ಯದುವೀರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದ ಮೋದಿ: ಪ್ರಧಾನಿ ಪ್ರಮಾದಕ್ಕೆ ಕಾಲೆಳೆದ ನೆಟ್ಟಿಗರು

Date:

ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದು ಉಚ್ಚರಿಸಿ ಮುಜುಗರಕ್ಕೀಡಾಗಿದ್ದಾರೆ.

2024ರ ಲೋಕಸಭೆ ಚುನಾವಣಾ ಪ್ರಯುಕ್ತ ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವ ವೇಳೆ ಈ ಪ್ರಮಾದ ನಡೆದಿದೆ.

ಪ್ರಧಾನಿ ಅವರು ತಮ್ಮ ಭಾಷಣದ ಕೊನೆಯಲ್ಲಿ, “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು. ಮೈಸೂರಿನ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ಮಂಡ್ಯದ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ, ಚಾಮರಾಜನಗರದ ಅಭ್ಯರ್ಥಿ ಬಾಲರಾಜ್ ಮತ್ತು ಹಾಸನದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಬೇಕು” ಎಂದು ಮತದಾರರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತದಾರರಲ್ಲಿ ಮನವಿ ಮಾಡಿಕೊಳ್ಳುವ ವೇಳೆ ಮೈಸೂರು ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರನ್ನು ತಪ್ಪಾಗಿ ಉಚ್ಚರಿಸಿದ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ.

”ಮೈಸೂರಿನ ಎನ್‌ಡಿಎ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಯಮರಾಜ ಒಡಿಯರ್‌” ಎಂದು ಹೇಳಿದ ಪ್ರಧಾನಿ ಮೋದಿ ತಕ್ಷಣ ಸಾವರಿಸಿಕೊಂಡು “ಚಾಮರಾಜ ಒಡೆಯರ್” ಎಂದು ಪುನರುಚ್ಚರಿಸಿದ್ದಾರೆ.

ಈ ವಿಡಿಯೋ ತುಣುಕನ್ನು ವೈರಲ್‌ ಮಾಡಿರುವ ನೆಟ್ಟಿಗರು ಪ್ರಧಾನಿ ಮೋದಿ ಅವರ ಬದಲು ಬೇರೆ ಯಾರಾದರೂ ರಾಜವಂಶದ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದರೆ ಮಾಧ್ಯಮಗಳು ಅದನ್ನೇ ದೊಡ್ಡ ಸುದ್ದಿಯಾಗಿ ಮಾಡುತ್ತಿದ್ದವು ಎಂದು ಕಾಲೆಳೆದಿದ್ದಾರೆ

”ನರೇಂದ್ರ ಮೋದಿಯ ಬದಲು ಇತರ ರಾಜಕಾರಣಿಗಳು ‘ಚಾಮರಾಜ ಒಡೆಯರ್’ ಅವರನ್ನು ‘ಯಮರಾಜ್ ಒಡಿಯರ್’ ಎಂದು ಉಲ್ಲೇಖಿಸಿದ್ದರೆ ವ್ಯಕ್ತವಾಗುತ್ತಿದ್ದ ಆಕ್ರೋಶವನ್ನು ಊಹಿಸಿ. ರಾಷ್ಟ್ರೀಯ ಮಾಧ್ಯಮಗಳು ಇದೇ ವಿಡಿಯೋ ಕ್ಲಿಪ್ ಇಟ್ಟುಕೊಂಡು ದಿನದ 24 ಗಂಟೆಯಂತೆ ಇಡೀ ವಾರ(24/7) ಪ್ರಸಾರ ಮಾಡುತ್ತಿದ್ದವು” ಎಂದು ಫ್ಯಾಕ್ಟ್‌ ಚೆಕರ್‌ ಮಹಮ್ಮದ್‌ ಝುಬೈರ್‌ ಟ್ವೀಟ್‌ ಮಾಡಿದ್ದಾರೆ.

ನರೇಂದ್ರ ಮೋದಿ ಬೆಂಬಲಿಗರು ಮೋದಿ ಪರವಾಗಿ ಪ್ರತಿಕ್ರಿಯಿಸಿದ್ದು, “ಯಮರಾಜ ಹಿಂದೂಗಳ ದೇವರು. ಯಮರಾಜನ ಹೆಸರು ತಪ್ಪಿ ಹೇಳಿದ್ದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅಲ್ಲದೆ, ಪ್ರಧಾನಿ ಅವರು ಎರಡೇ ಸೆಕೆಂಡಿನಲ್ಲಿ ತಮ್ಮ ತಪ್ಪನ್ನು ತಿದ್ದಿಕೊಂಡಿದ್ದಾರೆ” ಎಂದು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ವಿಜಯಪುರ | ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ: ಎಂ ಬಿ ಪಾಟೀಲ್

ಈ ಹಿಂದೆ, ಸರ್‌ ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನು ರಾಹುಲ್‌ ಗಾಂಧಿ ತಪ್ಪಾಗಿ ಉಚ್ಚ ರಿಸಿದ್ದಕ್ಕೆ, ಪ್ರಧಾನಿ ಮೋದಿ ಮಾಡಿರುವ ಟೀಕೆಯನ್ನೂ ಝುಬೈರ್‌ ಅವರು ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಶ್ವೇಶ್ವರಯ್ಯ ಅವರ ಹೆಸರನ್ನು ಐದು ಸಲ ಉಚ್ಚರಿಸುವಂತೆ ರಾಹುಲ್‌ ಗಾಂಧಿಗೆ ಸವಾಲು ಹಾಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...