ಮೈಸೂರು | ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನವಿಲ್ಲ; ಪಂಚಾಯಿತಿ ಸದಸ್ಯರದ್ದೇ ದರ್ಬಾರ್

Date:

ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನ ನೀಡದೆ ಕೆಲವೇ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ನಡೆಸುತ್ತಿರುವ ಸಭಾ ನಡಾವಳಿಗೆ ಜನ ಸಂಗ್ರಾಮ್ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ವಿಜಯ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಆರೋಗ್ಯ ಅಭಿಯಾನ ವಿಶೇಷ ಸಭೆ ಕುರಿತು ಆಕ್ಷೇಪಿಸಿದ್ದಾರೆ.

“ಸಭೆಗೆ ಗ್ರಾಮ ಪಂಚಾಯಿತಿ ನಿಯಮದಂತೆ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮವಾಗಿರುವುದರಿಂದ ಯಾವುದೇ ಸಾರ್ವಜನಿಕರಿಗೆ, ಆಶಾ ಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತರಿಗೆ, ಸ್ವಸಹಾಯ ಸಂಘಗಳ ಮಹಿಳೆಯರಿಗೆ ಆಹ್ವಾನ ನೀಡದೆ, ಕೆಲವೇ ಕೆಲವು ಗ್ರಾಮ ಪಂಚಾಯಿರಿ ಸದಸ್ಯರು, ಅಧಿಕಾರಿಗಳೇ ದರ್ಬಾರ್‌ ನಡೆಸಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕ ವಿಶೇಷ ಸಭೆ ನಿಗದಿಯಾಗಿ, ಪ್ರಕಟಣೆ ಹೊರಡಿಸಿ ಸಾರ್ವಜನಿಕರೇ ಇಲ್ಲದಂತೆ ಸಭೆ ನಡೆಸಿದ್ದು ಖಂಡನೀಯ, ಗ್ರಾಮದ ಸಭೆಯಲ್ಲಿ ಎಲ್ಲರೂ ಭಾಗಿಯಾಗಬೇಕಿದ್ದ ಸಭೆ ಕೇವಲ ಪಂಚಾಯಿತಿ ಸದಸ್ಯರ ಹಾಗೂ ಅಧಿಕಾರಿಗಳ ಸಭೆಯಾಗಿದ್ದು ಸರಿಯಾದ ಕ್ರಮವಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

“ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾರಿಗೂ ಆಹ್ವಾನ ಕೊಟ್ಟಿಲ್ಲ, ಯಾರಿಗೂ ತಿಳಿಸದೆ ಗ್ರಾಮ ಸಭೆಯನ್ನು ಪಂಚಾಯ್ತಿ ಸಭೆಯಂತೆ ನಡೆಸುತ್ತಿದ್ದಾರೆ. ಗ್ರಾಮ ಆರೋಗ್ಯ ವಿಚಾರವಾಗಿ ಸಾರ್ವಜನಿಕರು ಇಲ್ಲದೆ ಯಾವ ವಿಚಾರ ಚರ್ಚೆ ಮಾಡುತ್ತಾರೆ,
ಯಾವ ಸಮಸ್ಯೆಗಳನ್ನು ಆಲಿಸುತ್ತಾರೆ. ಜನ ಸಾಮಾನ್ಯರ ಅಹವಾಲು ತಿಳಿಯದೆ ಸಭೆಗಳನ್ನು ಹತ್ತಿಕ್ಕಿ ತಮಗೆ ಇಸ್ಟ ಬಂದ ಹಾಗೆ ನಡೆಸುವ ಪ್ರವೃತ್ತಿ ಬೆಳೆಸಿಕೊಂಡಿರುವುದು ನಿಜಕ್ಕೂ ವಿಷಾದನೀಯ ಸಂಗತಿ. ಇಂತಹ ಧೋರಣೆ ಎಂದಿಗೂ ಮುಂದುವರೆಯಕೂಡದು” ಎಂದು ನಗರ್ಲೆ ವಿಜಯಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...