ಮೈಸೂರು | ಅರಮನೆ ಪ್ರವೇಶ ಶುಲ್ಕ ಹೆಚ್ಚಳ; ವಿದೇಶಿ ಪ್ರವಾಸಿಗರು ಹಿಂಜರಿಯುವ ಭೀತಿ

Date:

ಮೈಸೂರು ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ ಪ್ರವೇಶ ಶುಲ್ಕ ಹೆಚ್ಚಳವಾಗಿದ್ದು, ಅರಮನೆ ನೋಡಲು ಬರುವ ವಿದೇಶಿ ಪ್ರವಾಸಿಗರು ಇನ್ಮುಂದೆ ಭಾರೀ ಮೊತ್ತದ ಪ್ರವೇಶ ಶುಲ್ಕ ಪಾವತಿಸಬೇಕಾಗುತ್ತದೆ.

ಅರಮನೆ ಪ್ರವೇಶಕ್ಕೆ ₹100 ಇದ್ದ ಶುಲ್ಕವನ್ನು ಅರಮನೆ ಆಡಳಿತ ಮಂಡಳಿ ಏಕಾಏಕಿ ಬರೋಬ್ಬರಿ ₹1,000ಕ್ಕೆ ಏರಿಕೆ ಮಾಡಿದೆ.
ಇದರಿಂದ ವಿದೇಶಿ ಪ್ರವಾಸಿಗರಿಗೆ ತೊಂದರೆಯಾಗಲಿದ್ದು, ಅರಮನೆ ವೀಕ್ಷಣೆಗೆ ವಿದೇಶಿ ಪ್ರವಾಸಿಗರು ಹಿಂದೇಟು ಹಾಕುವ ಸಂಭವವಿದೆ.

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಪ್ರವೇಶ ಶುಲ್ಕ ಹೆಚ್ಚಿಸಿದ್ದು, ಇದರಿಂದ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುವ ಸಾಧ್ಯತೆಗಳಿದ್ದು, ಅರಮನೆ ಮಂಡಳಿಯ ತೀರ್ಮಾನಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಬಾರಿ ಶುಲ್ಕದ ಪರಿಣಾಮವಾಗಿ ವಿದೇಶಿಗರ ಸಂಖ್ಯೆ ಇಳಿಮುಖವಾದರೆ ಅದರ ನೇರ ಹೊಡೆತ ಟ್ರಾವೆಲ್ಸ್, ಟೂರಿಸಂ, ಹೋಟೆಲ್ ಉದ್ದಿಮೆ ಎಲ್ಲದರ ಮೇಲೂ ಪರಿಣಾಮ ಬೀರಲಿದ್ದು, ಇದನ್ನೇ ನಂಬಿಕೊಂಡಿರುವವರಿಗೆ ತೊಂದರೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪನವರ ಜನ್ಮದಿನಾಚರಣೆ

ಅರಮನೆ ಆಡಳಿತ ಮಂಡಳಿ ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಏರಿಸುವ ನಿರ್ಧಾರದ ಬಗ್ಗೆ ಯಾರೊಡನೆಯೂ ಚರ್ಚೆ ಮಾಡದೆ ತೀರ್ಮಾನ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮತ್ತೊಮ್ಮೆ ಪರಿಶೀಲನೆ ನಡೆಸಬೇಕೆನ್ನುವ ಆಗ್ರಹ ಕೇಳಿಬರುತ್ತಿದೆ.

ಕೊರೊನಾ ಸಮಯದಲ್ಲಿ ಪ್ರವಾಸೋದ್ಯಮ ಕುಸಿದಿದ್ದು, ಈಗತಾನೇ ಚೇತರಿಕೆ ಕಂಡಿದೆ. ಇದೀಗ ವಿದೇಶಿ ಪ್ರವಾಸಿಗರ ಪ್ರವೇಶ ಶುಲ್ಕ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...