ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

Date:

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಆರ್ ಆರ್ ನಗರ ಬಳಿಯ ನ್ಯೂ ಕಾಂತರಾಜ್ ಅರಸ್ ರಸ್ತೆಯ ರಿಂಗ್ ರಸ್ತೆಗೆ ಅಡ್ಡಲಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಇದೀಗ ಮೈಸೂರು ಮಹಾನಗರ ಪಾಲಿಕೆ ಸಿಗ್ನಲ್ ದೀಪ ಅಳವಡಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಈ ವೃತ್ತದಲ್ಲಿ ಪ್ರತಿದಿನವೂ ವಾಹನ ದಟ್ಟಣೆಯಾಗುವುದರಿಂದ ಭಾರೀ ಜನಸಂದಣಿಗೆ ಕಾರಣವಾಗುತ್ತಿತ್ತು. ಹಾಗಾಗಿ ಎಂಸಿಸಿ ಮತ್ತು ನಗರ ಸಂಚಾರ ಪೊಲೀಸರು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಬೋಗಾದಿ-ಗದ್ದಿಗೆ ರಸ್ತೆಯ ಬೋಗಾದಿ ಬಳಿ ರಿಂಗ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಯಂತ್ರಿಸಲಾಗಿದೆ. ಆದರೆ, ಈ ವೃತ್ತದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದರೂ ಕೂಡ ಸಂಚಾರ ಪೊಲೀಸರಾಗಲೀ, ಮಹಾನಗರ ಪಾಲಿಕೆಯಾಗಲೀ ಸಿಗ್ನಲ್ ಅಳವಡಿಸುವ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸಿಪಿ (ಸಂಚಾರ) ಎಸ್ ಜಾಹ್ನವಿ ಅವರ ಪ್ರಕಾರ, “ನಗರದಾದ್ಯಂತ 10 ಸ್ಥಳಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಸ್ಥಾಪಿಸಲು ಸಂಚಾರ ಪೊಲೀಸರು ಎಂಸಿಸಿಗೆ ಸಲಹೆ ನೀಡಿದ್ದರು.

“ಬೋಗಾದಿ-ಗದ್ದಿಗೆ ರಸ್ತೆಯ ಬೋಗಾದಿ ಜನನಿಬಿಡ ವೃತ್ತಗಳಲ್ಲಿ ಒಂದಾಗಿದ್ದರೂ, ಇಷ್ಟು ವರ್ಷಗಳ ಕಾಲ ಇಲ್ಲಿ ಸಂಚಾರವನ್ನು ಕ್ರಮಬದ್ಧಗೊಳಿಸದಿರುವುದು ಸಾಕಷ್ಟು ಅವ್ಯವಸ್ಥೆಗೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಸ್ಥಳೀಯರು ಜನಪ್ರತಿನಿಧಿಗಳು ಸೇರಿದಂತೆ ಎಲ್ಲ ಏಜೆನ್ಸಿಗಳನ್ನು ಸಂಪರ್ಕಿಸಿದ್ದರು. ಆದರೆ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ, ಕೆಲಸ ಪ್ರಾರಂಭವಾಗಿರುವುದು ನಮಗೆ ಸಂತೋಷವಾಗಿದೆ” ಎಂದು ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದರು.

“ಈ ಪ್ರದೇಶವು ನಗರದ ವಸತಿ ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ವೇಗವಾಗಿ ಚಲಿಸುವ ಭಾರೀ ವಾಹನಗಳು ಯಾವಾಗಲೂ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿದ್ದು, ಭಯ ಎದುರಾಗಿತ್ತು. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾರ್ಯರೂಪಕ್ಕೆ ತರಬೇಕು” ಎಂದು ಎಂಸಿಸಿಯನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮಾರ್ಚ್‌ 3ರಂದು ಪಲ್ಸ್‌ ಪೋಲಿಯೋ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

“ಅನೇಕ ಸ್ಥಳಗಳಲ್ಲಿ ಸಿಗ್ನ ಅಳವಡಿಕೆ ಕೆಲಸವನ್ನು ಎಂಸಿಸಿ ಕೈಗೊಂಡಿದ್ದು, ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ದೇವೇಗೌಡ ವೃತ್ತ ಸೇರಿದಂತೆ ಸಿಗ್ನಲ್ ಅಳವಡಿಕೆ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು” ಎಂದು ನಗರದ ನಿವಾಸಿಗಳುಮೈಸ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...