ಮೈಸೂರು | ದಲಿತ ಕುಟುಂಬದೊಂದಿಗೆ ಅನುಚಿತ ವರ್ತನೆ, ಹಲ್ಲೆ : ಎಫ್ಐಆರ್ ದಾಖಲು

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ರಾಮೇನಹಳ್ಳಿ ಜಾತ್ರೆಗೆ ದಲಿತ ಕುಟುಂಬದವರು ತೆರಳಿದ್ದ ಸಮಯದಲ್ಲಿ ನಿಲುವಾಗಿಲು ಗ್ರಾಮದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಏಳು ಜನ ಅನುಚಿತವಾಗಿ ವರ್ತಿಸಿದಲ್ಲದೆ, ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ನಿಂದಿಸಿರುವ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗಾಯಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬದೊಂದಿಗೆ ಜಾತ್ರೆಗೆ ತೆರಳಿದ್ದವರ ಜೊತೆ ನಿಲುವಾಗಿಲು ಗ್ರಾಮದ ಉಲ್ಲಾಸ್, ಚಿರಾಗ್,ಸೂರಿ, ಶಶಾಂಕ್ ಸೇರಿದಂತೆ ಇನ್ನಿತರರು ಹೆಣ್ಣು ಮಕ್ಕಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನ ಕುಟುಂಬದ ಸುಭಾಷ್ ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದಲ್ಲದೆ, ಅವಾಚ್ಯ ಶಬ್ದ ಬಳಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸಿರುತ್ತಾರೆ.

ಪೊಲೀಸರು ಇದುವರೆಗೆ ಹಲ್ಲೆ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆದಿಲ್ಲ, ತಹಸೀಲ್ದಾರ್ ಅವರು ಮಧ್ಯ ಪ್ರವೇಶಿಸಿ ಹಲ್ಲೆಗೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಸಿಪಿಐಎಂ ತಾಲ್ಲೂಕು ಸಮಿತಿ ಮನವಿ ಮಾಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐಎಂ ಪಕ್ಷದ ಕಲ್ಕುಣಿಕೆ ಬಸವರಾಜು ಮಾತನಾಡಿ ಗಲಾಟೆ ನಡೆಸಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿಲ್ಲ. ದಲಿತ ಕುಟುಂಬದ ಹೆಣ್ಣು ಮಕ್ಕಳನ್ನು ಸಾರ್ವಜನಿಕವಾಗಿ ಎಳೆದಾಡಿದ್ದಾರೆ, ಚುಡಾಯಿಸಿದ್ದಾರೆ ಅಲ್ಲದೆ, ಹಲ್ಲೆ ನಡೆಸಿದ್ದರು ಸಹ ಕ್ರಮ ಕೈಗೊಳ್ಳದೆ ಆರೋಪಿಗಳ ರಕ್ಷಣೆಗೆ ಪೋಲೀಸರೆ ನಿಂತಿರುವಂತೆ ತೋರುತ್ತಿದೆ. ಈ ಕೂಡಲೆ ಕ್ರಮ ಕೈಗೊಳ್ಳಬೇಕು
ಎಂದು ಆಗ್ರಹಿಸಿದರು.

ಸಿಪಿಐಎಂ ಪಕ್ಷದ ಬೆಳತೂರು ವೆಂಕಟೇಶ್ ಮಾತನಾಡಿ ಪ್ರಕರಣದ ಬಗ್ಗೆ ತಹಶಿಲ್ದಾರ್ ಅವರಿಗೆ ಮನವಿ ಮಾಡಿ ಪೊಲೀಸರಿಂದ ನ್ಯಾಯ ಸಿಗುತ್ತಿಲ್ಲ, ಮಧ್ಯ ಪ್ರವೇಶ ಮಾಡಿ ಸಮಾಜ ಕಲ್ಯಾಣ ಇಲಾಖೆಯಿಂದ ನೊಂದ ಕುಟುಂಬಕ್ಕೆ ಪರಿಹಾರ. ಆರೋಪಿಗಳನ್ನು ಬಂಧಿಸಿ ನ್ಯಾಯ ಕೊಡಿಸಿಕೊಡುವಂತೆ ಕೋರಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಹಾಡಿಗಳಿಗೆ ಬೆಳಕು; ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

ಎಚ್ ಎಸ್ ಶಿವರಾಮು, ತಮ್ಮಡಹಳ್ಳಿ ಮಹದೇವು, ಸಂತೋಷ್, ರಾಜು, ಡ್ರೈವರ್ ಸಿದ್ದರಾಜು, ನಿಲುವಾಗಿಲು ಲೋಕೇಶ್, ಬನ್ನಿಕುಪ್ಪೆ ಮಹಾದೇವ, ಯಶವಂತ್, ಕಿಶೋರ್, ಅವಿನಾಶ್, ವೈ ರಾಜು ಹಾಗೂ ಇನ್ನಿತರರು ಮನವಿ ಕೊಡುವಾಗ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...