ಮೈಸೂರು | ಚರ್ಚೆಗೆ ಬಾರದೆ ತಲೆ ಮರೆಸಿಕೊಂಡಿರುವ ಸಂಸದ ಪ್ರತಾಪ್ ಸಿಂಹ: ಕಾಂಗ್ರೆಸ್ ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಅಭಿವೃದ್ಧಿ ಮತ್ತು ಸಾಧನೆಗಳ ಬಗ್ಗೆ ಚರ್ಚೆಗೆ ಬಾರದೆ ಸಂಸದ ಪ್ರತಾಪ್ ಸಿಂಹ ತಲೆ ಮರೆಸಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಸಾಧನೆಗಳ ಪಟ್ಟಿ ಕೊಡುತ್ತೇನೆ. ಅವರು ಚರ್ಚೆಗೆ ಬರಬೇಕು ಎಂದು ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ಹೇಳಿದ್ದಾರೆ.

ಇತ್ತೀಚೆಗೆ ಸಿದ್ದರಾಮಯ್ಯ ಅವರ ಕೊಡುಗೆಗಳ ಬಗ್ಗೆ ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದ್ದರು. ಅವರ ಪ್ರಶ್ನೆಗೆ ತಿರುಗೇಟು ನೀಡಿದ್ದ ಎಂ ಲಕ್ಷ್ಮಣ್, ‘ಸೆ.6ರಂದು ಪ್ರತಾಪ್‌ ಸಿಂಹ ಅವರ ಕಚೇರಿಯ ಎದುರೇ ದಾಖಲೆ ಬಿಡುಗಡೆ ಮಾಡುತ್ತೇವೆ’ ಎಂದು ಹೇಳಿದ್ದರು. ಅದರಂತೆ, ಇಂದು ಸಂಸದರ ಕಚೇರಿಗೆ ಲಕ್ಷ್ಮಣ್‌ ಮತ್ತು ಕಾಂಗ್ರೆಸ್‌ ಮುಖಂಡರು ದಾಖಲೆ ಸಮೇತ ತೆರಳಿದ್ದು, ಅವರನ್ನು ಪೊಲೀಸರು ಗೇಟ್‌ನಲ್ಲಿಯೇ ತಡೆದಿದ್ದಾರೆ.

ಕಾಂಗ್ರೆಸ್‌ ಮುಖಂಡರು ಕಚೇರಿ ಒಳ ಹೋಗಲು ಯತ್ನಿಸಿದರೂ, ಪೊಲೀಸರು ಅವರನ್ನು ಬಿಡಲಿಲ್ಲ. ಬಳಿಕ, ಗೇಟ್‌ನಲ್ಲಿ ಟೇಬಲ್‌ ಹಾಕಿ ಕುಳಿತ ಲಕ್ಷ್ಮಣ್‌, “ಕೇಂದ್ರದಲ್ಲಿ ಪ್ರತಾಪ್‌ ಸಿಂಹ ಅವರದ್ದೇ ಸರ್ಕಾರವಿದೆ. ರಾಜ್ಯದಲ್ಲಿಯೂ ಹಿಂದೆ ಅವರದ್ದೇ ಸರ್ಕಾರವಿತ್ತು. ಆದರೂ, ಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಪ್ರತಾಪ್‌ ಸಿಂಹ ಹೇಳಿಕೊಳ್ಳುತ್ತಾರೆ. ಮೈಸೂರಿಗೆ ಸಂಸದರಾಗಿ ಪ್ರತಾಪ್ ಸಿಂಹ ಏನು ಕೊಟ್ಟಿದ್ದಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸದರ ಕಚೇರಿಗೆ ದಾಖಲೆಗಳನ್ನು ಕೊಟ್ಟಿದ್ದೇವೆ. ಚರ್ಚೆಗೆ ಸಂಸದ ಪ್ರತಾಪ್‌ ಸಿಂಹ ನಿಗದಿಪಡಿಸುವ ಜಾಗಕ್ಕೆ ತೆರಳಲು ನಾವು ಸಿದ್ದರಿದ್ದೇವೆ. ಸಂಸದರ ಜಾಗ ನಿಗದಿ ಮಾಡಿ, ಚರ್ಚೆಗೆ ಬರಲಿ” ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ ಬಿ ಜೆ ವಿಜಯ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...