ಮೈಸೂರು | ‘ಸಮ್ಮಿಲನ-2025’ ರ ಸಂವಾದ

Date:

‘ಸಮ್ಮಿಲನ-2025’ ಉದ್ದೇಶಕ್ಕಾಗಿ ಪಾಲುದಾರಿಕೆಗಳು ಎಂಬ ಕಾರ್ಪೋರೆಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್‍ಆರ್) ಸಂವಾದವು ಮೈಸೂರಿನ ರಾಡಿಸನ್ ಬ್ಲೂ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.

ರೋಟರಿ ಇಂಟರ್‍ನ್ಯಾಷನಲ್ ಜಿಲ್ಲಾ ‌3181 ವತಿಯಿಂದ, ಸಿಐಐ ಹಾಗೂ ಕ್ರೆಡೈ (CREDAI) ಮೈಸೂರು ಶಾಖೆಗಳ ಸಹಭಾಗಿತ್ವದಲ್ಲಿ ಹಾಗೂ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಡಳಿತಗಳ ಬೆಂಬಲದೊಂದಿಗೆ ಈ ಸಂವಾದ ಆಯೋಜಿಸಲಾಗಿತ್ತು. ಈ ಸಂವಾದವು ಸಿಎಸ್‍ಆರ್ ಹೂಡಿಕೆಗಳನ್ನು ಕಂಪನಿಗಳ ಕಾಯ್ದೆ 2013 ರ ಶೆಡ್ಯೂಲ್ 7ನೇ ಅಡಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಆದ್ಯತೆಗಳೊಂದಿಗೆ ಹೊಂದಾಣಿಕೆಗೊಳಿಸುವುದು ಮುಖ್ಯ ಉದ್ದೇಶದೊಂದಿಗೆ ನಡೆಯಿತು.

ರಾಜ್ಯದ ಮುಖ್ಯ ಕಾರ್ಯದರ್ಶಿಯ ಡಾ. ಶಾಲಿನಿ ರಜನೀಶ್ ಮಾತನಾಡಿ ಸಂವಾದವನ್ನು ಕ್ರಿಯೆಯಲ್ಲಿ ಪಾಲುದಾರಿಕೆ ಸ್ಪೂರ್ತಿದಾಯಕ ಮಾದರಿ. ರೋಟರಿ, ಸಿಐಐ ಮತ್ತು ಕ್ರೆಡೈ ಮೈಸೂರಿನ ನೇತೃತ್ವವನ್ನು ಶ್ಲಾಘಿಸಿ, ದೀರ್ಘಕಾಲಿಕ ಪರಿಣಾಮ ಬೀರುವ ಸಿಎಸ್‍ಆರ್ ಯೋಜನೆಗಳನ್ನು ಕೈಗೊಳ್ಳಲು ಕಂಪನಿಗಳನ್ನು‌ ಪ್ರೋತ್ಸಾಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಪರಿಸರ ಕ್ಷೇತ್ರಗಳಲ್ಲಿ ಸಿಎಸ್‍ಆರ್ ಹೂಡಿಕೆಗಳ ಅಗತ್ಯತೆ ಬಹು ಮುಖ್ಯವಾಗಿದೆ. ಚಾಮರಾಜನಗರ ಬೌಗೋಳಿಕಾವಾಗಿ ವಿಸ್ತರವಾದ ಜಿಲ್ಲೆ. ಅನೇಕ ರೀತಿಯ ಸಮಸ್ಯೆಗಳಿವೆ. ತುರ್ತಾಗಿ ಜಿಲ್ಲೆಯ 275 ಕೆರೆಗಳ ಅಭಿವೃದ್ಧಿ ಆಗಬೇಕಿದೆ. ಅಂಗನವಾಡಿ, ಶಾಲಾ ಶೌಚಾಲಯ, ಕೌಶಲ್ಯ ಅಭಿವೃದ್ದಿ, ಅರಣ್ಯ ವ್ಯಾಪ್ತಿಯಲ್ಲಿ ಬಫರ್ ಜೋನ್ ಅಭಿವೃದ್ಧಿ ಆಗಬೇಕಿದೆ. ಇದೆಲ್ಲದಕ್ಕೂ ಖಾಸಗಿ ಸಂಸ್ಥೆಗಳ ನೆರವು ಅಗತ್ಯ” ಎಂದರು.

“ಆದಿವಾಸಿಗಳು ವಾಸಿಸುವ ಮನೆಗಳು ಅತ್ಯಂತ ಶೋಚನಿಯವಾಗಿದೆ. ಗುಡ್ಡಗಾಡು ಗ್ರಾಮಗಳಿಗೆ ಭೇಟಿ ನೀಡಿದರೆ ಕನಿಷ್ಠ ಮಳೆ-ಗಾಳಿ ಯಿಂದ ತಪ್ಪಿಸಿಕೊಳ್ಳಲು ಟಾರ್ಪಲ್ ಕೊಡಿಸಿ ಎಂದು ಜನ ಕೇಳುತ್ತಾರೆ. ಜಿಲ್ಲಾಡಳಿತ ಕೇವಲ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಬಹುದಾದ ಮಾದರಿ ಮನೆ ನಿರ್ಮಿಸಿದ್ದು, 533 ಕುಟುಂಬಗಳಿಗೆ ಸೂರು ಕಲ್ಪಿಸಬೇಕಿದೆ. 18 ಏಕ ಶಿಕ್ಷಕ ಶಾಲೆಗಳಿದ್ದು, ಅವುಗಳಿಗೆ ವಾಹನ ಸೌಕರ್ಯ ಕಲ್ಪಿಸಬೇಕೆಂದು” ಕೋರಿದರು.

ಕ್ರೆಡಾಯ್ ಮೈಸೂರು ಚೇರ್ಮೇನ್ ಶ್ರೀಹರಿ ದ್ವಾರಕನಾಥ್ ಮಾತನಾಡಿ, ನಮ್ಮಲ್ಲಿ 500ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಉದ್ಯಮಿಗಳಿದ್ದಾರೆ. ಕ್ರೆಡಾಯ್ ದೇಶಾದ್ಯಂತ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದ್ದು, ಸಿಎಸ್‌ಆರ್ ನಿಧಿಯ ಮೂಲಕ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರಿನ ಮುಖ್ಯಸ್ಥೆ ಡಾ. ಪುಷ್ಪಲತಾ ಮಾತನಾಡಿ ನಮ್ಮ ಸಂಸ್ಥೆ ಯಲ್ಲಿ ನೂರಾರು ಮಂದಿ ಶ್ರವಣ ಸಮಸ್ಯೆ ಇರುವವರು ಮನವಿ ಮಾಡಿದ್ದಾರೆ.ದಾನಿಗಳು ಆರ್ಥಿಕ ನೆರವು ಕೋರಿದರು.

ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ ಸಿಎಸ್‍ಆರ್ ಮೂಲಕ ಮೈಸೂರಿನಲ್ಲಿ ಕೈಗೊಳ್ಳಬಹುದಾದ ಯೋಜನೆಗಳ ಅವಕಾಶಗಳನ್ನು ಪ್ರಸ್ತಾಪಿಸಿ, ಕೈಗಾರಿಕೆ–ಸರ್ಕಾರದ ಸಹಭಾಗಿತ್ವಕ್ಕೆ ಆಹ್ವಾನ ನೀಡಿದರು. ಮೈಸೂರು ಸಿಐಐ ಅಧ್ಯಕ್ಷ ನಾಗರಾಜ ಗರ್ಗೇಶ್ವರಿ ಹಾಗೂ ಕ್ರೆಡೈ ಅಧ್ಯಕ್ಷರಾದ ಶ್ರೀಹರಿ ಚಾಮರಾಜನಗರ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಸಿಎಸ್‍ಆರ್ ಯೋಜನೆಗಳನ್ನು ಕೈಗೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕೊಡಗು ಅಭಿವೃದ್ಧಿ ಸಮಿತಿಯಿಂದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ರೋಟರಿ ಗವರ್ನರ್ ಪಿ. ಕೆ. ರಾಮಕೃಷ್ಣ, ಜಿಲ್ಲಾ ಸಿಎಸ್‍ಆರ್ ಅಧ್ಯಕ್ಷ ಕಿರಣ್ ರಾಬರ್ಟ್, ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಮೈಸೂರು ನಗರ ಪಾಲಿಕೆ ಆಯುಕ್ತ ಶಹಿಕ್ ತನ್ವೀರ್ ಅಸಿಫ್, ಚಾಮರಾಜನಗರ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ರೋಟರಿ ಫೌಂಡೇಷನ್ ಇಂಡಿಯಾದ ಸಿಎಸ್‌ಆರ್ ವಿಭಾಗದ ಮುಖ್ಯಸ್ಥೆ ಭಾವನಾ ವರ್ಮಾ, ರೋಟರಿ ಜಿಲ್ಲಾ ನಿಯೋಜಿತ ಗೌರ್ನರ್ ಸೋಮಶೇಖರ್ ಸೇರಿದಂತೆ ಹಲವು ಕಂಪನಿಗಳ ಮುಖ್ಯಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...