ಮೈಸೂರು | ಸಾಧನೆಗೆ ಮಾನಸಿಕ ಸಿದ್ಧತೆ ಅಗತ್ಯ: ನ್ಯಾ. ಅರವಿಂದ್ ಕುಮಾರ್ ಅಭಿಮತ

Date:

ವಿದ್ಯಾರ್ಥಿಗಳು ಸಾಧಕರಾಗಿ ರೂಪುಗೊಳ್ಳಬೇಕಾದರೆ ಆ ಸಾಧನೆಗೆ ಮಾನಸಿಕ ಸಿದ್ಧತೆ ಅಗತ್ಯವಾಗಿರುತ್ತದೆ ಎಂದು ನ್ಯಾ. ಅರವಿಂದ್ ಕುಮಾರ್ ಅಭಿಮತ ವ್ಯಕ್ತಪಡಿಸಿದರು.

ಮೈಸೂರು ನಗರದ ಶ್ರೀ ಶಾರದಾ ಪಬ್ಲಿಕ್ ಶಾಲೆಯ ಎಸ್ ರಾಮನಾಥನ್ ಸ್ಮಾರಕ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.

‘‘ನಾನು ಗಮನಿಸಿದ ವಿದ್ಯಾರ್ಥಿಯೊಬ್ಬನಿಗೆ ಚಿಕ್ಕವಯಸ್ಸಿನಲ್ಲಿಯೇ ತಾಯಿ ತೀರಿಕೊಳ್ಳುತ್ತಾರೆ. ಆ ಸಂದರ್ಭದಲ್ಲಿ ಆತ ತನಗೆ ಬೋಧನೆ ಮಾಡುವ ಶಿಕ್ಷಕಿಯನ್ನೇ ತಾಯಿಯೆಂದು ಭಾವಿಸಿ ವಿದ್ಯಾರ್ಜನೆ ಮಾಡುತ್ತಾನೆ. ಶಿಕ್ಷಕಿಯ ಮಾರ್ಗದರ್ಶನವನ್ನು ಚಾಚೂ ತಪ್ಪದೇ ಪಾಲನೆ ಮಾಡಿದ ವಿದ್ಯಾರ್ಥಿ ದೊಡ್ಡ ಸಾಧನೆ ಮಾಡುತ್ತಾನೆ. ಅಲ್ಲದೇ ತನ್ನ ವಿವಾಹಕ್ಕೆ ತನಗೆ ಅಕ್ಷರ ಕಲಿಸಿದ ಗುರುವನ್ನು ವಿಮಾನದಲ್ಲಿ ಕರೆಸಿಕೊಳ್ಳುತ್ತಾನೆ. ತನ್ಮೂಲಕ ಗುರುಗಳಿಗೆ ಅಗ್ರ ಸ್ಥಾನವನ್ನು ನೀಡಿ ಆರಾಧಿಸುತ್ತಾನೆ. ಹೀಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಕರ ಬಗ್ಗೆ ಅತೀವವಾದ ಗೌರವ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಹೇಳಿದ್ದನ್ನುಪರಿಪಾಲಿಸುವ ಗುಣ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಅವರು ಸಾಧನೆ ಮಾಡಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾರದಾ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿಶೇಷವಾಗಿ ನಮ್ಮ ಹಿಂದೂ ಸಂಪ್ರದಾಯದಂತೆ ಅಕ್ಷರಾಭ್ಯಾಸ ಮಾಡಿಸಲಾಗುತ್ತಿದೆ. ತನ್ಮೂಲಕ ಮಕ್ಕಳಿಗೆ ಶಿಕ್ಷಣ ನೀಡುವುದಲ್ಲದೇ, ನಮ್ಮಆಚಾರ-ವಿಚಾರ, ಸಂಸ್ಕಾರವನ್ನು ಉಳಿಸಿಕೊಂಡು ಮುಂದುವರೆಸಲು ಕೊಡುಗೆ ನೀಡುತ್ತಿದ್ದಾರೆ. ಈ ಪರಿಪಾಠ ಎಲ್ಲ ಕಡೆ ಅನುಸರಣೆಯಾಗಬೇಕು. ಎಳೆಯ ವಯಸ್ಸಿನ ಮಕ್ಕಳಲ್ಲಿ ಬದ್ದತೆ ತುಂಬುವುದು ಸವಾಲಿನ ಕೆಲಸ. ಅದು ನೈಜ ಶಿಕ್ಷಕನಿಂದ ಮಾತ್ರ ಸಾಧ್ಯ” ಎಂದರು.

ಶಾಲಾ ಕಾರ್ಯದರ್ಶಿ ಮಂಜುನಾಥ್ ರಾಮನಾಥನ್ ಮಾತನಾಡಿ, “ಶಾಲೆಯ ಮೂಲಸೌಲಭ್ಯಗಳನ್ನು ವಿಸ್ತರಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕಲಿಕಾ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಎಸ್ ರಾಮನಾಥನ್ ಸ್ಮಾರಕ ವಿಭಾಗ ನಿರ್ಮಿಸಲಾಗಿದೆ. ಇದರಿಂದ ಶಿಶುವಿಹಾರದ ಮಕ್ಕಳು, ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದೀರಾ? ಮೈಸೂರು | ಕೊಳೆತು ನಾರುತ್ತಿದೆ ಲಕ್ಷ್ಮಣತೀರ್ಥ ನದಿ

“ತಂದೆ ರಾಮನಾಥನ್ ಅವರು 15 ಮಕ್ಕಳಿಂದ ಆರಂಭಿಸಿದ ಈ ಶಾಲೆಯು ಇಂದು 800 ಮಂದಿ ವಿದ್ಯಾರ್ಥಿಗಳು ಅಧ್ಯಯನ ಮಾಡುವಷ್ಟು ಹೆಮ್ಮರವಾಗಿ ಬೆಳೆದಿದೆ. ಅವರು ಹೇಳಿಕೊಟ್ಟ ಮಾರ್ಗದಲ್ಲಿ ಸಂಸ್ಥೆ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ” ಎಂದು ಟ್ರಸ್ಟಿ ಶ್ರೀವತ್ಸ ರಾಮನಾಥನ್ ಸ್ಮರಿಸಿದರು.

ಸಂಸ್ಥೆಯ ಖಜಾಂಚಿ ಕುಸುಮಾ ರಾಮನಾಥನ್, ಆಡಳಿತಾಧಿಕಾರಿ ಗುರುರಾಜ್, ಪ್ರಾಂಶುಪಾಲೆ ಶಾಲಿನಿ ಅಶೋಕ್, ವಿದ್ಯಾರ್ಥಿಗಳು ಹಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...