ಮೈಸೂರು | ತಹಶೀಲ್ದಾರ್ ನೇತೃತ್ವದಲ್ಲಿ ರೈತ ಸಭೆ; ಅಹವಾಲುಗಳಿಗೆ ಸ್ಪಂದನೆ

Date:

ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೈತ ಸಂಘಟನೆಯ ಮುಖಂಡರು , 39 ಇಲಾಖೆ ಅಧಿಕಾರಿಗಳು ಸೇರಿದಂತೆ ರೈತ ಸಭೆ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಮಹಾದೇವ ನಾಯಕ ಮಾತನಾಡಿ ” ಕೃಷಿ ಇಲಾಖೆಯಿಂದ ಪ್ರತಿವರ್ಷ ರೈತರಿಗೆ ಪೈಪ್, ಸ್ಪಿನ್ಕ್ಲರ್, ಜೆಟ್, ಕಾಲರ್ ಇನ್ನಿತರೆ ರೈತೋಪಯೋಗಿ ಸಲಕರಣೆ ವಿತರಣೆ ಮಾಡುತ್ತಾ ಇದ್ದರು.ಆದ್ರೆ ಈಗ ಏಳು ವರ್ಷಕ್ಕೊಮ್ಮೆ ನೀಡುವುದಾಗಿ ಹೇಳಿದ್ದಾರೆ. ಇದು ಸರಿಯಲ್ಲ ಎರಡು ವರ್ಷಕ್ಕಾದರು ಕೊಡಬೇಕು.

ಮೈಸೂರಿನಿಂದ ಹೆಚ್ ಡಿ ಕೋಟೆ ಮಾರ್ಗದಲ್ಲಿ ಹುರ, ಮಾದಪುರ ಸೇರಿದಂತೆ ಹಲವೆಡೆ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆ ಇಲ್ಲ. ಅದಲ್ಲದೆ,ಗದ್ದಿಗೆಯಿಂದ ಕೋಟೆ ಕಡೆಗೆ ಗ್ರಾಮೀಣ ಬಸ್ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ, ಶಾಲಾ ಕಾಲೇಜಿಗೆ ಸಮಯಕ್ಕೆ ತೆರಳಲು,ಮನೆಗೆ ಮರಳಿ ಬರಲು ತೊಂದರೆ ಅನುಭವಿಸುತ್ತಿದ್ದಾರೆ, ಇದನ್ನೆಲ್ಲಾ ಸರಿಪಡಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕೋಟೆ ತಾಲ್ಲೂಕಿನಲ್ಲಿ ಸರಿ ಸುಮಾರು 215 ಕೆರೆ ಕಟ್ಟೆ ಇದ್ದು, ಸರ್ವೆ ನಡೆಸಿ ಒತ್ತುವರಿ ಭೂಮಿ ಬಿಡಿಸಬೇಕು, ಕೆರೆ ಕಟ್ಟೆ ಉಳಿಸಬೇಕು. ಹೂಳು ತೆಗೆಸಿ ನೀರು ಶೇಖರಣೆಗೆ ಅವಕಾಶ ಕಲ್ಪಿಸಬೇಕು ” ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಮೈಸೂರು ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ಮಾತನಾಡಿ ” ತಾಲ್ಲೂಕಿನಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಗಳಿವೆ ಆ ನಿಟ್ಟಿನಲ್ಲಿ ಪ್ರಮುಖವಾದದ್ದು ಜಮೀನಿಗೆ ಹೋಗುವ ರಸ್ತೆ. ಸರ್ಕಾರದ ಸುತ್ತೋಲೆ ಕೂಡ ಇದೇ ಜಮೀನಿಗೆ ಹೋಗಲು, ಬರಲು ಬಂಡಿ ದಾರಿ
ಬಿಡಬೇಕು ಎನ್ನುವುದು. ಕೆಲವರು ದುಂಡಾವರ್ತನೆ ತೋರಿ ಬೇಲಿ ಹಾಕಿಕೊಂಡು ರೈತರು ತಮ್ಮ, ಹೊಲ, ಗದ್ದೆ, ತೋಟಗಳಿಗೆ ಹೋಗಲು ಆಗದಂತ ಪರಿಸ್ಥಿತಿ ಇದೆ. ಇದನ್ನ ತಹಶೀಲ್ದಾರ್ ಅವರು ಗಮನ ಹರಿಸಿ ರೈತರ ಜಮೀನಿಗೆ ರಸ್ತೆ ಬಿಡಿಸಿಕೊಡಬೇಕು.

ವಿದ್ಯುತ್ ಅಭಾವ, ರೈತರ ಪಂಪ್ ಸೆಟ್ ಗಳಿಗೆ ನಿಯಮಿತ ವಿದ್ಯುತ್ ನೀಡಬೇಕು, ವಿದ್ಯುತ್ ತಂತಿ ಬದಲಾಯಿಸಲು ಹೊರಟಿದ್ದಾರೆ. ಮುಂಚೆ ಏನು ಬಳಸುತ್ತಾ ಇದ್ದರು ಅದನ್ನೇ ಬಳಸಬೇಕು. ಆರ್ಥಿಕ ಹೊರೆಯಿಂದ ರೈತರನ್ನು ಪಾರು ಮಾಡಬೇಕು 25 ಕೆವಿ ಟಿಸಿಗೆ ನಾಲ್ಕು ಲೈನ್ ಎಳೆಯುತ್ತಿದ್ದಾರೆ.ಐದು ಲೈನ್ ಮಾಡಬೇಕು. ರಾಬರ್ಟ್ ಅನ್ನುವ ತಂತಿ ಹಾಕುವುದು ಬೇಡ ಖರ್ಚು ವೆಚ್ಚ ಹೊಂದಿಸಲು ಆಗಲ್ಲ ಈಗೇನಿದೆ ಅದನ್ನೇ ಯಥಾವತ್ತು ಬಳಸಿ ” ಎಂದರು.

ರೈತ ಮುಖಂಡರ ಅಹವಾಲು ಆಲಿಸಿದ ತಹಶೀಲ್ದಾರ್ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಆದಷ್ಟು ಬೇಗ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು, ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹ

ಹಿರಿಯ ಮುಖಂಡ ಸೋಗಳ್ಳಿ ಪುಟ್ಟಣ್ಣಯ್ಯ, ಗೌರವಾಧ್ಯಕ್ಷ ರವಿಕುಮಾರ್, ತಾಲ್ಲೂಕು ಕಾರ್ಯದರ್ಶಿ ಬಸವರಾಜು, ಟೌನ್ ಅಧ್ಯಕ್ಷ ವಿ ಪ್ರಸಾದ್, ಯುವ ಘಟಕ ತಾಲ್ಲೂಕು ಅಧ್ಯಕ್ಷ ನಂದೀಶ್, ಸರಗೂರು ತಾಲ್ಲೂಕು ಅಧ್ಯಕ್ಷ ಚೆನ್ನನಾಯಕ, ಮಹಿಳಾ ಘಟಕ ಅಧ್ಯಕ್ಷೆ ದೇವಮ್ಮ ಸೇರಿದಂತೆ ರೈತ ಸಂಘಟನೆಯ ನೂರಾರು ಕಾರ್ಯಕರ್ತರು, ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...