ಮೈಸೂರು | ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಕೆ ಸೂಕ್ತ : ಎಚ್. ವಿ. ರಾಜೀವ್

Date:

ಮೈಸೂರು ವಿಶ್ವ ವಿದ್ಯಾಲಯದ ಯುವರಾಜ ಮತ್ತು ಮಹಾರಾಜ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ಇದೇ ಮೊದಲನೇ ಬಾರಿ ‘ ಆಲ್ ಇಂಡಿಯಾ ಆಲ್ ಸ್ಟೈಲ್ ಓಪನ್ ಫುಲ್ ಕಾಂಟ್ಯಾಕ್ಟ್ ಮಾರ್ಷಲ್ ಆರ್ಟ್ಸ್ ‘ ಕರಾಟೆ ಪಂದ್ಯಾವಳಿ ಸಮರೂಪ ಸಮಾರಂಭದಲ್ಲಿ ಮಾತನಾಡಿದ ಮುಡಾ ಮಾಜಿ ಅಧ್ಯಕ್ಷ ಎಚ್. ವಿ. ರಾಜೀವ್ ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಕೆ ಸೂಕ್ತ
ಎಂದರು.

ಭಯೋತ್ಪಾದಕರ ವಿರುದ್ಧ ಹೋರಾಡಲು ಇಡೀ ದೇಶವೇ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಹೋರಾಡಲು ಸ್ವಯಂ ರಕ್ಷಣೆ ಅಗತ್ಯತೆ ಇದೆ. ಎಲ್ಲರೂ ಸಹ ಸ್ವಯಂ ರಕ್ಷಣೆಗಾಗಿ ಕರಾಟೆ ಅಂತಹ ಕ್ರೀಡೆಯನ್ನು ಕಲಿತರೆ ನಿಮ್ಮ ಆರೋಗ್ಯದ ಜೊತೆಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಮೈಸೂರಿನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಕರಾಟೆ ಪಂದ್ಯಾವಳಿಗೆ ದೇಶದ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಆಗಮಿಸಿ ಈ ಟೂರ್ನಿಯಲ್ಲಿ ಬಹುಮಾನ ಪಡೆದಿರುವುದು ಸಂತಸ ತಂದಿದೆ. ವಿಜೇತರಾದವರು ಮುಂದಿನ ದಿನಗಳಲ್ಲಿ ಮತ್ತಷ್ಟು ಮೈಲಿಗಲ್ಲು ಸಾಧಿಸಲಿ ಪರಾಜಿತರಾದವರು ಆತ್ಮವಿಶ್ವಾಸದಿಂದ ಮುಂದಿನ ದಿನಗಳಲ್ಲಿ ಸತತ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಿದೆ. ಎಲ್ಲರೂ ವಿಜೇತರಾಗಲು ಸಾಧ್ಯವಿಲ್ಲ ಗೆದ್ದವರು ಹಿಗ್ಗದೆ, ಸೋತವರು ನಿರಾಶರಾಗದೆ ಈ ರೀತಿಯ ಟೂರ್ನಿಗಳಲ್ಲಿ ಭಾಗವಹಿಸಿದರೆ ಆತ್ಮವಿಶ್ವಾಸ ಹೆಚ್ಚಿಕೊಳ್ಳಲು ಸಾಧ್ಯ. ಮೈಸೂರಿನಲ್ಲಿ ಪಂದ್ಯಾವಳಿ ಆಯೋಜನೆಯಾಗಿರುವುದು ಮೈಸೂರಿನ ಕರಾಟೆ ಪಟುಗಳಿಗೆ ಇದೊಂದು ಸದಾವಕಾಶವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಕುಸಿಯುವ ಹಂತದಲ್ಲಿ ನೀರಿನ ಟ್ಯಾಂಕ್; ತೆರವುಗೊಳಿಸುವುದೇ ಪುರಸಭೆ

ವೇದಿಕೆಯಲ್ಲಿ ಗ್ರ್ಯಾಂಡ್ ಮಾಸ್ಟರ್ ವಿ. ನಾಗರಾಜು, ಎಂ. ದಿಲೀಪ್ ಕುಮಾರ್, ರೈಲ್ವೆ ಸಹಕಾರ ಮಂಡಳಿ ಬ್ಯಾಂಕ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...