ಕನ್ನಡ ಭಾಷಾ ಪ್ರೇಮ, ನಾಡ ಪ್ರೇಮ ಮಾತಿನಲ್ಲಿ ತಿಳಿಸುವಂತದ್ದಲ್ಲ, ಅದು ನಮ್ಮ ಮನದಿಂದ ಮೂಡಿ ಬರುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ತಿಳಿಸಿದರು.
ಭೈರವಿ ಗೌಡತಿಯರ ಬಳಗದಿಂದ ಕನ್ನಡ ರಾಜ್ಯೋತ್ಸವವನ್ನು ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಚರಣೆ ಮಾಡಲಾಯಿತು. ಕನ್ನಡ ನಾಡು, ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಸದಾಕಾಲ ನಮ್ಮ ಮನದಲ್ಲಿ ಉಳಿಸಿಕೊಂಡಿರಬೇಕು.
ಈ ಸುದ್ದಿ ಓದಿದ್ದೀರಾ? ಮೈಸೂರು | ಕೇಂದ್ರ ಗ್ರಂಥಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ
ನವಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವದ ರಂಗು ಎಲ್ಲೆಡೆ ತುಂಬಿರುವುದನ್ನು ನಾವು ಕಾಣುತ್ತೇವೆ, ಇದು ಇಲ್ಲಿ ಆ ರಂಗಿನೊಂದಿಗೆ ಮಹಿಳೆಯರ ಶಿಸ್ತು, ಒಟ್ಟುಗೂಡಿ ಮತ್ತಷ್ಟು ಸೊಗಸು ತುಂಬಿದೆ. ಭೈರವಿ ಗೌಡತಿಯರ ಬಳಗ ಇತ್ತಿಗೆ ಹೆಸರುವಾಸಿ ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೀರಿ, ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯಗಳು ನಿಮ್ಮಿಂದ ಹೆಚ್ಚು ಹೆಚ್ಚು ಸಾಗಲಿ ಎಂದು ತಿಳಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ
ಕರ್ನಾಟಕದ ವೀರ ವನಿತೆಯರ ವೇಷ ಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು, ಈ ಸಂದರ್ಭದಲ್ಲಿ ಬೈರವಿ ಗೌಡ್ತಿಯರ ಬಳಗದ ಅಧ್ಯಕ್ಷರಾದ ರೇವತಿ ಕೃಷ್ಣಪ್ಪ, ಗೌರವಾಧ್ಯಕ್ಷರಾದ ರಾಧಾ ಲಂಕೇಗೌಡರು ಹಾಗೂ ನಿರ್ದೇಶಕರುಗಳಾದ ಡಾ. ಹೇಮಾ ನಂದೀಶ್, ಕೋಮಲ ವೆಂಕಟೇಶ ಹಾಗೂ ಸುಶೀಲ ಬಸವರಾಜು, ಆಯೋಜಕರಾದ ಪೂರ್ಣಿಮಾ, ಛಾಯಾ ಮಹೇಶ್, ಪದ್ಮಾ ಸುರೇಶ್, ಸುಮಿತ್ರ ರಮೇಶ್, ಪುಷ್ಪ, ಹೇಮಾ ಕಿರಣ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮಿ ಕಿರಣ್ ಕಾರ್ಯಕ್ರಮದಲ್ಲಿ ಇದ್ದರು.





