ಮೈಸೂರು | ‘ಸಹಜ ರಂಗ’ ತರಬೇತಿ ಶಿಬಿರದ ಸಮಾರೂಪ

Date:

ನಿರಂತರ ಫೌಂಡೇಶನ್ ಮೈಸೂರಿನ ಆಯೋಜನೆಯಲ್ಲಿ ನಡೆದ ‘ಸಹಜ ರಂಗ’ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಳೆದ ಶುಕ್ರವಾರ ಸಂಜೆ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಜರುಗಿತು.

‘ರಂಗಭೂಮಿಗೆ ಭೂಮಿ ತೂಕದ ಶಕ್ತಿ ಇದೆ’ ಎಂಬ ಆಶಯದೊಂದಿಗೆ ಆರಂಭವಾದ ಸಹಜ ರಂಗ ಈ ಬಾರಿ ಸಂವಿಧಾನ ಮತ್ತು ಅದರ ಮೌಲ್ಯಗಳು ಎಂಬ ವಿಷಯವನ್ನು ಕೇಂದ್ರೀಕರಿಸಿತು. ‘ಶಿಕ್ಷಣ ಜಡವಾಗುತ್ತಿರುವ ಈ ಸಮಯದಲ್ಲಿ ಸಂವಿಧಾನವನ್ನು ಬದುಕಿನ ಅವಿಭಾಜ್ಯ ಅಂಗವಾಗಿ ನೋಡಲು ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳಿಗೆ ವಿಶೇಷ ರಂಗರೂಪಕವನ್ನು ರೂಪಿಸಲಾಗಿದೆ’ ಎಂದು ಶಿಬಿರದ ನಿರ್ದೇಶಕರಾದ ಸುಗುಣ ಎಂ. ಎಂ. ಹೇಳಿದರು.

ಹಿರಿಯ ಲೇಖಕ ತುಕಾರಾಂ ಅವರು ಮಾತನಾಡಿ, “ನೈತಿಕತೆ ಇಲ್ಲದಾಗ ಒಳ-ಹೊರ ಬದುಕು ಶಿಥಿಲವಾಗುತ್ತದೆ. ನಿರಂತರ ತಂಡವು ಕಾಲಕ್ಕೆ ಕನ್ನಡಿಯನ್ನು ಹಿಡಿಯುವ ಕಾರ್ಯ ಮಾಡುತ್ತಿದೆ. ‘ಜನಗಣಮನ’ ನಾಟಕವು ಸಂವಿಧಾನವನ್ನು ಬದುಕಿನ ವಿಧಾನವಾಗಿ ರೂಪಿಸುವ ಪ್ರಯತ್ನವಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಿಕಾರ್ಜುನ ಸ್ವಾಮಿ ಅವರು ಮಾತನಾಡಿ, “ಸಹಜ ರಂಗ ಮತ್ತು ನಿರಂತರ ಎಂಬ ಹೆಸರೇ ರಂಗಭೂಮಿಯ ಧ್ಯೇಯವನ್ನು ಪ್ರತಿಬಿಂಬಿಸುತ್ತದೆ. ರಂಗಭೂಮಿಯ ಶಕ್ತಿ ಸಮಾಜಕ್ಕೆ ದಾರಿದೀಪವಾಗಬಲ್ಲದು” ಎಂದು ಹೇಳಿದರು.

ಬಸವರಾಜ ದೇವನೂರು ಮಾತನಾಡಿ, “ಜಾತಿ ಸಮಸ್ಯೆಯ ಆತಂಕ ಗಾಢವಾಗಿರುವ ಈ ಕಾಲದಲ್ಲಿ, ನಿರಂತರ ತಂಡವು ಜಾತಿ ಮತ್ತು ವ್ಯವಸ್ಥೆಗೆ ರಾಜಿಯಾಗದೆ ಬೆಳೆಯುತ್ತಿರುವುದು ಶ್ಲಾಘನೀಯ. ಇನ್ನಷ್ಟು ಜನಾಂಗೀಯ ಭಾವೈಕ್ಯತೆಯನ್ನು ಬಿಂಬಿಸುವ ನಾಟಕಗಳನ್ನು ಸಮಾಜಕ್ಕೆ ನೀಡಬೇಕಾಗಿದೆ” ಎಂದು ಹೇಳಿದರು.

ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು, ಹೊಸ ಮುಖಗಳ ಪರಿಚಯ, ಶಿಕ್ಷಕರ ಪ್ರೋತ್ಸಾಹ ಮತ್ತು ರಂಗಭೂಮಿಯ ಮೂಲಕ ಬೆಸೆಯುವ ಕಲೆಯು ನಮಗೆ ಸಿಕ್ಕಿದೆ. ಸಂವಿಧಾನವು ದಲಿತ ಸಮುದಾಯದ ಆತ್ಮಗೌರವವನ್ನು ಶತಮಾನಗಳಿಂದ ಬಲಪಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹೆಚ್ ಡಿ ಕೋಟೆ | ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಮಹಾದೇವ ನಾಯಕ ಪುನಾರಾಯ್ಕೆ

ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಸಲಹೆಗಾರರಾದ ಬಸವರಾಜ ದೇವನೂರು, ಹಿರಿಯ ಲೇಖಕ ತುಕಾರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ. ಎನ್. ಮಲ್ಲಿಕಾರ್ಜುನ ಸ್ವಾಮಿ, ನಿರಂತರದ ರಂಗ ನಿರ್ದೇಶಕ ಸುಗುಣ ಎಂ. ಎಂ, ಪ್ರೊ. ಕೆ. ಸಿ. ಬಸವರಾಜ್, ಪ್ರೊ. ಕಾಳಚನ್ನೇಗೌಡ, ಪ್ರೊ. ಮಾಧವಿ ಎಂ.ಕೆ., ನಿವೃತ್ತ ಪ್ರಾಧ್ಯಾಪಕರಾದ ಅಪ್ಪಾಜಿಗೌಡ್ರು, ಮಂಗಳ, ನಿರಂತರ ಶ್ರೀನಿವಾಸ್, ಪ್ರಸಾದ್ ಕುಂದೂರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...