ಮೈಸೂರು | ಚಲಿಸುತ್ತಿದ್ದಾಗ ತೆರೆದುಕೊಂಡ ಕೆಎಸ್‌ಆರ್‌ಟಿಸಿ ಬಸ್‌ ಬಾಗಿಲು; ನಿರ್ವಾಹಕ ಸಾವು

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ) ಬಸ್‌ ಚಲಿಸುತ್ತಿದ್ದಾಗ ಬಾಗಿಲು ತೆರೆದುಕೊಂಡಿದ್ದು, ನಿರ್ವಾಹಕರೊಬ್ಬರು ಕೆಳಗೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ಮೈಸೂರು ಜಿಲ್ಲೆಯ ಮಾರ್ಚಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಮೈಸೂರು ವಿಭಾಗದ ಕೆ.ಆರ್ ನಗರ ಘಟಕ ಚಾಲಕ ಕಂ ನಿರ್ವಾಹಕ ಎಚ್‌.ಪಿ ಯತೀಶ್ ಮೃತಪಟ್ಟಿದ್ದಾರೆ.

ಶುಕ್ರವಾರದಂದು 71 ಎಬಿ ಅನುಸೂಚಿಯಲ್ಲಿ ಕೆ.ಆರ್ ನಗರದಿಂದ ಮೂಲೆ ಪೆಟ್ಲು ಮಾರ್ಗದ ಬಸ್‌ನಲ್ಲಿ ಯತೀಶ್‌ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾರ್ಚಳ್ಳಿ ಬಳಿ ಬಸ್‌ ಚಲಿಸುತ್ತಿದ್ದಾಗ ಬಸ್‌ನ ಬಾಗಿಲು ಆಕಸ್ಮಿಕವಾಗಿ ತೆರೆದುಕೊಂಡಿದ್ದು, ಬಾಗಿಲ ಬಳಿಯೇ ನಿಂತಿದ್ದ ಯತೀಶ್‌ ಬಸ್‌ನಿಂದ ಕೆಳಗೆ ಬಿದ್ದಾರೆ. ಕಲ್ಲಿಗೆ ತಲೆ ಹೊಡೆದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ಸಂಸ್ಥೆಗಳನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾರಿಗೆ ಸಂಸ್ಥೆಗಳನ್ನು ನಿರ್ಲಕ್ಷಿಸಿರುವುದು ಈ ಘಟನೆಯಿಂದ ಸ್ಪಷ್ಟವಾಗಿ ಕಾಣುತ್ತಿದೆ. ಹಲವಾರು ಬಸ್‌ಗಳ ಬಿಡಿ ಭಾಗಗಳು ಹಾಳಾಗಿದ್ದರೂ, ಅವುಗಳನ್ನು ಬದಲಿರುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಬಹುತೇಕ ಬಸ್‌ಗಳು ಚಾಲನೆಗೆ ಯೋಗ್ಯವಾಗಿಲ್ಲ. ಆದರೂ ಕೂಡ ಬಲವಂತದಿಂದ ನಿರ್ವಾಹಕ ಮತ್ತು ಚಾಲಕರನ್ನು ರೂಟ್‌ ಮೇಲೆ ಕಳುಹಿಸುತ್ತಿದ್ದಾರೆ. ಪರಿಣಾಮ ಈ ರೀತಿಯ ದುರ್ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ವ್ಯಕ್ತವಾಗಿವೆ.

ನಾಲ್ಕು ಸಾರಿಗೆ ನಿಗಮಗಳ ಬಹುತೇಕ ಬಸ್‌ಗಳು ಸಮರ್ಪಕ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದಿದ್ದು, ಆ ಬಸ್‌ಗಳನ್ನೇ ಕಾರ್ಯಾಚರಣೆಗೆ ಬಿಡಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವರಾಗಲಿ, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಾಗಲಿ ಸರಿಯಾದ ಗಮನ ಹರಿಸುತ್ತಿಲ್ಲ. ಪರಿಣಾಮ ಸಾರ್ವಜನಿಕರು ಯೋಗ್ಯವಿಲ್ಲದ ಬಸ್‌ಗಳಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈಗಾಗಲೇ ಹಲವಾರು ಕಡೆ ಬಸ್‌ ಚಲಿಸುತ್ತಿದ್ದಾಗಲೇ ಚಕ್ರಗಳು ಬೇರ್ಪಟ್ಟಿರುವುದು, ಬ್ಲೇಡ್‌ಗಳು ಮುರಿದು ಅಪಘಾತಗಳು ಸಂಭವಿಸಿರುವುದು, ಬಸ್‌ ವಾಲಿಕೊಂಡಿರುವುದರ ಬಗ್ಗೆ ವರದಿಗಳು ಬರುತ್ತಿವೆ. ಆದರೂ, ಈ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅರಣ್ಯ ಸಂರಕ್ಷಣಾ ಕಾಯ್ದೆ; ವನ್ಯಜೀವಿ-ಮಾನವ ಪ್ರಾಣಿ ಸಂಘರ್ಷಕ್ಕೆ ದಾರಿ

“ಇಂದು ನಡೆದಿರುವ ಅವಘಡಕ್ಕೆ ಯಾರು ಜವಾಬ್ದಾರರಾಗುತ್ತಾರೆ. ಇಲ್ಲಿ ಒಂದು ಪ್ರಾಣವೇ ಹೋಗಿದೆ. ಇದಕ್ಕೆ ಕಾರಣ ಯಾರು, ಚಾಲನೆಗೆ ಯೋಗ್ಯವಾಗದ ರೀತಿ ಬಸ್ಸನ್ನು ಸಿದ್ಧಗೊಳಿಸಿ ರಸ್ತೆ ಮೇಲೆ ಹೋಗಲು ಬಿಟ್ಟ ತಾಂತ್ರಿಕ ವಿಭಾಗದ ಅಧಿಕಾರಿಗಳು ಹೊರುತ್ತಾರೆಯೋ, ಇಲ್ಲ ಯೋಗ್ಯವಾಗಿದೆ ಈ ಬಸ್‌ ತೆಗೆದುಕೊಂಡು ಹೋಗು ಅಂತ ಕಳಿಹಿಸಿದ ಘಟಕ ವ್ಯವಸ್ಥಾಪಕರು ಈ ಸಾವಿನ ಜವವ್ದಾರಿ ಹೊರುತ್ತಾರೆಯೋ? ಎಂಬ ಪ್ರಶ್ನೆಗಳು ಭುಗಿಲೆದ್ದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...