ಮೈಸೂರು | ರಸ್ತೆ ದುರಸ್ತಿ,ಕಾಮಗಾರಿ ವಿಳಂಬ ; ಸ್ಥಳಿಯರು ಹಾಗೂ ಶಾಲಾ ಮಕ್ಕಳಿಂದ ಪ್ರತಿಭಟನೆ

Date:

ಮೈಸೂರು ರಾಮಕೃಷ್ಣ ನಗರದ 58 ನೇ ವಾರ್ಡಿನ ಸಾಯಿಬಾಬಾ ವೃತ್ತದ ಹತ್ತಿರ ರಸ್ತೆ ದುರಸ್ತಿ, ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯರು ಹಾಗೂ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಮಹಾ ನಗರ ಪಾಲಿಕೆಯಿಂದ ಒಳಚರಂಡಿ ಕಾಮಗಾರಿ ಸಾಯಿಬಾಬಾ ವೃತ್ತದ ಮುಖ್ಯರಸ್ತೆಯಲ್ಲಿ 6 ತಿಂಗಳಿಂದ ನಡೆದಿದ್ದು ಕೆಲಸ ಪೂರ್ಣಗೊಂಡಿದೆ. ಒಳಚರಂಡಿ ಮಾಡಲು ಅಗೆದಿದ್ದ ರಸ್ತೆಯನ್ನು ಇದುವರೆಗೆ ಡಾಂಬರ್ ಹಾಕದೆ
ಹಾಗೆ ಬಿಟ್ಟಿದ್ದಾರೆ.ಒಳಚರಂಡಿ ಕಾಮಗಾರಿ ನಡೆಸಲು ವಿಳಂಬ ಮಾಡಿದ್ದು ಅಲ್ಲದೆ ರಸ್ತೆ ಸರಿ ಪಡಿಸದೆ ಸುತ್ತಲು ಗುಂಡಿ ಬಿದ್ದು
ಓಡಾಡಲು ಆಗದಂತೆ ಆಗಿದೆ.

ಸುತ್ತಲು ದೂಳು, ವಾಹನ ಸವಾರರಿಗೆ ಗುಂಡಿಯಿಂದಾಗಿ ಕಿರಿಕಿರಿ, ರಸ್ತೆ ತುಂಬೆಲ್ಲ ಬರಿ ಗುಂಡಿಗಳೇ ಇದ್ದಾವೆ. ಅಕ್ಕ ಪಕ್ಕದಲ್ಲಿ ನೃಪತುಂಗ ಕನ್ನಡ ಶಾಲೆ, ವಿಶ್ವ ಮಾನವ ಶಾಲೆ, ರಾಮಕೃಷ್ಣ ವಿದ್ಯಾ ಕೇಂದ್ರ, ಸುಯೋಗ್ ಆಸ್ಪತ್ರೆ, ಬಾಲಕಿಯರ ವಸತಿ, ದೇವಸ್ಥಾನವಿದೆ.ದಿನನಿತ್ಯ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಓಡಾಡಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರು ಓಡಾಡುವಾಗ ಧೂಳಿನಿಂದ ಉಸಿರುಗಟ್ಟಿ ಕಾಯಿಲೆಗಳು ಬರುವ ಪರಿಸ್ಥಿತಿ.ಹಿರಿಯ ನಾಗರೀಕರು ಪಾರ್ಕಿನಲ್ಲಿ ಓಡಾಡಲು ಕೂಡ ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದಾಗಿ ಸ್ಥಳೀಯರು, ಹಿರಿಯ ನಾಗರಿಕರು ಎಷ್ಟೇ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಕೊಡಗು | ಭಯದಲ್ಲೇ ದಿನ ದೂಡುವ ಆದಿವಾಸಿಗಳು; ಪರ್ಯಾಯ ವ್ಯವಸ್ಥೆಗೆ ಮನವಿ

ಆದುದರಿಂದ ಇಂದು ಸ್ಥಳೀಯರು, ಪೋಷಕರು, ಹಿರಿಯ ನಾಗರೀಕರು, ಶಾಲಾ ಮಕ್ಕಳು ಸೇರಿ ಪ್ರತಿಭಟನೆ ನಡೆಸಿದ್ದು ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಅಧಿಕಾರಿಗಳು ಮನವಿ ಸ್ವೀಕರಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...