ಮೈಸೂರು | ಭಗತ್ ಸಿಂಗ್ ಹುತಾತ್ಮ ದಿನದಂದು ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ

Date:

ಭಗತ್ ಸಿಂಗ್ , ಸುಖದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನದಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ‘ ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ ‘ ಮಾಡಿ ಮೈಸೂರಿನ ಮಹಾರಾಜ ಪೆವಿಲಿಯನ್ ಮೈದಾನ, ಕುಕ್ಕರಹಳ್ಳಿ ಪಾರ್ಕ್ ಹಾಗೂ ಜೆಪಿ ನಗರದ ಪುಟ್ಟರಾಜು ಗವಾಯಿ ಕ್ರೀಡಾಂಗಣದಲ್ಲಿ ಅರಿವು ಮೂಡಿಸುವುದರ ಮೂಲಕ ಆಚರಣೆ ಮಾಡಿದರು.

ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ ” ಭಗತ್ ಸಿಂಗ್ ಕ್ರಾಂತಿ ಮತ್ತು ಸ್ವಾತಂತ್ರ್ಯದ ಬಗೆಗಿನ ತಮ್ಮ ವಿಚಾರವನ್ನು ಎಷ್ಟು ಪ್ರಖರವಾಗಿ ಹರಡಿದ್ದರೆಂದರೆ ಸಾವಿರಾರು ಜನ ಅವರ ವಿಚಾರಗಳನ್ನು ಈಡೇರಿಸಲು ಪ್ರಾಣ ತ್ಯಾಗಕ್ಕೆ ಸಿದ್ಧರಾಗಿ ಬೀದಿಗಿಳಿದರು. ಅವರ ಪ್ರಕಾರ ಸ್ವಾತಂತ್ರ್ಯದ ಪರಿಕಲ್ಪನೆ ಹೀಗಿತ್ತು ಕೇವಲ ಸ್ವಾತಂತ್ರ್ಯ ಪಡೆಯುವುದು ನಮ್ಮ ಉದ್ದೇಶವಲ್ಲ. ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ನಮ್ಮ ದೇಶದ ಕೆಲವೇ ಕೆಲವು ಶ್ರೀಮಂತ ವರ್ಗಕ್ಕೆ ವರ್ಗಾವಣೆಯಾದರೆ, ಅದು ನಿಜವಾದ ಸ್ವಾತಂತ್ರ್ಯವಾದೀತೆ? ಹೀಗೆ ಸಿಗುವ ಸ್ವಾತಂತ್ರ್ಯ ನಮ್ಮ ದೇಶದ ಸಾಮಾನ್ಯ ಜನರ ಬದುಕಿನಲ್ಲಿ ಏನಾದರೂ ಬದಲಾವಣೆಯನ್ನು ತರಲು ಸಾಧ್ಯವೇ? ದೇಶದ ರೈತರು, ಬಡ ಕೂಲಿ-ಕಾರ್ಮಿಕರ ಜೀವನ ಉತ್ತಮವಾಗುವುದೇ? ಸ್ವಾತಂತ್ರ್ಯ ಪಡೆಯುವುದು ಮಾತ್ರವೇ ನಮ್ಮ ಉದ್ದೇಶವಲ್ಲ, ಅದು ಮೊದಲ ಹೆಜ್ಜೆ ಮಾತ್ರ! ನಮ್ಮ ಗುರಿಯಿರುವುದು ಒಂದು ಉನ್ನತವಾದ ರಾಷ್ಟ್ರವನ್ನು ನಿರ್ಮಾಣ ಮಾಡುವುದು.

ಯಾವ ರಾಷ್ಟ್ರ ತನ್ನೆಲ್ಲ ಜನರಿಗೆ ಸಮಾನವಾಗಿ ಬದುಕುವ ಹಕ್ಕನ್ನು ನೀಡುತ್ತದೆಯೋ, ಯಾವ ರಾಷ್ಟ್ರ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವುದಿಲ್ಲವೋ, ಯಾವ ರಾಷ್ಟ್ರ ಮನುಷ್ಯನಿಂದ ಮನುಷ್ಯನ ಶೋಷಣೆಯನ್ನು ಕೊನೆಗಾಣಿಸುವುದೋ ಅಂತಹ ರಾಷ್ಟ್ರ. ಶಿಕ್ಷಣದ ವ್ಯಾಪಾರಿಕರಣ , ನಿರುದ್ಯೋಗ ,ಹಸಿವು, ಬಡತನ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಸಮಸ್ಯೆಗಳನ್ನು ತಡೆಯಲು ಹಾಗೂ ಶಿಕ್ಷಣ,ಮಾನವತೆ, ಸಂಸ್ಕೃತಿ ಉಳಿಸಲು ,ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಭಗತ್ ಸಿಂಗ್ ಅವರ ವಿಚಾರಗಳಿಂದ ಸ್ಫೂರ್ತಿ ಪಡೆದು ಮುಂದೆ ಬರಬೇಕೆಂದು ” ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಪದಾಧಿಕಾರಿಗಳಾದ ಚಂದನ, ಹೇಮಾ,ಚಂದ್ರಿಕಾ, ಅಂಜಲಿ, ಅಭಿಷೇಕ್, ದಿಶಾ, ಬೀರಪ್ಪ ,ನಂದೀಶ್, ಅಪೂರ್ವ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...