ಮೈಸೂರು | ಎಐ ತಂತ್ರಜ್ಞಾನ ಆಧಾರಿತ ‘ವೈಟಲ್ ವೀವ್ಸ್’ ಬಿಡುಗಡೆ

Date:

ಎಂಜಿ ಹೆಲ್ತ್ ಕೇರ್ ವತಿಯಿಂದ ಮನೆಯಲ್ಲಿರುವ ಡಾಕ್ಟರ್ ಶೀರ್ಷಿಕೆಯಡಿ ‘ವೈಟಲ್ ವೀವ್ಸ್’ ಎಂಬ ಎಐ ತಂತ್ರಜ್ಞಾನ ಆಧಾರಿತ ಮೆಡಿಕಲ್ ಮಾನಿಟರಿಂಗ್ ಉಪಕರಣವನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಾಯಿತು.

‘ವೈಟಲ್ ವೀವ್ಸ್’ ಮನುಷ್ಯನ ಹಾರ್ಟ್ ಬೀಟ್, ಬ್ಲಡ್ ಪ್ರೆಷರ್, ಪಲ್ಸ್ ರೇಟ್ ಇತ್ಯಾದಿ ಬದಲಾವಣೆಗಳನ್ನು ಮಾನಿಟರಿಂಗ್‌ ಮಾಡುವ ಎಐ ಆಧಾರಿತ ಸಾಧನವಾಗಿದ್ದು, ಆ ವ್ಯಕ್ತಿಯ ಹಿಂದಿನ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ತನ್ನಲ್ಲಿ ಸಂಗ್ರಹಿಸಿಟ್ಟಿರುತ್ತದೆ. ಇದು ರೋಗಿಯ ಸ್ಮಾರ್ಟ್ ಹೆಲ್ತ್ ಮಾನಿಟರಿಂಗ್ ಮಾಡಲು ಮತ್ತು ಆಸ್ಪತ್ರೆಯ ವೈದ್ಯಕೀಯ ದಾಖಲೆಗಳ ಸಂಗ್ರಹಣೆಗೆ ಸಹಕಾರಿಯಾಗಲಿದೆ.

ಸಿಇಓ ಗಣೇಶ್ ನಟೇಶನ್ ಮಾತನಾಡಿ, “ನಮ್ಮ ದೇಶದಲ್ಲಿ ವೈದ್ಯರು ಮತ್ತು ಜನರ ಅನುಪಾತದಲ್ಲಿ ದೊಡ್ಡ ಅಂತರವಿದೆ. ಇದರ ಜೊತೆಗೆ ಆಸ್ಪತ್ರೆಗಳ ಕಾರ್ಯನಿರ್ವಹಣೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ವೈದ್ಯಕೀಯ ಸಾಧನವನ್ನು ಅಭಿವೃದ್ದಿಗೊಳಿಸಲಾಗಿದೆ. ಇದು ಆಸ್ಪತ್ರೆಗಳ ಕಾರ್ಯನಿರ್ವಹಣೆಗೆ ಮತ್ತಷ್ಟು ಸಹಕಾರಿಯಾಗಲಿದೆ. ರೋಗಿಯ ಹಾಗೂ ಆಸ್ಪತ್ರೆಯ ದಾಖಲೆಗಳನ್ನು ಡಿಜಿಲಾಕರ್ ಮಾದರಿಯಲ್ಲಿ ಸಂಗ್ರಹಿಸಿಡಲು ವೈಟಲ್ ವೀವ್ಸ್ ಸಾಧನ ನೆರವಾಗಲಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಕೆಟಿಂಗ್ ಪಾಲುದಾರರಾದ ಸತ್ಯ ಶ್ರೀನಿವಾಸನ್ ಮಾತನಾಡಿ, “ವೈಟಲ್ ವೀವ್ಸ್ ಸಾಧನವು ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಡು ಸಹಕಾರಿಯಾಗಲಿದ್ದು, ಇದರ ಉಪಯೋಗದ ಕುರಿತಂತೆ ಸರ್ಕಾರದ ಜತೆ ಮಾತುಕತೆ ನಡೆಸಲಾಗಿದೆ‌. ಸಾಮಾನ್ಯವಾಗಿ 60 ವರ್ಷ ಮೇಲ್ಪಟ್ಟ ಕೆಲ ಹಿರಿಯ ನಾಗರಿಕರು ತಮ್ಮ ಆರೋಗ್ಯ ಸಮಸ್ಯೆಗಳ ಕುರಿತಂತೆ ವೈದ್ಯರು ಬಳಿ ಚರ್ಚಿಸಲು ಹಿಂಜರಿಯುತ್ತಾರೆ. ಇನ್ನೂ ಕೆಲವರಿಗೆ ತಮ್ಮ ಹಿಂದಿನ ಆರೊಗ್ಯ ಸಮಸ್ಯೆಗಳ ಬಗ್ಗೆ, ಪಡೆದ ಚಿಕಿತ್ಸೆಯ ಬಗ್ಗೆ
ನೆನಪಿರುವುದಿಲ್ಲ.‌ ಇಂತಹ ಸಂದರ್ಭದಲ್ಲಿ ಆ ರೋಗಿ ಈ ಹಿಂದೆ ಯಾವ ರೋಗಕ್ಕೆ ಚಿಕಿತ್ಸೆ ಪಡೆದಿದ್ದರು‌, ಅವರಿಗೆ ಯಾವ ಸಮಸ್ಯೆ ಇದೆ, ಯಾವ ಚಿಕಿತ್ಸೆ ನೀಡಬೇಕು ಎನ್ನುವ ಎಲ್ಲಾ ವೈದ್ಯಕೀಯ ದಾಖಲೆಗಳು ಡಿಜಿಟಲ್ ರೂಪದಲ್ಲಿದ್ದಾಗ ವೈದ್ಯರಿಗೆ ಮುಂದಿನ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮದ್ದೂರು | ನಗರಸಭೆಗೆ ಗ್ರಾ.ಪಂಗಳ ಸೇರ್ಪಡೆ ಕುರಿತಾಗಿ ಸರ್ಕಾರದ ಹಂತದಲ್ಲಿ ಮಾತುಕತೆ: ಎನ್ ಚಲುವರಾಯಸ್ವಾಮಿ

ಬಿಜೆಪಿ ಮುಖಂಡ ನಿಶಾಂತ್ ಶಿವಮೂರ್ತಿ ಮಾತನಾಡಿ, ವೈಟಲ್ ವೀವ್ಸ್ ಮೆಡಿಕಲ್ ಮಾನಿಟರಿಂಗ್ ಸಾಧನವು ಮೈಸೂರು ಜಿಲ್ಲಾಸ್ಪತ್ರೆಗಳಲ್ಲಿ ವೈದ್ಯಕೀಯ ದಾಖಲೆಗಳನ್ನು ಡಿಜಿಟಲೀಕರಣ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಜತೆಗೆ ರೋಗಿಗಳಿಗೆ ಇದರಿಂದ ಹೆಚ್ಚಿನ ಅನುಕುಲವಾಗಲಿದೆ. ಇಂತಹದೊಂದು ಪ್ರಯತ್ನವನ್ನು ಎಂಜಿ ಹೆಲ್ತ್ ಟೆಕ್ ಮಾಡುತ್ತಿರುವುದು ಶ್ಲಾಘನೀಯ, ಈ ಹೊಸ ಸಾಧನವು ವೈದ್ಯರ ಕಾರ್ಯನಿರ್ವಹಣೆಗೆ ಮತ್ತಷ್ಟು ಅನುಕೂಲವಾಗಲಿದೆ ಇಂತಹ ಸಾಧನಗಳ ಬಳಕೆಯಿಂದ ಆರೋಗ್ಯ ಸೇವೆ ಮತ್ತಷ್ಟು ಕೈಗೆಟಕುವಲ್ಲಿ ನೆರವಾಗಲಿದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...