ಮೈಸೂರು | ಅಗಲಿದ ಪತ್ರಕರ್ತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ

Date:

ಮೈಸೂರು ನಗರದ ಇಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಅಗಲಿದ ಪತ್ರಕರ್ತ ಸ್ನೇಹಿತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಪತ್ರಕರ್ತರು, ಮೃತರ ಕುಟುಂಬದವರು ಅಗಲಿದವರಿಗೆ ಸಂತಾಪ ಸೂಚಿಸಿದರು.

ಮೈಸೂರಿನ ವಿವಿಧ ವಾಹಿನಿಗಳಲ್ಲಿ ಕ್ಯಾಮೆರಾಮನ್‌ಳಾಗಿ ಕಾರ್ಯ ನಿರ್ವವಹಿಸಿಸುತ್ತಿದ್ದು, ಇತ್ತೀಚೆಗೆ ಅಗಲಿದ ಹರ್ಷ, ಸಂತೋಷ್, ಮಧುಸೂದನ್, ಹೇಮಂತ್‌ ಕುಮಾರ್ ಅವರಿಗೆ ಮೈಸೂರು ಪತ್ರಕರ್ತರ ಸ್ನೇಹ ಕೂಟದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮೃತ ಮಧುಸೂದನ್ ಅವರ ಸಹೋದರ ಡಾ. ಚಂದ್ರಶೇಖರ್ ಮಾತನಾಡಿ ಪತ್ರಕರ್ತರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಆದರೆ, ಆರೋಗ್ಯದ ಕಡೆಗೆ ಗಮನ ನೀಡದೆ ಅನೇಕ ಸಮಸ್ಯೆಗಳನ್ನು ತಂದುಕೊಳ್ಳುತ್ತಿದ್ದಾರೆ. ನನ್ನ ತಮ್ಮನು ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡದೆ ಇಂತಹ ಸ್ಥಿತಿ ಉಂಟಾಗಿದೆ ಎಂದು ದುಃತತಪ್ತರಾದರು. ಪತ್ರಕರ್ತರಿಗೆ ಆರೋಗ್ಯ ವಿಮೆ, ಆರ್ಥಿಕ ಬೆಂಬಲದಂತಹ ಕಾರ್ಯ ಮಾಡಿಕೊಳ್ಳುವುದು ಉತ್ತಮ. ಒತ್ತಡದ ಜೀವನದಿಂದ ಹೊರ ಬರಲು ದೈಹಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಆಹಾರದಲ್ಲಿಯೇ ಔಷಧ ಇರುವುದರಿಂದ ಪ್ರತಿಯೊಂದಕ್ಕೂ ಮಾತ್ರೆಗಳ ಮೊರೆ ಹೋಗದೆ, ಆಹಾರ, ವ್ಯಾಯಾಮದಲ್ಲಿ ಆರೋಗ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪತ್ರಕರ್ತ ಎಂ. ಆರ್. ಸತ್ಯನಾರಾಯಣ ಮಾತನಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ತಮ್ಮನ್ನೇ ನಂಬಿದ ಕುಟುಂಬ ಇದ್ದು, ಅವರ ಮುಂದಿನ ಭವಿಷ್ಯದ ಕುರಿತು ಚಿಂತನೆ ಮಾಡಬೇಕು ಎಂದರು.

ಮೃತ ಸಂತೋಷ್ ಅವರ ಪತ್ನಿ ಸುಜಾತಾ ಮಾತನಾಡಿ ಆರೋಗ್ಯ ಕೆಟ್ಟಾಗಲೇ ಜೀವನದ ನಿಜ ಅರ್ಥ ತಿಳಿಯುವುದು. ಹಾಗಾಗಿ, ಈಗಲೇ ಎಲ್ಲರೂ ಎಚ್ಚೆತ್ತು ಆರೋಗ್ಯ ಕಾಪಾಡಿಕೊಳ್ಳಬೇಕು. ನನ್ನ ಚಿಕ್ಕ ಮಕ್ಕಳನ್ನು ಬೆಳೆಸಿ ವಿದ್ಯಾಭ್ಯಾಸ, ಭವಿಷ್ಯ ರೂಪಿಸುವ ಚಿಂತೆ ಕಾಡುತ್ತಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಸತೀಶ್‌ ಕುಮಾರ್ ಮಾತನಾಡಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮದೇ ಜವಾಬ್ದಾರಿ ಅಗಿದೆ. ಕೈಲಾದಷ್ಟು ಉಳಿತಾಯ, ಆರೋಗ್ಯ ವಿಮೆ ಮಾಡಿಸಿಕೊಂಡರೆ ಅಪತ್ಕಾಲದಲ್ಲಿ ಕೈ ಹಿಡಿಯುತ್ತವೆ. ಈ ಕುರಿತು ಚಿಂತನೆ ಅಗತ್ಯ ಎಂದರು.

ಹಿರಿಯ ಪತ್ರಕರ್ತ ಕೆ. ಪಿ. ನಾಗರಾಜ್ ಮಾತನಾಡಿ ಮೃತಪಟ್ಟ ನಾಲ್ವರು ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ದಾನಿಗಳು ಮುಂದೆ ಬಂದಿದ್ದಾರೆ. ಅವರ ಸಹಕಾರರಿಂದ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ತೆಗೆದುಕೊಳ್ಳಲಾಗುವುದು. ಆರ್ಥಿಕ, ಆರೋಗ್ಯ, ವೃತ್ತಿ ಹಾಗೂ ಕೌಟುಂಬಿಕ ಶಿಸ್ತು ಕಾಪಾಡಿಕೊಳ್ಳುವುದು ಮುಖ್ಯ ಎಂದು ಹೇಳಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್. ಟಿ. ರವಿಕುಮಾರ್ ಮಾತನಾಡಿ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗಾಗಿ ಜೂ.25 ರಂದು ಜಯದೇವ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ವೃತ್ತಿ ನಿರತ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ಹೊಂದಿರಬೇಕು. ಆದರೆ, ಕೆಲಸದ ಒತ್ತಡದಿಂದಾಗಿ ಆಹಾರ, ಆರೋಗ್ಯದ ಕಡೆಗೆ ಗಮನ ನೀಡುವುದು ಕಡಿಮೆ ಅಗಿ ಕಿರಿಯ ವಯಸ್ಸಿನಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ, ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | 1886 ರಲ್ಲಿ ಬ್ರಿಟಿಷರೇ ನಿರ್ಮಿಸಿದ ಕನ್ನಡ ಶಾಲೆಯಲ್ಲೀಗ 600 ಕ್ಕೂ ಅಧಿಕ ಮಕ್ಕಳ ಕಲಿಕೆ

ಹಿರಿಯ ಪತ್ರಕರ್ತರಾದ ರಾಮ್, ಸಿ. ಎಂ. ಕಿರಣ್‌ ಕುಮಾರ್, ಜಯಂತ್, ರಂಗಸ್ವಾಮಿ ಮಾದಾಪುರ, ಎಸ್.ಆರ್.ಮಧುಸೂದನ್, ವಾಟಾಳ್ ಆನಂದ್, ಸುಧೀಂದ್ರ, ಮಹದೇವ ಸ್ವಾಮಿ ಇತರರು ಸಂತಾಪ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...