ಮೈಸೂರು | ನಾಲ್ವಡಿಯವರು ಜನಪರ ವ್ಯಕ್ತಿತ್ವದ ಮಹಾನ್ ಚೇತನ: ಪ್ರೊ.ಬಿ. ಜಯಪ್ರಕಾಶ್ ಗೌಡ

Date:

ನಾಡಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶ ಕಂಡ ಜನಪರ ಮತ್ತು ಪ್ರಗತಿಪರ ವ್ಯಕ್ತಿತ್ವದ ಅಪರೂಪದ ಮಹಾನ್ ಚೇತನ ಎಂದು ಮಂಡ್ಯ ಕರ್ನಾಟಕ ಸಂಘದ ಪ್ರೊ.ಬಿ. ಜಯಪ್ರಕಾಶ್ ಗೌಡ ಬಣ್ಣಿಸಿದರು.

ಮೈಸೂರಿನ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಕುವೆಂಪು ಕಲಾನಿಕೇತನ ಸಂಸ್ಥೆಯು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೆಯ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಲಾ ಸಂಭ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

“ಶೈಕ್ಷಣಿಕ ಪ್ರಗತಿಗೆ ವಿಶೇಷವಾಗಿ ಒತ್ತು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆ ಮೂಲಕ ಜ್ಞಾನ ಮತ್ತು ಅನುಭವವನ್ನು ಜನರ ಮನೆ ಬಾಗಿಲಿಗೆ ತಲುಪಿಸಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ, ಅವರಿಗಾಗಿ ಶಾಲೆ ತೆರೆದರು. ಬಾಲ್ಯ ವಿವಾಹ ರದ್ದು ಮಾಡಿ ಪ್ರಗತಿಪರತೆ ಮೆರೆದರು. ಜನಮುಖಿ ಕೆಲಸಗಳ ಕಾರಣ ಅವರ ಹೆಸರು ಕನ್ನಡ ನೆಲದಲ್ಲಿ ಶಾಶ್ವತವಾಗಿ ಉಳಿದಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿ ಡಾ. ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಮಾತನಾಡಿ, “ಇಂದಿನದ್ದು ಪ್ರಶಸ್ತಿಗಳ ಸುಗ್ಗಿಕಾಲವಾಗಿದ್ದು, ಎರಡು ದೃಷ್ಟಿಯಿಂದ ಈ ಪ್ರಶಸ್ತಿಗಳು ಸ್ವಾಗತಾರ್ಹವಾಗಿವೆ. ಒಂದು ಇನ್ನೂ ಬೆಳೆಯುವ ಹಂತದಲ್ಲಿ ಇರುವ ಉದಯೋನ್ಮುಖ ಸಾಧಕರಿಗೆ ಪ್ರೋತ್ಸಾಹದಾಯಕವಾಗಿ ನೀಡುವುದು. ಮತ್ತೊಂದು ಈಗಾಗಲೇ ಸಿದ್ಧಿಸಾಧನೆಯ ಹಂತ ತಲುಪಿದವರಿಗೆ ಕೃತಜ್ಞತೆಯ ರೂಪದಲ್ಲಿ ಪ್ರಶಸ್ತಿ ಸಲ್ಲಿಸುವುದು. ಈ ಎರಡೂ ನೆಲೆಯಲ್ಲಿ ಕೂಡ ನಾಲ್ವಡಿ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ದೊರೆತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸು

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ತುಮಕೂರಿನ ನರಸಿಂಹಗಿರಿ ಮಠದ ಪೀಠಾಧಿಪತಿ ಡಾ. ಹನುಮಂತನಾಥ ಸ್ವಾಮೀಜಿ ಮಾತನಾಡಿ, ಪ್ರಶಸ್ತಿಗಳು ಮಾರಾಟವಾಗುವ ಸ್ಥಿತಿ ಬಂದಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಸರ್ಕಾರ ನಿಜವಾದ ಸಾಧಕರನ್ನು ಗುರುತಿಸಿ ಗೌರವಿಸಬೇಕು ಎಂದು ಸಲಹೆ ನೀಡಿದರು.

“ಯಾಂತ್ರಿಕ ಜಗತ್ತಿನಲ್ಲಿ ಕನ್ನಡವನ್ನು ಉಳಿಸಿ, ಬೆಳೆಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ನೆಲ, ಜಲ, ಭಾಷೆ, ಸಾಹಿತ್ಯದ ಬಗ್ಗೆ ಕನ್ನಡಿಗರಲ್ಲೇ ಗೌರವ ಕಡಿಮೆಯಾಗಿದೆ. ಯಾವುದೋ ದೇಶಕ್ಕೆ ತೆರಳಿದರೂ ಹಣ ಮಾಡಬಹುದೇ ಹೊರತು ನಮ್ಮ ಭಾರತೀಯ ಮಣ್ಣಿನ ಆತ್ಮೀಯತೆ ದೊರೆಯುವುದಿಲ್ಲ. ಹೀಗಾಗಿ ಕನ್ನಡ ನಾಡು ಕಟ್ಟುವ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ’ ಎಂದರು.

ಕಾರ್ಯಕ್ರಮದಲ್ಲಿ ಮೈಸೂರಿನ ಹಿರಿಯ ಕವಯಿತ್ರಿ ಡಾ. ಲತಾ ರಾಜಶೇಖರ, ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ, ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ. ಜಯಪ್ರಕಾಶ್ ಗೌಡ ಅವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಮೈಸೂರು | ದಸಂಸದಿಂದ ‘ಸಾಂವಿಧಾನಿಕ ಪ್ರಜಾಪ್ರಭುತ್ವ-ಸಮಕಾಲೀನ ಸವಾಲು’ ಕುರಿತು ವಿಚಾರ ಸಂಕಿರಣ

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ. ರಾಮು, ಕೆ.ಎಸ್.ನ. ಟ್ರಸ್ಟ್ ಅಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ರುದ್ರೇಶ್, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಜಿ.ಪಿ.ಓ. ಚಂದ್ರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಮತ್ತು ಎಂ. ಪ್ರಮೀಳಾ ಭರತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕುವೆಂಪು ಕಲಾನಿಕೇತನ ಸಂಸ್ಥೆಯ ಅಧ್ಯಕ್ಷ ಕುವೆಂಪು ಪ್ರಕಾಶ್, ಮಾಜಿ ಅರಣ್ಯಾಧಿಕಾರಿ ಎಸ್. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...