ಮೈಸೂರು | ಭೂ ವಿವಾದ; ದಲಿತ ಮಹಿಳೆ ಪೂವಮ್ಮ ಬಂಗಾರುಗೆ ಭೂಮಿ ಹಸ್ತಾಂತರ

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹುಂಡಿಮಾಳ ಗ್ರಾಮದ ದಲಿತ ಮಹಿಳೆ ಪೂವಮ್ಮ ಬಂಗಾರು ಅವರಿಗೆ ಹುಣಸೂರು ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್ ಜಿಲ್ಲಾಧಿಕಾರಿ ಆದೇಶದನ್ವಯ ದಿನಾಂಕ-05-06-2025, ಗುರುವಾರ ಹೆಚ್.ಡಿ ಕೋಟೆ ತಾಲೂಕು ಪಡುಕೋಟೆ ಕಾವಲ್‌ ಸರ್ವೆ ನಂಬರ್‌ 1/363 ರ 4 ಎಕರೆ 38 ಗುಂಟೆ ಭೂಮಿಯನ್ನು ಹಸ್ತಾಂತರಿಸಿದರು.

ಹೆಚ್.ಡಿ ಕೋಟೆ ತಾಲ್ಲೂಕು ಪಡುಕೋಟೆ ಕಾವಲ್‌ ಸರ್ವೆ ನಂಬರ್‌ 1/363 ರ ಪೂವಮ್ಮ ಬಂಗಾರು ರವರಿಗೆ ಸೇರಿದ 4 ಎಕರೆ 38 ಗುಂಟೆ ಜಮೀನಿನ ವಿಚಾರದಲ್ಲಿ ಹಲವಾರು ವರ್ಷಗಳಿಂದ ವಿವಾದ ಉಂಟಾಗಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವ್ಯಾಜ್ಯ
ದಾಖಲಾಗಿತ್ತು.

ಮೈಸೂರು ಜಿಲ್ಲಾಧಿಕಾರಿಗಳ ಆದೇಶದನ್ವಯ ಹೆಚ್ಚಿನ ಪೊಲೀಸ್‌ ಬಂದೋಬಸ್ತಿನೊಂದಿಗೆ ಹುಣಸೂರು ಉಪ ವಿಭಾಗಾಧಿಕಾರಿ ವಿಜಯ್‌ ಕುಮಾರ್‌ ಜಮೀನಿಗೆ ಸ್ಥಳೀಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮಾಹಿತಿ ಪಡೆದು, ದಾಖಲೆಗಳನ್ನು ಪರಿಶೀಲಿಸಿ ಸದರಿ ಜಮೀನು ಪೂವಮ್ಮ ಬಂಗಾರು ಅವರಿಗೆ ಸೇರಿದೆ ಎಂಬುದನ್ನು ಖಾತರಿಪಡಿಸಿಕೊಂಡು ಭೂಮಿ ಸ್ವಾಧೀನಕ್ಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ಜಿಲ್ಲಾ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಮಾತನಾಡಿ ಹೆಚ್.ಡಿ.ಕೋಟೆ ತಾಲ್ಲೂಕು ಪಡುಕೋಟೆ ಕಾವಲ್‌ ಗ್ರಾಮದ ಸರ್ವೆ ನಂಬರ್‌ 1/363 ರಲ್ಲಿ 4 ಎಕರೆ 38 ಗುಂಟೆ ಜಮೀನು ಪರಿಶಿಷ್ಟ ಭೋವಿ ಜಾತಿಯ ಪೂವಮ್ಮ ಬಂಗಾರು ತಾಯಿಯ ಹೆಸರಿಗೆ ಸರ್ಕಾರದ ವತಿಯಿಂದ ಮಂಜೂರಾಗಿತ್ತು. ಅದರಂತೆ ಸದರಿ ಜಮೀನನ್ನು ಕುಟುಂಬದವರು ವ್ಯವಸಾಯ ಮಾಡಿಕೊಂಡು ಬರುತ್ತಿದ್ದರು.

ನಂತರದ ದಿನಗಳಲ್ಲಿ ಸದರಿ ಕುಟುಂಬ ಅಪಘಾತವೊಂದರಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ಸುದೀರ್ಘ ಚಿಕಿತ್ಸೆ ಪಡೆಯುವಂತಾಯಿತು. ಇದೇ ಸಂದರ್ಭವನ್ನೇ ದುರ್ಲಾಭ ಮಾಡಿಕೊಂಡ ಎಂ. ಕೆ. ಪೋತರಾಜ್‌ ಕಡೆಯವರಾದ ಎಂ.ಕೆ.ಶಿವಕುಮಾರ್‌, ಮ್ಯಾನೇಜರ್‌ ಬಸವರಾಜು, ಕಾಳಸ್ವಾಮಿ ಮುಂತಾದವರು ಜಮೀನನ್ನು ಆಕ್ರಮಿಸಿಕೊಂಡು ಕುಟುಂಬಕ್ಕೆ ಬೆದರಿಕೆ ಒಡ್ಡಿ, ಕೆಲವು ಬಾಡಿಗೆ ಗೂಂಡಾಗಳಿಂದ ಜೀವ ಬೆದರಿಕೆ ಹಾಕಿ ಜಮೀನನ್ನು ಕಬಳಿಸಿಕೊಳ್ಳಲು ಪ್ರಯತ್ನಪಡುತಿದ್ದರು.

ಹುಣಸೂರು ದಸಂಸ ಕಳೆದ 4 ವರ್ಷಗಳಿಂದ ಸತತವಾಗಿ ಹೋರಾಟ ಮಾಡಿ ಅನೇಕ ಎಸ್ಸಿ, ಎಸ್ಟಿ ಸಭೆಗಳಲ್ಲಿ ಪ್ರಸ್ತಾಪ ಮಾಡಿ ದೂರು ನೀಡದ್ದರು. ನಿರಂತರವಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಿದರ ಪರಿಣಾಮವಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿಯವರು ಈ ವಿಚಾರವಾಗಿ ಸುದೀರ್ಘವಾಗಿ ಚರ್ಚಿಸಿ ಅಧಿಕಾರಿಗಳಿಂದ ಜಂಟಿ ಸ್ಥಳ ತನಿಖೆ ಮಾಡಿಸಿ ವರದಿ ತರಿಸಿಕೊಂಡು 4 ಎಕರೆ 38 ಗುಂಟೆ ಜಮೀನು ಪೂವಮ್ಮ ಬಂಗಾರು ರವರಿಗೆ ಸೇರಿದ್ದೆಂದು ಖಾತರಿಪಡಿಸಿಕೊಂಡು ಸ್ವಾಧೀನ ನೀಡುವಂತೆ ಆದೇಶ ಮಾಡಿದ್ದರು.

ಅದರ ಅನ್ವಯ ಉಪ ವಿಭಾಗಾಧಿಕಾರಿ ವಿಜಯ್‌ ಕುಮಾರ್‌, ಆರಕ್ಷಕ ಉಪ ಅಧೀಕ್ಷಕ ಗೋಪಾಲಕೃಷ್ಣ, ಹೆಚ್.ಡಿ. ಕೋಟೆ ತಹಸೀಲ್ದಾರ್‌ ಶ್ರೀನಿವಾಸ್‌, ಎ.ಡಿ.ಎಲ್.ಆರ್‌ ಬಸವರಾಜು, ಸಮಾಜ ಕಲ್ಯಾಣಾಧಿಕಾರಿ ರಾಮುಸ್ವಾಮಿ, ಹೆಚ್.ಡಿ ಕೋಟೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಗಂಗಾಧರ್‌, ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌, ಮುನಿಯಪ್ಪ, ಟೌನ್‌ ಇನ್ಸ್‌ಪೆಕ್ಟರ್‌ ಸಂತೋಷ್‌ ಕಶ್ಯಪ್‌, ರಾಜಸ್ವ ನಿರೀಕ್ಷಕ ವಿಶ್ವನಾಥ್‌, ಗ್ರಾಮ ಆಡಳಿತಾಧಿಕಾರಿ ರಾಜೇಶ್ ಹೆಚ್ಚಿನ ಪೊಲೀಸ್‌ ಬಂದೋಬಸ್ತಿನಲ್ಲಿ ಜಮೀನನ್ನು ಸ್ವಾದೀನಕ್ಕೆ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ?ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ಜಿಲ್ಲಾ ಮಟ್ಟದ ಎಸ್ಸಿ, ಎಸ್ಟಿ ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯ ರವಿಕುಮಾರ್‌, ಅಹಿಂದ ಜವರಪ್ಪ,
ಹೆಚ್. ಬಿ. ದಿವಾಕರ್, ದೇವೇಂದ್ರ ಕುಳುವಾಡಿ, ಬಲ್ಲೇನಹಳ್ಳಿ ಕೆಂಪರಾಜು, ಚಿಲ್ಕುಂದ ವೇಣುಗೋಪಾಲ್‌, ಕಿರಿಜಾಜಿ ಗಜೇಂದ್ರ, ಮಲ್ಲಿಕ್‌ ಪಾಷ ಯಶೋಧರಪುರ, ಹುಂಡಿಮಾಳ ನಾಗರಾಜು, ಚನ್ನ ಕೋಟೆ, ಪಡುಕೋಟೆ ಗ್ರಾ.ಪಂ. ಸದಸ್ಯ ಈಶ್ವರ್‌, ಮಹೇಶ, ಕೃಷ್ಣ, ಕುಮಾರ, ಪ್ರವೀಣ, ಚೆಲುವ, ಮಾದೇವ, ಕಿರಣ್‌ ಸೇರಿದಂತೆ ಇನ್ನಿತರರು ಸ್ಥಳದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...