ಮೈಸೂರು | ಭಾಷೆಯ ಮೂಲಕ ಕಾವ್ಯ ಉಸಿರಾಡುತ್ತದೆ:‌ ಪ್ರೊ. ಚ ಸರ್ವಮಂಗಳಾ

Date:

ಭಾಷೆಯ ಮೂಲಕ ಕಾವ್ಯ ಉಸಿರಾಡುತ್ತದೆ. ಆ ಮೂಲಕ ಕಾವ್ಯದಲ್ಲಿ ಬದುಕೂ ಸಹ ಉಸಿರಾಡುತ್ತದೆ. ಹಾಗಾಗಿ, ಕವಿಗಳು ಪದಗಳನ್ನು ದುಂದುವೆಚ್ಚ ಮಾಡಬಾರದು ಎಂದು ಹಿರಿಯ ಸಾಹಿತಿ ಪ್ರೊ. ಚ ಸರ್ವಮಂಗಳಾ ಕವಿಗಳಿಗೆ ಕಿವಿಮಾತು ಹೇಳಿದರು.

ಮೈಸೂರು ನಗರದ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಸರಾ ಕವಿ- ಕಾವ್ಯ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾವ್ಯೋತ್ಸವ ಮತ್ತು ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಪದಗಳ ಬಳಕೆಯಲ್ಲಿ ಕವಿಗಳು ಎಚ್ಚರ ವಹಿಸಬೇಕು. ಭಾಷೆಯನ್ನು ಆಡಂಬರವಾಗಿ ಬಳಸಬಾರದು. ಅನುಭವನ್ನೇ ಕಾವ್ಯದ ಅಂಗಡಿಯಾಗಿ ಅಭಿವ್ಯಕ್ತಿಸಬೇಕು. ಮನಸ್ಸಿಗೆ ಹಿಂಸೆಯಾದರೂ ಸರಿ ಯಾವತ್ತಿಗೂ ಕಾವ್ಯದಲ್ಲಿ ಸತ್ಯವನ್ನೇ ಹೇಳಬೇಕು. ಕಾವ್ಯ ರಚನೆಯ ಅಗತ್ಯಕ್ಕೆ ಅನುಗುಣವಾಗಿ ಪದಗಳನ್ನು ಬಳಸಬೇಕು. ಆದರೆ, ಕೆಟ್ಟ ಮತ್ತು ಹೊಲಸು ಪದಗಳು ಬಳಸಿ ಭಾಷೆಯ ಅಂದವನ್ನು, ಸೌಂದರ್ಯವನ್ನು ಕೆಡಿಸಬಾರದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕವಿಗಳು ಪದ ಬಳಕೆಯಲ್ಲಿ ಜಿಪುಣತನ ತೋರಿಸಬೇಕು. ಕವಿತೆ ಓದುಗರ ಎದೆಯೊಳಗೆ ಸದಾಶಯದ ಬೀಜ ಮೊಳೆಯುವಂತೆ ಪರಿಣಾಮಕಾರಿಯಾಗಿರಬೇಕು. ಆದರೆ, ಪ್ರಸ್ತುತ ಕಾಲಘಟ್ಟದಲ್ಲಿ ಕೆಟ್ಟ ಭಾಷೆಯ ಪ್ರಯೋಗ ನಡೆದಿದೆ. ಇದು ವ್ಯಾಪಕವಾಗುತ್ತಿರುವುದು ವಿಷಾದನೀಯ. ಕಾವ್ಯದಲ್ಲಿ ಜೀವಂತ ಭಾಷೆ ಬಳಸಬೇಕು” ಎಂದು ಯುವ ಕವಿಗಳಿಗೆ‌ ಕರೆ ನೀಡಿದರು.

“ಭಾಷೆ ಎಂದೂ ಹೊಲಸಾಗಬಾರದು. ಅದು ಹೊಲಸದಾರೆ ದೇಶ, ಸಾಹಿತ್ಯ, ಸಂಸ್ಕೃತಿ, ಧರ್ಮ ಎಲ್ಲವೂ ನಾಶವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಸವಣ್ಣನವರ ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಎಂಬ ವಚನದ ಭಾಷೆಯು ಕನ್ನಡ ಭಾಷೆಯ ಸೌಂದರ್ಯವನ್ನು ಮತ್ತು ಮನುಷ್ಯ ಬದುಕಿನಲ್ಲಿ ಅಳವಡಿಕೊಳ್ಳಬೇಕಾದ ಮೌಲ್ಯವನ್ನು ಸಾರುತ್ತದೆ” ಎಂದು ತಿಳಿಸಿದರು.

“ನಾವು ಕೆಟ್ಟಕಾಲದಲ್ಲಿ ಬದುಕುತ್ತಿದ್ದೇವೆ. ಭಾಷೆಗೂ ಒಂದು ಧರ್ಮವಿದ್ದು, ಕೆಟ್ಟ ಭಾಷೆ ಮತ್ತು ಕೆಟ್ಟ ಪದ ಬಳಕೆಯ ಮೂಲಕ ಭಾಷಾಧರ್ಮವನ್ನು ನಾಶ ಮಾಡಲಾಗುತ್ತಿದೆ. ಬದುಕು ಮತ್ತು ಅನುಭವ ಭಾಷೆಯಲ್ಲಿ ಶಬ್ದಚಿತ್ರವಾಗಿ ಬಂದಾಗ ಜೀವಂತ ಕಾವ್ಯ ಮೂಡುತ್ತದೆ” ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮಾತನಾಡಿ, “ಇಂದು ಪ್ರಪಂಚದಾದ್ಯಂತ ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧವನ್ನು ನಿಲ್ಲಿಸುವ ಶಕ್ತಿ ಕಾವ್ಯಕ್ಕೆ ಇದೆ. ಹೀಗಾಗಿ, ಯುದ್ಧೋನ್ಮಾದಕ್ಕೆ ಪ್ರತಿರೋಧವಾಗಿ ಕವಿಗಳು ಕಾವ್ಯವನ್ನು ಕಟ್ಟಬೇಕು. ಆ ಮೂಲಕ ಬಂದೂಕು, ಮದ್ದು ಗುಂಡಿನ ಸದ್ದಡಗಿಸಲು, ಕಾವ್ಯವೇ ಮದ್ದುಗುಂಡುಗಳಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯಡಿಯೂರಪ್ಪನವರ ಕಣ್ಣೀರಧಾರೆಗೆ ಮಕ್ಕಳೇ ಕಾರಣ : ಆಯನೂರ್  ಮಂಜುನಾಥ್

ಹಿರಿಯ ಸಾಹಿತಿ ಡಾ. ಸಿ ಪಿ ಕೃಷ್ಣಕುಮಾರ್, ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ ಸತೀಶ್ ಜವರೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಹೆಚ್ ಕೆ ರಾಮು, ಮೈಸೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಈ ಸಿ ನಿಂಗರಾಜ್ ಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಬಿ ಎಸ್ ಸತೀಶ್, ಮಡಿಲು ಸೇವಾ ಟ್ರಸ್ಟ್ ಸಂಸ್ಥಾಪಕ ಅರಸು ಮಡಿಲು, ನಿವೃತ್ತ ಮುಖ್ಯ ಶಿಕ್ಷಕ ಯೋಗೇಂದ್ರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಪಿ ಶಾಂತರಾಜು, ಪದಾಧಿಕಾರಿಗಳಾದ ಟಿ ಲೋಕೇಶ್ ಹುಣಸೂರು, ಡಾ. ಡಿ ಕೆ ಉಷಾ, ಚಂದ್ರು‌ ಮಂಡ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...