ಮೈಸೂರು | ಪಿರಿಯಾಪಟ್ಟಣ ದಲಿತರಿಗೆ ಅನ್ಯಾಯ: 876ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

Date:

ದಲಿತರಿಗೆ ಅನ್ಯಾಯವಾಗಿದ್ದು, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ 876 ದಿನಗಳಿಂದ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ತಾಲೂಕು ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಮೈಸೂರು ಜಿಲ್ಲಾಡಳಿತ, ತಾಲೂಕು ಆಡಳಿತ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ.

ದೊಡ್ಡಹೊಸೂರು ಗ್ರಾಮದ ದಲಿತ ಮಹಿಳೆ ಚನ್ನಮ್ಮರ ಭೂ ಸಮಸ್ಯೆ, ಮುಮ್ಮಡಿ ಕಾವಲು ಗ್ರಾಮದ ಸರ್ವೆ ನಂ 1 ರ ಪಕ್ಕಾ ಪೋಡು ದುರಸ್ತಿ, ಕದರೇಗೌಡನ ಕೊಪ್ಪಲು ಗ್ರಾಮ ಠಾಣಾ ಒತ್ತುವರಿ, ಚನ್ನಕಲ್ ಕಾವಲು ಭೂ ಸಮಸ್ಯೆ, ಕೊಪ್ಪ ಗರಸಿಯಾ ಕಾಲೊನಿ ಸಮಸ್ಯೆ, ಕೊಣಸೂರು ಸರ್ವೆ ನಂ138ರ 3.20 ಎಕರೆ ಜಮೀನನ್ನು ಅತಿಕ್ರಮವಾಗಿ ಮಾಡಿರುವ ಒತ್ತುವರಿ ತೆರವು, ಸರ್ವೆ ನಂ 61 ರ ಇನಾಂ ಜಮೀನಿಗೆ ಸಾಗುವಳಿ ನೀಡುವಂತೆ, ಸರ್ವೆ ನಂ 93 ರಲ್ಲಿ ಅನುಭವದಲ್ಲಿರುವ ರೈತರಿಗೆ ಖಾತೆ ಮಾಡಿ ಕೊಡುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದು,ಆದರೆ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಬೆಣಗಾಲು ಗ್ರಾಮದ ಸರ್ವೆ ನಂ 42 ರ ಬಿಡಿಎ ಜಾಗವನ್ನು ಇ ಕಂ ಕಾಫಿಕ್ಯೂರಿಂಗ್ ಮಾಲೀಕರು ಮಾಡಿರುವ ಒತ್ತುವರಿ, ಕೆಲವು ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನಡೆಸಿರುವ ಅವ್ಯವಹಾರಗಳ ಬಗ್ಗೆ, ಸೂಳೆಕೋಟೆ ಗ್ರಾಮದ ಸರ್ವೆ ನಂ 10 ರ ಮೂಲ ವಾರಸುದಾರರ ಭೂ ದಾಖಲೆಗಳ ತಿರುಚಿರುವ ಬಗ್ಗೆ, ದಲಿತ ದಸಂಸ ಪ್ರತಿಭಟನೆ ನಡೆಸಲು ಸೂಕ್ತ ಸ್ಥಳ ಗುರುತಿಸಿಕೊಡುವಂತೆ ಒತ್ತಾಯಿಸಿ ದಸಂಸ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ತಹಶೀಲ್ದಾರ್ ನಿಸರ್ಗ ಪ್ರಿಯ, “ಮನವಿಯನ್ನು ಪರಿಶೀಲಿಸಲಾಗಿದೆ. ಧರಣಿ ಕುಳಿತುಕೊಳ್ಳಲು ತಾಲೂಕು ಕಚೇರಿಯಿಂದ ಯಾವುದೇ ಅನುಮತಿ ನೀಡಲು ಅವಕಾಶ ಇರುವುದಿಲ್ಲ. ಈ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ನಿರೀಕ್ಷಕರಲ್ಲಿ ಮನವಿ ಸಲ್ಲಿಸಬಹುದು” ಎಂದು ದಸಂಸ ಮನವಿಗೆ ಹಿಂಬರಹ ನೀಡಿರುತ್ತಾರೆ.

WhatsApp Image 2024 10 05 at 4.50.17 PM 1

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಹಿರಿಯ ಮುಖಂಡ ಜಗದೀಶ್, “ಬಾಬಾ ಸಾಹೇಬರ ಸಂವಿಧಾನದಡಿ ತಾಲೂಕು ಕಛೇರಿ ಮುಂದೆ ಪ್ರತಿಭಟನೆ ಮಾಡಲು ಅವಕಾಶವಿಲ್ಲ ಎಂದು ಅವಮಾನಿಸಿದ್ದಾರೆ. ಹೋರಾಟದ ಹಕ್ಕನ್ನು ಕಸಿದುಕೊಳ್ಳುವ ಕುತಂತ್ರ ಅಧಿಕಾರಿಗಳದ್ದು. ಇದಕ್ಕೆಲ್ಲ ಬಗ್ಗಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

ಮುಮ್ಮಡಿ ಕಾವಲ್ ದೊಡ್ಡಯ್ಯ ಮಾತನಾಡಿ, “ಹೋರಾಟಗಾರರ ಚಾಪೆ, ಬಾಬಾ ಸಾಹೇಬರ ಫೋಟೋ, ಬ್ಯಾನರ್ ಕಸಿದುಕೊಂಡು ಹೋರಾಟ ಹತ್ತಿಕ್ಕಲು ಹೊರಟವರು, ಈಗ ಸ್ಥಳವಿಲ್ಲ ಅಹೋರಾತ್ರಿ ಧರಣಿಗೆ ಪೊಲೀಸ್ ಇಲಾಖೆಯನ್ನು ನಿವೇದಿಸಿಕೊಳ್ಳಿ ಎಂದಿದ್ದಾರೆ. ಅದರ ಅನುಸಾರ ಪೊಲೀಸ್ ನಿರೀಕ್ಷಕರಿಗೂ ಮನವಿ ಮಾಡಿದ್ದು, ಭದ್ರತೆ ನೀಡುವುದಾಗಿ ತಿಳಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ, ಯಾರ ಒತ್ತಡಕ್ಕೂ, ಅಧಿಕಾರಿಗಳ ಕುತಂತ್ರಕ್ಕೆ ಮಣಿಯದೆ ನಮ್ಮ ಹೋರಾಟ ಮುಂದುವರಿಯುತ್ತದೆ. ತಹಶೀಲ್ದಾರ್ ಅವರ ನಿಲುವನ್ನು ಪ್ರಶ್ನಿಸಿ ಮುಂದಿನ ಹೋರಾಟ ನಡೆಸಲಾಗುವುದು” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...