಂಪುನಗರ ಎಸ್‌ಐ ರಾಧಾ ಅವರು ಹಣ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ಅದರಂತೆ ವ್ಯಕ್ತಿ ಗುರುವಾರ ಮಧ್ಯಾಹ್ನ ಲಾಕರ್‌ ಪಡೆಯಲು ಕುವೆಂಪುನಗರ ಠಾಣೆಗೆ ಆಗಮಿಸಿದ್ದರು. ಈ ವೇಳೆ ಠಾಣೆಯಲ್ಲಿಯೇ ಇದ್ದ ರಾಧಾ ಅವರು ವ್ಯಕ್ತಿಯಿಂದ 50 ಸಾವಿರ ರೂ.ಗಳನ್ನು ಪಡೆಯಲು ಮುಂದಾದರು. ಹಣವನ್ನು ಸ್ವೀಕರಿಸಿ ಇಟ್ಟುಕೊಳ್ಳುವ ಹೊತ್ತಿಗೆ ಮೈಸೂರು ವಿಭಾಗದ ಲೋಕಾಯುಕ್ತ ಎಸ್ಪಿ ಸಜಿತ್‌, ಡಿವೈಎಸ್ಪಿ ಮಾಲತೇಶ್‌, ಇನ್ಸ್‌ಪೆಕ್ಟರ್‌ ಕೃಷ್ಣಯ್ಯ ಹಾಗೂ ಸಿಬ್ಬಂದಿ ರೆಡ್‌ ಹ್ಯಾಂಡ್‌ ಆಗಿಯೇ ರಾಧಾ ಅವರನ್ನು ಹಿಡಿದರು.

ಈ ವೇಳೆ, “ಹಣ ನನ್ನದಲ್ಲ. ಅನಗತ್ಯವಾಗಿ ನನ್ನನ್ನು ಇದರಲ್ಲಿ ಸಿಲುಕಿಸಲಾಗಿದೆ” ಎಂದು ಕಣ್ಣೀರು ಕೂಡ ಹಾಕಿದರು. ಈ ವೇಳೆ ಎಸ್‌ಐ ಜೊತೆಗೆ ದೂರುದಾರ ಹಾಗೂ ಜತೆಗೆ ಹಣವೂ ಅಲ್ಲಿಯೇ ಇದ್ದುದರಿಂದ ಲೋಕಾಯುಕ್ತ ಪೊಲೀಸರು ಸಾಕ್ಷಿ ಸಮೇತ ಎಸ್‌ಐ ಅವರನ್ನು ಬಂಧಿಸಿದರು. ಅವರಿಂದ ಹೇಳಿಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಿಬ್ಬರಿಗೆ ಜಾಮೀನು

“ಲಾಕರ್‌ ಪಡೆಯುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇದನ್ನಾಧರಿಸಿ ಲೋಕಾಯುಕ್ತ ತಂಡ ದಾಳಿ ನಡೆಸಿ ಎಸ್‌ಐ ರಾಧಾ ಅವರನ್ನು ಬಂಧಿಸಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಯುತ್ತಿದೆ” ಎಂದು ಲೋಕಾಯುಕ್ತ ಎಸ್‌ಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...