ಮೈಸೂರು | ಮಾಡದ ಅಪರಾಧಕ್ಕೆ 2 ವರ್ಷ ಜೈಲು: ಆದಿವಾಸಿಗಳ ಬದುಕಿನಲ್ಲಿ ಪೊಲೀಸರ ‘ಚೆಲ್ಲಾಟ’

Date:

2020ರಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಕೊಲೆಯ ಆಯಾಮ ಕೊಟ್ಟು ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದರು. ತಪ್ಪೊಪ್ಪಿಗೆಯನ್ನೂ ಬರೆಸಿಕೊಂಡಿದ್ದರು. ಅಪರಾಧವೇ ನಡೆಯದ ಪ್ರಕರಣದಲ್ಲಿ ಅಮಾಯಕ ವ್ಯಕ್ತಿ 2022ರಿಂದ ಜೈಲು ವಾಸ ಅನುಭವಿಸುತ್ತಿದ್ದರು. ಇದೀಗ, ಕಾಣೆಯಾಗಿದ್ದ ಮಹಿಳೆ ಪತ್ತೆಯಾಗಿದ್ದಾರೆ. ಜೈಲು ಸೇರಿದ್ದ ಅಮಾಯಕ ಜೈಲಿನಿಂದ ಹೊರಬಂದಿದ್ದಾರೆ- ಇದು ಮೈಸೂರು ಜಿಲ್ಲೆಯ ಕುಶಾಲನಗರ ತಾಲೂಕಿನ ಆದಿವಾಸಿ ಸಮುದಾಯದ ಸುರೇಶ್‌ ಅವರ ಕತೆ.

ಸುರೇಶ್‌ ಅವರು ತನ್ನ ಪತ್ನಿ ಮಲ್ಲಿಗೆ ಅವರನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಿ 2022ರಲ್ಲಿ ಪೊಲೀಸರು ಬಂಧಿಸಿದ್ದರು. ಇದೀಗ, ತಮ್ಮ ಪ್ರಿಯಕರನೊಂದಿಗೆ ಊರು ತೊರೆದಿದ್ದ ಮಲ್ಲಿಗೆ ಅವರು ಪತ್ತೆಯಾಗಿದ್ದಾರೆ. ಈಗ, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುರೇಶ್‌ ನಿರಪರಾಧಿ ಎಂಬುದು ಸ್ಪಷ್ಟವಾಗಿದೆ. ಅಲ್ಲದೆ, ಮಲ್ಲಿಗೆ ಅವರದ್ದು ಎಂದು ಅಂತ್ಯಸಂಸ್ಕಾರ ಮಾಡಲಾದ ಮೃತದೇಹ ಯಾರದ್ದು ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಮಾತ್ರವಲ್ಲ, ಬುಡಕಟ್ಟು ಸಮುದಾಯದ ವ್ಯಕ್ತಿ ಮತ್ತು ಆತನ ಕುಟುಂಬದ ಜೀವನದಲ್ಲಿ ಪೊಲೀಸರು ‘ಚೆಲ್ಲಾಟ’ ಆಡಿದ್ದಾರೆಂದು ಆಕ್ರೋಶವೂ ವ್ಯಕ್ತವಾಗಿದೆ.

ಆದಿವಾಸಿ ‘ಜೇನು ಕುರುಬ’ ಸಮುದಾಯದ ಸುರೇಶ್‌ ಅವರು 2020ರ ನವೆಂಬರ್‌ನಲ್ಲಿ ತಮ್ಮ ಪತ್ನಿ ಕಾಣೆಯಾಗಿದ್ದಾರೆ ಎಂದು ಕುಶಾಲನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದೇ ಸಂದರ್ಭದಲ್ಲಿ, 2020ರ ನವೆಂಬರ್ 12ರಂದು ಕುಶಾಲನಗರ ಬಳಿಯ ಬೆಟ್ಟದಪುರದಲ್ಲಿ ಅಪರಿಚಿತ ಮಹಿಳೆಯ ಮೃತದೇಹವೂ ಪತ್ತೆಯಾಗಿತ್ತು. ಆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ‘ಬಲವಾದ ಪೆಟ್ಟು ಬಿದ್ದು, ಆಕೆ ಮೃತಪಟ್ಟಿದ್ದಾರೆ’ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಮರಣೋತ್ತರ ವರದಿಯನ್ನು ಇಟ್ಟುಕೊಂಡು, ಪತ್ತೆಯಾದ ಮೃತದೇಹವು ನಾಪತ್ತೆಯಾಗಿದ್ದ ಮಲ್ಲಿಗೆ ಅವರದ್ದೇ ಎಂದು ಬೆಟ್ಟದಪುರ ಪೊಲೀಸರು ವರದಿ ಸಿದ್ದಪಡಿಸಿದರು. ಜೊತೆಗೆ, ಮಲ್ಲಿಗೆ ಅವರ ತಾಯಿ ಕೂಡ ‘ತಮ್ಮ ಮಗಳು ಕೊಲೆಯಾಗಿದ್ದಾಳೆ’ ಎಂದು ದೂರು ನೀಡಿದರು. ಅವರ ದೂರಿನ ಆಧಾರದ ಮೇಲೆ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಅಪರಿಚಿತ ಆರೋಪಿ ಎಂದು ಉಲ್ಲೇಖಿಸಲಾಗಿತ್ತೇ ಹೊರತು, ಸುರೇಶ್‌ ಹೆಸರು ಇರಲಿಲ್ಲ.

ಈ ವರದಿ ಓದಿದ್ದೀರಾ?: ಗಚ್ಚಿಬೌಲಿ ಅರಣ್ಯದಲ್ಲಿ ಐಟಿ ಪಾರ್ಕ್‌: ವಿದ್ಯಾರ್ಥಿಗಳ ಹೋರಾಟಕ್ಕೆ ಬಿಆರ್‌ಎಸ್ ಬೆಂಬಲ; ರಾಹುಲ್ ಗಾಂಧಿ ಮೌನ

ಆದಾಗ್ಯೂ, ಮಲ್ಲಿಗೆ ಅವರನ್ನು ಸುರೇಶ್‌ ಅವರೇ ಕೊಲೆ ಮಾಡಿದ್ದಾರೆ ಎಂದು ಚಾರ್ಜ್‌ಶೀಟ್‌ ಸಿದ್ದಪಡಿಸಿದ ಪೊಲೀಸರು, ಸುರೇಶ್ ಅವರನ್ನು ಬಂಧಿಸಿದ್ದರು. ಅಲ್ಲದೆ, 2022ರ ಮೇ 22ರಂದು ಸುರೇಶ್‌ ಅವರಿಂದ ಪೊಲೀಸರು ಸ್ವ-ಇಚ್ಛಾ ಹೇಳಿಕೆಯನ್ನೂ ಬರೆಸಿಕೊಂಡಿದ್ದರು. ಅದರಲ್ಲಿ, “ನನ್ನ ಹೆಂಡತಿ ಮನೆ ಬಿಟ್ಟು ಹೋದ ಮೇಲೆ, ಆಕೆಯ ಮೇಲೆ ನಾನು ದ್ವೇಷದಿಂದ ಇದ್ದೆ. ಆಕೆ ಮನೆಗೆ ಬಂದ ಬಳಿಕ ಪುಸಲಾಯಿಸಿ ಕುಶಾಲನಗರದ ಬಾರ್‌ಗೆ ಕರೆದುಕೊಂಡು ಹೋಗಿದ್ದೆ. ಅಲ್ಲಿ ಇಬ್ಬರೂ ಮದ್ಯ ಸೇವಿಸಿ ನಂತರ ಶ್ಯಾನುಭೋಗನಹಳ್ಳಿಗೆ ಕರೆದೊಯ್ದು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದೆ” ಎಂಬುದಾಗಿ ಬರೆಸಿಕೊಂಡಿದ್ದರು ಎಂದು ಪ್ರಜಾವಾಣಿ ವರದಿ ಮಾಡಿದೆ.

ಸದ್ಯ, ಈಗ ಮಲ್ಲಿಗೆ ಪತ್ತೆಯಾಗಿದ್ದಾರೆ. ಪೊಲೀಸರು ಎಸಗಿದ ಕರ್ತವ್ಯಲೋಪ ಕೃತ್ಯ ಬಯಲಾಗಿದೆ. ಅಪರಾಧವೇ ಮಾಡದ ವ್ಯಕ್ತಿಯಿಂದ ಪೊಲೀಸರು ಹೇಗೆ ಸ್ವ-ಇಚ್ಛಾ ಹೇಳಿಕೆ ಬರೆಸಿಕೊಂಡರು? ಸುರೇಶ್‌ಗೆ ಪೊಲೀಸರು ಚಿತ್ರಹಿಂಸೆ ಕೊಟ್ಟು, ತಪ್ಪೊಪ್ಪಿಗೆ ಬರೆಸಿಕೊಂಡಿದ್ದರೇ? ಎಂಬ ಶಂಕೆ ವ್ಯಕ್ತವಾಗಿದೆ. ಮಾತ್ರವಲ್ಲ, 2020ರಲ್ಲಿ ಪತ್ತೆಯಾಗಿದ್ದ ಮಹಿಳೆಯ ಮೃತದೇಹ ಯಾರದ್ದು? ಆ ಮೃತದೇಹದ ಹಿಂದಿನ ಕತೆಯೇನು? ಅದು ಕೊಲೆಯೇ? ಆ ಕೊಲೆಯನ್ನು ಮುಚ್ಚಿಹಾಕಲು ಪೊಲೀಸರು ಸುರೇಶ್‌ ಮತ್ತು ಮಲ್ಲಿಗೆ ಅವರನ್ನು ಬಳಸಿಕೊಂಡರೇ? ಎಂಬ ಹಲವಾರು ಅನುಮಾನಗಳು ವ್ಯಕ್ತವಾಗಿವೆ. ಸುರೇಶ್‌ ಅವರನ್ನು ಅಪರಾಧಿಯನ್ನಾಗಿ ಪ್ರಕರಣದಲ್ಲಿ ತನಿಖಾಧಿಕಾರಿಗಳ ಕೈವಾಡವಿದೆಯೇ ಎಂಬ ಅನುಮಾನವೂ ಮುನ್ನೆಲೆ ಬಂದಿದೆ.

ಮಲ್ಲಿಗೆ ಅವರು ಪತ್ತೆಯಾದ ಬಳಿಕ, ಸುರೇಶ್‌ ಪರವಾಗಿ ವಕೀಲ ಪಾಂಡು ಪೂಜಾರಿ ಅವರು ನ್ಯಾಯಾಲಯಕ್ಕೆ ವಿಶೇಷ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಮೈಸೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು, ಮಲ್ಲಿಗೆ, ಎಸ್‌ಪಿ ವಿಷ್ಣುವರ್ಧನ್‌ ಹಾಗೂ ತನಿಖಾಧಿಕಾರಿ ಪ್ರಕಾಶ್‌ ಅವರನ್ನು ವಿಚಾರಣೆಗೆ ಒಳಪಡಿಸಿದೆ. ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಎಸ್‌ಪಿ ವಿಷ್ಣುವರ್ಧನ್ ಅವರಿಗೆ ಸೂಚನೆ ನೀಡಿದೆ.

ಸದ್ಯ, ಪೊಲೀಸರ ತಪ್ಪಿನಿಂದ ಜೈಲು ಸೇರಿದ್ದ ಸುರೇಶ್‌ ಅವರಿಗೆ ಜಾಮೀನು ನೀಡಲಾಗಿದ್ದು, ಈಗ ಅವರು ಜೈಲಿನಿಂದ ಹೊರಬಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...