ಮೈಸೂರು | ಹೆರಿಗೆಗಾಗಿ ಪತ್ನಿಯನ್ನು ಕರೆತಂದಿದ್ದ ಪತಿ ಆಸ್ಪತ್ರೆ ಆವರಣದಲ್ಲೇ ಸಾವು

Date:

ಹೆರಿಗೆಗಾಗಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ಪತಿಯೊಬ್ಬ, ಮಗು ಹುಟ್ಟಿದ ಮರುದಿನವೇ ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಮೈಸೂರು ನಗರದಲ್ಲಿ ನಡೆದಿದೆ.

ಶಿವಗೋಪಾಲಯ್ಯ(35) ಮೃತ ದುರ್ದೈವಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ಶಿವಗೋಪಾಲಯ್ಯ ​ತನ್ನ ಪತ್ನಿಯನ್ನು ಹೆರಿಗೆಗೆಂದು ಮೈಸೂರಿನ ಚಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದರು. ಹೀಗಾಗಿ, ಪತ್ನಿಯ ಆರೈಕೆಗಾಗಿ ಕಳೆದ 5-6 ದಿನಗಳಿಂದ ಅವರು ಆಸ್ಪತ್ರೆಯಲ್ಲೇ ತಂಗಿದ್ದರು.​ ಪ್ರತಿದಿನ ಆಸ್ಪತ್ರೆಯ ಆವರಣದಲ್ಲಿ ಮಲಗುತ್ತಿದ್ದರು.

ಶಿವಗೋಪಾಲಯ್ಯ ಅವರ ಪತ್ನಿ ಅಶ್ವಥಮ್ಮ ಅವರಿಗೆ ಭಾನುವಾರ ಹೆರಿಗೆಯಾಗಿದೆ. ಸಿಸೇರಿಯನ್ ಹೆರಿಗೆ ಮೂಲಕ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದರಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿತ್ತು. ತಂದೆಯಾದ ಖುಷಿಯಲ್ಲಿ ಶಿವಗೋಪಾಲಯ್ಯ​ ರಾತ್ರಿ 10:30ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಬೆಳಿಗ್ಗೆ 7ರ ಸುಮಾರಿಗೆ ನೋಡಿದಾಗ​​​ ಮೃತಪಟ್ಟಿರುವುದು ತಿಳಿದುಬಂದಿದೆ. ತಂದೆಯಾದ ಖುಷಿಯಲ್ಲಿಯಲ್ಲಿದ್ದ ಶಿವಗೋಪಾಲಯ್ಯ ಮಗು ಜನಿಸಿದ ಮರುದಿವೇ ಉಸಿರು ಚೆಲ್ಲಿದ್ದಾರೆ. ​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ ಮಾಡುವವರು ಮತ್ತು ಪರಿಚಾರಕರಿಗೆ ಮೀಸಲಾದ ವಸತಿ ನಿಲಯದ ಸೌಲಭ್ಯವಿದೆ. ಆದರೆ, ಬಿಪಿಎಲ್ ಕಾರ್ಡ್ ಇರುವವರಿಗೆ ಮಾತ್ರ ಉಚಿತವಾಗಿ ತಂಗಲು ಅವಕಾಶ ನೀಡಲಾಗಿದೆ. ಕಾರ್ಡ್ ಇಲ್ಲದವರು ₹30 ಕಟ್ಟಬೇಕಾಗುತ್ತದೆ. ಆದರೆ, ಈ ಹಣವನ್ನು ಶಿವಗೋಪಾಲಯ್ಯ ಅವರಿಗೆ ಭರಿಸಲು ಸಾಧ್ಯವಾಗಿಲ್ಲ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ತಮ್ಮನ್ನು ಕೂಗಬಹುದೆಂದು ತಿಳಿದು ಆಸ್ಪತ್ರೆಯ ಆವರಣದಲ್ಲೇ ಮಲಗುತ್ತಿದ್ದರು ಎಂದು ತಿಳಿದುಬಂದಿದೆ.

“ಈ ಮೂರು ದಿನಗಳಲ್ಲಿ ಆಸ್ಪತ್ರೆಯ ಶಿವಗೋಪಾಲಯ್ಯ ಅವರು ಉತ್ತಮ ಸ್ನೇಹ ಬೆಳೆಸಿಕೊಂಡಿದ್ದರು. ಶಿವಗೋಪಾಲಯ್ಯ ಬಳಿ ಹಣವಿರಲಿಲ್ಲ. ಊಟಕ್ಕೂ ಹಣವಿರಲಿಲ್ಲ. ಅವರಿಗೆ ನಾವೇ ಸಹಾಯ ಮಾಡಿದ್ದೆವು. ವೈದ್ಯರೊಬ್ಬರು ಹಾಲಿನ ಪುಡಿ ಖರೀದಿಗೆ ಹಣ ನೀಡಿದ್ದರು. ಮಗು ಹುಟ್ಟಿದ್ದಕ್ಕೆ ಬಹಳ ಸಂತೋಷದಲ್ಲಿದ್ದರು. ಪ್ರತಿದಿನ ಆಸ್ಪತ್ರೆಯ ಆವರಣದಲ್ಲಿ ನೆಲದ ಮೇಲೆ ಮಲಗುತ್ತಿದ್ದ, ಪತ್ನಿ ಹಾಗೂ ಮಗುವನ್ನು ಒಂದು ಕ್ಷಣವೂ ಬಿಟ್ಟಿರುತ್ತಿರಲಿಲ್ಲ” ಎಂದು ಅಟೆಂಡರ್ ಸುರೇಶ್‌ ಭಾವುಕರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಶೋಕಪುರಂ ನಿಲ್ದಾಣದವರೆಗೆ ರೈಲುಗಳ ವಿಸ್ತರಣೆ; ಸ್ಥಳೀಯರ ವಿರೋಧ

“ವಸತಿ ನಿಲಯದ ಸೌಲಭ್ಯಗಳು ಲಭ್ಯವಿದ್ದರೂ ಶಿವಗೋಪಾಲಯ್ಯ ಅವರು ಅದನ್ನು ಬಳಸದಿರಲು ನಿರ್ಧರಿಸಿದ್ದರು. ಈ ದುರಂತದ ಬಗ್ಗೆ ನಮಗೆ ಇಂದು ಬೆಳಿಗ್ಗೆ ಮಾಹಿತಿ ಸಿಕ್ಕಿದೆ. ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ, ವರದಿಗಳು ಬಂದ ನಂತರ ನಿಖರವಾದ ಕಾರಣ ತಿಳಿದುಬರಲಿದೆ” ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಕೆ ಆರ್ ದಾಕ್ಷಾಯಿಣಿ ಹೇಳಿದ್ದಾರೆ.

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ಅಶ್ವಥಮ್ಮ ಅವರಿಗೆ ಪತಿಯ ಸಾವಿನ ಬಗ್ಗೆ ಇನ್ನೂ ಮಾಹಿತಿಯಿಲ್ಲ. ಮಗುವಿನ ಆಗಮನದಿಂದ ಸಂಭ್ರಮದಲ್ಲಿರಬೇಕಿದ್ದ ಕುಟುಂಬ ತೀವ್ರ ದುಃಖದಲ್ಲಿ ಮುಳುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...