ಮೈಸೂರು | ರಾಮಾಯಣ ಭಾರತೀಯರ ಜೀವನ ಚರಿತ್ರೆ, ಸಂಸ್ಕೃತಿ ಪ್ರತಿಬಿಂಬಿಸುವ ಮಹಾಕಾವ್ಯ: ಸಚಿವ ಮಹದೇವಪ್ಪ

Date:

ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದು ಸಚಿವ ಡಾ ಎಚ್‌ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮೈಸೂರು ನಗರ ಮತ್ತು ತಾಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಈ ಬಾರಿ ಮೈಸೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಿಸಲು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿರುವುದು ಸಂತಸವಾಗಿದೆ. ವಾಲ್ಮೀಕಿ ಕವಿ ಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳು ಭಾರತೀಯರ ಜೀವನಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದ್ದು, ಪ್ರಪಂಚದಲ್ಲಿರುವ ಎಲ್ಲ ದೇಶಗಳಲ್ಲೂ ಮಹಾಕಾವ್ಯಗಳು ಸೃಷ್ಟಿಯಾಗಿಲ್ಲ. ಗ್ರೀಕ್, ರೋಮ್ ಬಿಟ್ಟರೆ ನಮ್ಮ ದೇಶದಲ್ಲಿ ಮಾತ್ರ ಮಹಾಕಾವ್ಯಗಳು ಕಾಣಿಸಿಕೊಳ್ಳಲು ಸಾಧ್ಯ. ರಾಮಾಯಣ, ಮಹಾಭಾರತ ಕಾವ್ಯಗಳು ಕಟ್ಟಿಕೊಡುವ ದೃಷ್ಟಿಕೋನಗಳೇ ಬೇರೆ. ಈ ಮಹಾಕಾವ್ಯಗಳು ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿನಿಧಿಸುವ ಕೃತಿಗಳಾಗಿವೆ” ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿರುವಂತೆ ನಮ್ಮ ಸಮಸ್ಯೆಗಳ ಬೀಗದ ಕೈ ಇರುವುದು ರಾಜಕೀಯದಲ್ಲಿ. ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಶೇ.7ರಷ್ಟು ಜನರಿಗೆ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ₹9,000 ಕೋಟಿಯನ್ನು ಮೀಸಲಿಡಲಾಗಿದೆ” ಎಂದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಮಾತನಾಡಿ, “ಬೇಡರ ಕುಲಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ರಾಮಾಯಣ ಎಂಬ ಉತ್ಕೃಷ್ಟ ಮಹಾಕಾವ್ಯವನ್ನೇ ಬರೆದರು. ರಾಮನಾಮ ಉಚ್ಚಾರಣೆಯೇ ಬಾರದ ವಾಲ್ಮೀಕಿಯವರು ರಾಮಾಯಣವನ್ನೇ ರಚಿಸಿದರು. ರಾಮಾಯಣದಲ್ಲಿ 24,253 ಶ್ಲೋಕಗಳಿದ್ದು, ಏಳು ಕಾಂಡಗಳಿರುವ ಈ ಕೃತಿಯು ಇಡೀ ಪ್ರಪಂಚಕ್ಕೆ ಅನ್ವಯವಾಗುತ್ತದೆ. ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು ಅನೇಕ ಶ್ಲೋಕಗಳನ್ನು ಹೊಂದಿದೆ” ಎಂದರು.

“ಎಲ್ಲಿಯವರೆಗೆ ಭೂಮಿಯಲ್ಲಿ ಪರ್ವತ, ಸಮುದ್ರ, ನದಿಗಳಿರುತ್ತವೆಯೋ ಅಲ್ಲಿಯವರೆಗೂ ರಾಮಾಯಣ ಕಾವ್ಯ ಲೋಕದಲ್ಲಿ ಪ್ರಚಲಿತದಲ್ಲಿರುತ್ತದೆ. ಆದ್ದರಿಂದ ಸೂರ್ಯಚಂದ್ರರಿರುವರೆಗೂ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಅಮರಕಾವ್ಯವಾಗಿರುತ್ತದೆ ಮತ್ತು ಇದನ್ನು ರಚಿಸಿರುವ ಮಹರ್ಷಿ ವಾಲ್ಮೀಕಿಯು ಅಮರ ಕವಿಯಾಗಿರುತ್ತಾರೆ” ಎಂದರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮತ್ತು ಪ್ರಾಧ್ಯಾಪಕಿ ಎನ್ ಕೆ ಲೋಲಾಕ್ಷಿ ಮಾತನಾಡಿ, “ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು ‘ಕವಿಗಳ ಕವಿ’ ಎಂದು ಮಹಾಕವಿ ಕಾಳಿದಾಸರು ಗೌರವಿಸಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ, ವಿಧಾನ ಪರಿಷತ್ ಶಾಸಕ ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಧಿಕಾರಿ ಎಂ ಕೆ ಮಲ್ಲೇಶ್, ಸಮಾಜ ಕಲ್ಯಾಣ ಇಲಾಖೆಯೆ ಜಂಟಿ ನಿರ್ದೇಶಕ ಬಿ ರಂಗೇಗೌಡ, ಸಮಾಜದ ಮುಖಂಡರುಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...