ಮೈಸೂರು | ರಸ್ತೆ ಅಪಘಾತ ತಡೆಗೆ ₹127 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ-766ರ ನವೀಕರಣ

Date:

ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಎಂಟು ಅಪಘಾತ ವಲಯಗಳನ್ನು ಗುರುತಿಸಿ ₹127 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆಗಳು, ಕೆಳಸೇತುವೆಗಳು ಮತ್ತು ಸೇವಾ ರಸ್ತೆಗಳನ್ನು ನವೀಕರಿಸುವ ಮೂಲಕ ರಸ್ತೆ ಅಪಘಾತ ಮುಕ್ತ ಕಾರಿಡಾರ್ ಆಗಿ ಪರಿವರ್ತಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ.

ಮೈಸೂರು ನಗರದಿಂದ ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಪಘಾತ ಮುಕ್ತವಾಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಮಾರ್ಗವು ನೆರೆಯ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ಕೇರಳ ಮತ್ತು ತಮಿಳುನಾಡು ಅಂತಾರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಕಳೆದ ಕೆಲವು ವರ್ಷಗಳಿಂದ ಈ ಮಾರ್ಗದಲ್ಲಿ ಅಂತಾರಾಜ್ಯ ವಾಹನ ಸಂಚಾರ ದಾಖಲೆಯ ಮಟ್ಟದಲ್ಲಿ ಹೆಚ್ಚಾಗಿದೆ. ಏಕೆಂದರೆ ಈ ಮಾರ್ಗವು ದೇವಾಲಯ ಪಟ್ಟಣ ನಂಜನಗೂಡು, ಬಂಡೀಪುರ, ಊಟಿ, ಚಾಮರಾಜನಗರ ಮತ್ತು ಕೇರಳದ ವಯನಾಡ್‌ನಂತಹ ಪ್ರಮುಖ ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ವಾಹನಗಳ ಚಲನೆಯ ಹೆಚ್ಚಳದಿಂದಾಗಿ, ವಾಹನ ಸವಾರರ ವೇಗ, ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆ ರಸ್ತೆ ಅಪಘಾತಗಳಿಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಮಾರ್ಗದಲ್ಲಿ ವರದಿಯಾದ ಅಪಘಾತಗಳ ಆಧಾರದ ಮೇಲೆ ಎನ್ಎಚ್ಎಐ ಎಂಟು ಅಪಘಾತ ವಲಯಗಳನ್ನು ಗುರುತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಮಾಸ್ಟ್ ದೀಪಗಳು, ಸ್ಪೀಡ್ ಬ್ರೇಕರ್‌ಗಳು, ಹಂಪ್ಡ್ ಜೀಬ್ರಾ ಕ್ರಾಸಿಂಗ್, ಜೀಬ್ರಾ ಲೈನ್ ಹಂಪ್ ಚಿಹ್ನೆಗಳು, ಸುಧಾರಿತ ಜಂಕ್ಷನ್‌ಗಳು, ರಸ್ತೆ ಗುರುತುಗಳು ಮತ್ತು ಸಿಗ್ನಲ್‌ಗಳು, ಚೌಕಗಳು, ರಸ್ತೆ ಅಗಲೀಕರಣ ಸೇರಿದಂತೆ ಇತರ ಮೂಲಸೌಕರ್ಯ ಬದಲಾವಣೆಗಳನ್ನು ಸ್ಥಾಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿದ್ದು, ಪೊಲೀಸರ ನಿರ್ದೇಶನದ ಮೇರೆಗೆ ಎಂಟು ಅಪಘಾತ ವಲಯಗಳಲ್ಲಿ ಇತರೆ ಪರಿಹಾರ ಕ್ರಮಗಳನ್ನು ಪ್ರಾರಂಭಿಸಿದರು. ರಸ್ತೆ ಸುಧಾರಣಾ ಕಾರ್ಯಗಳನ್ನು ಆರಂಭಿಸುವ ಮೂಲಕ ರಸ್ತೆಯ ಉದ್ದಕ್ಕೂ ವಾಹನಗಳು ಸ್ಕಿಡ್‌ ಆಗುವುದನ್ನು ತಡೆಯುವ ಗುರಿಯನ್ನು ಹೊಂದಿವೆ.

ನಂಜನಗೂಡು ತಾಲೂಕಿನ ಯಲಚಗೇರಿಯಲ್ಲಿ ಮೇಲ್ಸೇತುವೆ, ಕಳಲೆ ಗೇಟ್ ಬಳಿ ಅಂಡರ್ ಪಾಸ್‌ ಮತ್ತು ಹೊಸಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಸ್ತಾಪಿಸಿದೆ. ಕಡಕೋಳ ಬಳಿ ಪಾದಚಾರಿಗಳು ಮತ್ತು ಲಘು ವಾಹನಗಳ ಸಂಚಾರಕ್ಕೆ ಪ್ರತ್ಯೇಕ ಅಂಡರ್ ಪಾಸ್, ಬಂಡಿಪಾಳ್ಯ ಎಪಿಎಂಸಿ ಬಳಿ ಎರಡು ಅಂಡರ್ ಪಾಸ್‌ಗಳು, ಗಣಪತಿ ಸಚ್ಚಿದಾನಂದ ಆಶ್ರಮದ ಬಳಿ ಮತ್ತೊಂದು ಅಂಡರ್ ಪಾಸ್, ಕೆಂಪಯ್ಯಹುಂಡಿ ಬಳಿ ಮತ್ತು ಬನ್ನಿಕುಪ್ಪೆ ಬಳಿ ಪ್ರತ್ಯೇಕ ಅಂಡರ್ ಪಾಸ್ ನಿರ್ಮಿಸಲು ಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮರಕ್ಕೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

“ರಾಷ್ಟ್ರೀಯ ಹೆದ್ದಾರಿ-766ರ ರಸ್ತೆಯುದ್ದಕ್ಕೂ ಅಂಡರ್‌ ಪಾಸ್‌ಗಳು ಮತ್ತು ಮೇಲ್ಸೇತುವೆ ಕಾಮಗಾರಿಗಳ ಆರಂಭಿಕ ಹಂತ ಪ್ರಾರಂಭವಾಗಿದೆ. ಗುತ್ತಿಗೆದಾರರಿಗೆ ನಿಯೋಜಿಸಲಾದ ಎಲ್ಲ ಕೆಲಸಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು” ಎಂದು ಬೆಂಗಳೂರಿನ ಎನ್ಎಚ್ಎಐನ ಮುಖ್ಯ ಎಂಜಿನಿಯರ್ ರಾಹುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...