ತುಮಕೂರು ನಗರದಲ್ಲಿ ಅ. 22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

Date:

ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ತಿಳಿಸಿದರು.

ತುಮಕೂರು ನಗರದ ಪತ್ರಿಕಾಭವನದಲ್ಲಿಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭೌಗೋಳಿಕ ಸ್ವಾಮ್ಯ ಪ್ರಮಾಣ ಪತ್ರವನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಬಹುರಾಷ್ಟೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ನಮ್ಮ ಸಂಸ್ಥೆ ಹೆಚ್ಚಿನ ವಹಿವಾಟು ಹೊಂದಿದ್ದು, 2023-24 ಸಾಲಿನಲ್ಲಿ 1570 ಕೋಟಿ ರೂ. ವಹಿವಾಟು ನಡೆಸಿ ಅಂದಾಜು ನಿವ್ವಳ 362 ಕೋಟಿ ರೂ.ಗಳ ಲಾಭ ಗಳಿಸಿದೆ. ಪ್ರಸ್ತುತ ಆರ್ಥಿಕ ವರ್ಷ 2024-25ರಲ್ಲಿ ನಮ್ಮ ಉತ್ಪನ್ನಗಳ ಮಾರಾಟದಲ್ಲಿ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸೆಪ್ಟೆಂಬರ್ 24ರವರೆಗಿನ ಮಾರಾಟದಲ್ಲಿ 901.39 ಕೋಟಿ ರೂ.ಗಳ ವಹಿವಾಟು ನಡೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸಂಸ್ಥೆಯ 19 ಉತ್ಪನ್ನಗಳು ಮೂರು ಸಲ ಸಿಎಂ ರತ್ನ ಪ್ರಶಸ್ತಿಗೆ ಭಾಜನವಾಗಿದ್ದು, ಪರಿಸರ ಸ್ನೇಹಿ ಉದ್ಯಮ ಪ್ರಶಸ್ತಿಯನ್ನು ಪಡೆದಿದೆ. ಅಲ್ಲದೆ ನಮ್ಮ ಉತ್ಪನ್ನಗಳು 20 ರಾಷ್ಟçಗಳಿಗೆ ರಫ್ತಾಗುತ್ತಿದೆ. ನಗರದಲ್ಲಿ 10 ದಿನಗಳ ಕಾಲ ನಡೆಯುವ ಸಾಬೂನು ಮೇಳದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದರು.ಭಾರತದಲ್ಲಿ 6 ಕಡೆ ನಮ್ಮ ಶಾಖಾ ಕಚೇರಿಗಳಿದ್ದು, ನಮ್ಮ ಸಂಸ್ಥೆ ರಾಜ್ಯದ 900 ರೈತರೊಂದಿಗೆ ಒಡಂಬಡಿಕೆ ಮಾಡಿ ಕೊಂಡಿದೆಯಲ್ಲದೆ, 3308 ಹೆಕ್ಟೇರ್ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಬೆಳೆಸಲು ಪ್ರೋತ್ಸಾಹ ನೀಡಲು ನಮ್ಮ ಸಂಸ್ಥೆ ವತಿಯಿಂದ ಸಸಿಗಳನ್ನು ವಿತರಿಸಿ ಅವುಗಳನ್ನು ಬೆಳೆಸಲು ಮಾರ್ಗದರ್ಶನ, ದರ ನಿಗಧಿ, ಇತ್ಯಾದಿ ಸೇವೆಯನ್ನು ಒದಗಿಸಲಾಗುತ್ತಿದೆ ಎಂದರು.

ಶ್ರೀಗಂಧದ ಸಸಿಯನ್ನು 10 ರಿಂದ 15 ವರ್ಷಗಳ ನಂತರ ಕಟಾವಿಗೆ ಬರುತ್ತವೆ. ಅರಣ್ಯ ಇಲಾಖೆ ನಿರ್ದೇಶನದಂತೆ ಮರದ ಕಾಂಡ, ರೆಂಬೆ, ಬೇರುಗಳು ಹೀಗೆ ವಿವಿಧ ಭಾಗಕ್ಕೆ ದರ ನಿಗಧಿ ಮಾಡಲಾಗುವುದು ಎಂದರು.

ಮೈಸೂರು ಸ್ಯಾಂಡಲ್ ಸೋಪ್ ಮೇಳದಲ್ಲಿ ಏನೆಲ್ಲಾ ಇರಲಿದೆ : ಮೇಳದಲ್ಲಿ ಮೈಸೂರ್ ಸ್ಯಾಂಡಲ್ ಸೋಪ್, ಗೋಲ್ಡ್, ಮೈಸೂರ್ ಸ್ಯಾಂಡಲ್ ಮಿಲೇನಿಯಂ, ಬಾಡಿವಾಷ್, ಮೈಸೂರ್ ರೋಜ್, ಬೇಬಿ ಸೋಪ್, ಗೋಲ್ಡ್ ಸಿಕ್ಸರ್, ವೇವ್ ಟರ್ಮರಿಕ್ ಸೋಪ್, ಟಾಲ್ಕ್, ಕ್ಲೀನಾಲ್, ಅಗರಬತ್ತಿಗಳು, ಧೂಪ್, ಡಿಟರ್ಜೆಂಟ್ ಪೌಡರ್, ಪಾಯಿಂಟ್ ಅಡ್ವಾನ್ಸ್ಡ್ ಲಿಕ್ವಿಡ್ ಡಿಟರ್ಜೆಂಟ್, ಹ್ಯಾಂಡ್ ವಾಶ್, ಆಯಿಲ್, ಡಿಟರ್ಜೆಂಟ್ ಕೇಕ್, ವಾಷಿಂಗ್ ಬಾರ್ ಸೋಪ್ ಮತ್ತಿತರ ಉತ್ಪನ್ನಗಳ ಪ್ರದರ್ಶನ ಇರಲಿದೆ.

ಸಹಾಯಕ ಪ್ರಧಾನ ವ್ಯವಸ್ಥಾಪಕ ಗುರುಪ್ರಸಾದ್ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...