ಮೈಸೂರು | ಮತದಾನ ಕೇಂದ್ರಗಳನ್ನು ಆಕರ್ಷಕವಾಗಿಸಿ; ಅಧಿಕಾರಿಗಳಿಗೆ ಡಿಸಿ ಸೂಚನೆ

Date:

ಮತದಾರರಿಗೆ ಮತದಾನ ಕೇಂದ್ರಗಳು ಆಕರ್ಷಣೀಯವಾಗಿ ಕಾಣುವಂತೆ ಅವುಗಳನ್ನು ಸಿದ್ಧಪಡಿಸಬೇಕು. ಇಂತಹ ಕ್ರಮಗಳು ಚುನಾವಣೆಯಲ್ಲಿ ಮತದಾನದ ಪ್ರಮಾಣವವನ್ನು ಹೆಚ್ಚು ಮಾಡುತ್ತದೆ” ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು.

ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಚುನಾವಣೆಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಲೋಕಸಭಾ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ, ಅಧಿಕಾರಿಗಳು ಮತಗಟ್ಟೆಗಳನ್ನು ಸುಂದರಗೊಳಿಸಲು ಸಿದ್ಧತೆಗಳನ್ನು ಪ್ರಾರಂಭಿಸಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರ್ಣಚಿತ್ರಗಳು, ರೇಖಾಚಿತ್ರಗಳು, ರಂಗೋಲಿಗಳು, ಮಾವಿನ ಎಲೆಗಳು ಮತ್ತು ಹೂವುಗಳಿಂದ ಅಲಂಕರಿಸುವಂತಹ ವಿಶೇಷ ಆಕರ್ಷಣೆಗಳು ಮತದಾನದ ಸಮಯದಲ್ಲಿ ತಮ್ಮ ಮತಗಟ್ಟೆಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ” ಎಂದು ಹೇಳಿದರು.

“ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ್ಯಂತ 2,915 ಮತಗಟ್ಟೆಗಳ ಪೈಕಿ ಗುರುತಿಸಲಾದ ಮೊದಲ ಮೂರು ಮತಗಟ್ಟೆಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಗುವುದು” ಎಂದು ಅಧಿಕಾರಿ ಹೇಳಿದರು.

“ಬೂತ್‌ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದರೆ ಅವುಗಳನ್ನು ಗುರುತಿಸಿ ಸಣ್ಣ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಎಲ್ಲ ಬೂತ್‌ಗಳಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕು” ಎಂದು ಬೂತ್ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ತಮ್ಮ ವ್ಯಾಪ್ತಿಯಲ್ಲಿ ಗುರುತಿಸಲಾದ ಮತಗಟ್ಟೆಗಳನ್ನು ದುರಸ್ತಿ ಮಾಡಲು ವಿಫಲವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಸಿದರು.

“ಎಲ್ಲ ಮತಗಟ್ಟೆ ಅಧಿಕಾರಿಗಳು ದಿನಕ್ಕೆ 14 ರಿಂದ 15 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಬೇಕಾಗಿರುವುದರಿಂದ ಗುಣಮಟ್ಟದ ಆಹಾರವನ್ನು ಪೂರೈಸಲು, ಅವರ ಸುರಕ್ಷತೆಗಾಗಿ ಇತರ ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಚುನಾವಣಾ ನೀತಿ ಸಂಹಿತೆ ಘೋಷಣೆಯಾದ 24 ರಿಂದ 72 ಗಂಟೆಗಳ ಒಳಗೆ ಚುನಾವಣೆಗೆ ಸಂಬಂಧಿಸಿದ ಎಲ್ಲ ರಾಜಕೀಯ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ತೆಗೆದುಹಾಕಬೇಕು. ಸರ್ಕಾರ ಪ್ರಾರಂಭಿಸಿದ ಯೋಜನಾ ಕಾರ್ಯಗಳನ್ನು ಮಾತ್ರ ಮುಂದುವರಿಸಲು ಅಧಿಕಾರಿಗಳು ಅನುಮತಿಸಬಹುದು. ಒಬ್ಬ ಅಭ್ಯರ್ಥಿಯು ಚುನಾವಣಾ ವೆಚ್ಚಕ್ಕಾಗಿ ಕೇವಲ ₹95 ಲಕ್ಷ ಮಾತ್ರ ಖರ್ಚು ಮಾಡಲು ಅವಕಾಶವಿದೆ. ಈ ಕುರಿತು ಎಚ್ಚರ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಶಕ್ತಿನಗರದ ಪಿಯು ಕಾಲೇಜಿಗಿಲ್ಲ ಸ್ವಂತ ಕಟ್ಟಡ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾತನಾಡಿ, “ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸುವಾಗ ವ್ಯಕ್ತಿಯು ತನ್ನ ಜೇಬಿನಲ್ಲಿ ₹50,000ಕ್ಕಿಂತ ಹೆಚ್ಚಿನ ನಗದು ಮೊತ್ತ ಮತ್ತು ₹10,000 ಕ್ಕಿಂತ ಹೆಚ್ಚಿನ ಮೌಲ್ಯದ ಸರಕುಗಳನ್ನು ಕೊಂಡೊಯ್ಯುವಂತಿಲ್ಲ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...