ಮೈಸೂರು | ಚುನಾವಣೆ ಹಿನ್ನೆಲೆ ಪೊಲೀಸ್‌ ಕಾರ್ಯಾಚರಣೆ ಆರಂಭ

Date:

  • ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ
  • ಅಪರಾಧ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ

ಮೈಸೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸರು ಚುನಾವಣೆಗೆ ಮುಂಚಿತವಾಗಿ ಎಲ್ಲೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕರ್ನಾಟಕ ಪೊಲೀಸ್ ಕಾಯಿದೆ 1963 ಸೇರಿದಂತೆ ಕಾನೂನಿನ ಹಲವು ನಿಬಂಧನೆಗಳ ಅಡಿಯಲ್ಲಿ ಅಪರಾಧ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ.

ಅಂಗಡಿಗಳು, ಬಾರ್‌ಗಳು, ಜಾಯಿಂಟ್‌ಗಳು ಮತ್ತು ಸುತ್ತಮುತ್ತಲಿನ ಚಹಾ ಅಂಗಡಿಗಳು ಸೇರಿದಂತೆ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ಪೊಲೀಸರು ತಮ್ಮ ವಿಶೇಷ ಅಭಿಯಾನ ಆರಂಭಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 176 ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ. ಎಲ್ಲ ಜನಪ್ರಿಯ ಸ್ಥಳಗಳ ಮೇಲೆ ದಾಳಿ ನಡೆಸಿ, ಗುಂಪು ಸೇರುವವರನ್ನು ಪರಿಶೀಲಿಸುತ್ತಿರುವುದರಿಂದ ಅಭಿಯಾನದ ಪರಿಣಾಮ ಗೋಚರಿಸುತ್ತಿದೆ.

“ಯಾವುದೇ ಸ್ಪಷ್ಟ ಕಾರಣವಿಲ್ಲದೆ ನಡುರಾತ್ರಿವರೆಗೆ ಹೆಚ್ಚು ಸಮಯ ಕಳೆಯುತ್ತಿರುವುದು ಕಂಡುಬಂದಿದೆ. ಹಾಗಾಗಿ, ಕೆಲವು ಬೀದಿ ಅಪರಾಧಗಳನ್ನು ಪರಿಶೀಲಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ” ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರದೇಶ ಪ್ರಾಬಲ್ಯ ಅಭಿಯಾನವನ್ನು ಯೋಜಿಸಿದ್ದೇವೆ. ಕೆಲವು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಗುಂಪಿನ ಸದಸ್ಯರನ್ನು ವಿಚಾರಿಸುತ್ತಾರೆ. ಗುಂಪು ಸೇರಿದ್ದರ ಉದ್ದೇಶವನ್ನು ಪರಿಶೀಲಿಸುತ್ತಾರೆ” ಎಂದು ಹೇಳಿದ್ದಾರೆ.

“ಕುಡಿದು ವಾಹನ ಚಲಾಯಿಸುವುದು, ಅಸಭ್ಯ ಭಾಷೆ ಬಳಸುವುದು ಮತ್ತು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಬಹುತೇಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದೂವರೆ ತಿಂಗಳಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ, ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದಾರೆ? ಕೊಪ್ಪಳ | ವಿವಿಧ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಭೇಟಿ; ತಪಾಸಣೆ

“ರೆಸಾರ್ಟ್‌, ಡಾಬಾ, ವಸತಿ ಪ್ರದೇಶ, ಹೊರವಲಯ, ಮಾರುಕಟ್ಟೆ, ಮದ್ಯದಂಗಡಿಗಳು ಮತ್ತು ಬಯಲು ಪ್ರದೇಶಗಳಂಥ  ಸ್ಥಳಗಳಲ್ಲಿ ದಿನದ 24 ಗಂಟೆಯೂ ನಡೆಯುವ ಈ ಅಭಿಯಾನಕ್ಕೆ ಆಯಾ ಸ್ಥಳೀಯ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂಥ ಸ್ಥಳಗಳಲ್ಲಿ ದುಷ್ಕರ್ಮಿಗಳು ಕ್ರಿಮಿನಲ್ ಯೋಜನೆಗಳನ್ನು ರೂಪಿಸಲು ಹೊಂಚಾಕುತ್ತಾರೆ” ಎಂದು ಲಾಟ್ಕರ್ ವಿವರಿಸಿದರು.

“ಮೈಸೂರು ಜಿಲ್ಲೆಯಲ್ಲಿ 22 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಕಾರ್ಯಾಚರಣೆ ವೇಳೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುವ ಜನರನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುತ್ತದೆ. ಯಾರಾದರೂ ತಪ್ಪು ಮಾಡಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...