ಮೈಸೂರು | ಬೈಕ್ ಓಡಿಸಿದ ಅಪ್ರಾಪ್ತ; 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ನ್ಯಾಯಾಲಯ ಆದೇಶ

Date:

ಅಪ್ರಾಪ್ತನೊಬ್ಬ ಬೈಕ್‌ ಓಡಿಸಿದ ಹಿನ್ನೆಲೆಯಲ್ಲಿ ಆತನಿಗೆ 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ಮೈಸೂರು ಜಿಲ್ಲೆಯ ಟಿ ನರಸೀಪುರ ಘನ ನ್ಯಾಯಾಲಯ ಆದೇಶ ನೀಡಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಪೊಲೀಸರು ತಪಾಸಣೆ ನಡೆಸುವ ವೇಳೆ ಅಪ್ರಾಪ್ತನೊಬ್ಬ ಬೈಕ್ ಚಾಲನೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಟಿ ನರಸೀಪುರ ಪೊಲೀಸರು ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು.

ವಾಹನ ಪರವಾನಗಿ ಇಲ್ಲದೆ, 18 ವರ್ಷ ತುಂಬದೆ ವಾಹನ ಚಾಲನೆ ಮಾಡುತ್ತಿರುವವರಿಗೆ ಟಿ ನರಸೀಪುರ ಘನ ನ್ಯಾಯಾಲಯ ಕಠಿಣ ತೀರ್ಪು ನೀಡುವುದರ ಮೂಲಕ ಬಿಸಿ ಮುಟ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನಿಗೆ ವಾಹನ ನೀಡಿದ ಟಿ ನರಸೀಪುರ ಟೌನ್ ತ್ರಿವೇಣಿ ನಗರದ ಮಹೇಶ್ ಎಂಬುವರಿಗೆ 27 ಸಾವಿರ ದಂಡ ವಿಧಿಸಿ, ಆರ್‌ಸಿ ಅಮಾನತು ಮಾಡಿದೆ. ಜತೆಗೆ ಬಾಲಕನಿಗೆ 25 ವರ್ಷ ತುಂಬುವವರೆಗೂ ಚಾಲನಾ ಪರವಾನಿಗೆ ನೀಡದಂತೆ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಈ ವಿಶೇಷ ತೀರ್ಪಿನಿಂದಾಗಿ ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ್ದು, ಪೋಷಕರು ಇನ್ಮುಂದೆ ಅಪ್ರಾಪ್ತರಿಗೆ ವಾಹನ ನೀಡದಂತೆ ಎಚ್ಚರಿಕೆಯ ಸಂದೇಶವಾಗಿದೆ.

ಅಪ್ರಾಪ್ತರು ಪರವಾನಗಿಯಿರದೆ ವೀಲಿಂಗ್ ಮಾಡುವುದು, ರಸ್ತೆ ನಿಯಮ ಪಾಲಿಸದೆ ಮನಬಂದಂತೆ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ಇರುವುದು ಕಂಡುಬರುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...