ಮೈಸೂರು | ಭಾರತೀಯ ರೈಲ್ವೆಯ ಖಾಸಗೀಕರಣ ವಿರೋಧಿಸಿ ಎಐಡಿವೈಓನಿಂದ ಸಹಿ ಸಂಗ್ರಹ ಅಭಿಯಾನ

Date:

ಭಾರತೀಯ ರೈಲ್ವೆ ಖಾಸಗೀಕರಣ ಮತ್ತು ವ್ಯಾಪಾರೀಕರಣ ವಿರೋಧಿಸಿ ದೇಶ ವ್ಯಾಪಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಮೈಸೂರಿನಲ್ಲೂ ಕೂಡ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಝೇಷನ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

ಭಾರತ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮವಾಗಿರುವ ಭಾರತೀಯ ರೈಲ್ವೆಯನ್ನು ಕ್ರಮೇಣವಾಗಿ ದುರ್ಬಲಗೊಳಿಸಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದ ಪ್ರತಿ ವರ್ಷ ಖಾಸಗೀಕರಣ ಮತ್ತು ವ್ಯಾಪಾರೀಕರಣದ ಕ್ರಮಗಳು ರೈಲ್ವೆ ಪ್ರಯಾಣಿಕರನ್ನು ಬಾಣಲೆಯಿಂದ ಬೆಂಕಿಗೆ ತಳ್ಳಿವೆ. ದೂರಯಾನದ ರೈಲು ಪ್ರಯಾಣವು ಅಸಾಧ್ಯವಾಗಿದೆ. ಸಾಮಾನ್ಯ ಜನರು ಅಸಹನೀಯ ಪರಿಸ್ಥಿತಿಗಳಲ್ಲಿ ಪ್ರಯಾಣಿಸುವಂತಾಗಿದೆ ಎಂದು ತಿಳಿಸಿದರು.

ಜನಸಾಮಾನ್ಯರ ಬೃಹತ್ ಪ್ರಮಾಣದ ತೆರಿಗೆ ಹಣದಿಂದ ದಶಕಗಳಿಂದ ಭಾರತೀಯ ರೈಲ್ವೆಯನ್ನು ಕಟ್ಟಿ ಬೆಳೆಸಿ,ಪ್ರತಿ ಬಜೆಟ್‌ನಲ್ಲಿ ವಿಸ್ತರಿಸುತ್ತಾ ಬರಲಾಗಿತ್ತು. ಆದರೀಗ ಕ್ರಮೇಣವಾಗಿ ದುರ್ಬಲಗೊಳಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ಪ್ರಯಾಣದಲ್ಲಿ ಸುರಕ್ಷತೆ ಎಂಬುದು ತೀವ್ರ ಆತಂಕಕಾರಿ ವಿಚಾರ. ಭದ್ರತೆ ಇಲ್ಲ, ಅತ್ಯಾಚಾರ, ಅನಾಚಾರ, ದರೋಡೆ,ಕೊಲೆ ಇತ್ಯಾದಿ ಘಟನೆಗಳು ಘಟಿಸಿವೆ. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ಖಾತರಿ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಚಿತ್ವ ನಿರ್ವಹಣೆ ಮತ್ತು ಕೆಲವು ಭದ್ರತೆಗೆ ಸಂಬಂಧಿಸಿದ ವಿಭಾಗಗಳನ್ನು ಈಗಾಗಲೇ ಖಾಸಗಿ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗುವಂತೆ ಅನರ್ಹರಾದ ಅಥವಾ ಸೂಕ್ತ ಅರ್ಹತೆ ಇಲ್ಲದ ಜನರನ್ನು ನೇಮಿಸಿಕೊಳ್ಳುತ್ತಾರೆ. ಇನ್ನೂ ಲೋಕೋ ಪೈಲಟ್‌ಗಳ ಕೊರತೆಯೂ ಇದೆ.

WhatsApp Image 2024 08 14 at 5.14.23 PM 1

ರೈಲ್ವೆಯಲ್ಲಿ 3.5 ಲಕ್ಷ ಸಿಬ್ಬಂದಿ ಕೊರತೆ ಇದೆ. ಗ್ರೂಪ್ ಸಿ ಮತ್ತು ಲೆವೆಲ್ 1 ವರ್ಗಗಳಲ್ಲಿ ಸುಮಾರು 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಜೂನ್ 2023 ರ ಅಂಕಿಅಂಶಗಳ ಪ್ರಕಾರ ಸುರಕ್ಷತಾ ವಿಭಾಗಗಳಲ್ಲೇ 1.7 ಲಕ್ಷ ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 1.57 ಲಕ್ಷ ಹುದ್ದೆಗಳು ಖಾಲಿ ಇವೆ. 2019 ರಿಂದ 2023 ರವರೆಗೆ ಒಟ್ಟು 162 ರೈಲು ಅಪಘಾತಗಳು ಸಂಭವಿಸಿವೆ. ಇವುಗಳಲ್ಲಿ 118 ಹಳಿತಪ್ಪಿದ್ದು ಮತ್ತು ಹದಿನಾರು ಒಂದಕ್ಕೊಂದು ಡಿಕ್ಕಿ ಅಪಘಾತ ಸಂಭವಿಸಿವೆ ಎಂದು ತಿಳಿಸಿದರು.

ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ರೈಲ್ವೆ ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಝೇಷನ್ ಮುಖಂಡರು ಆಗ್ರಹಿಸಿದ್ದಾರೆ.

ಸಹಿ ಸಂಗ್ರಹ ಚಳುವಳಿಯಲ್ಲಿ ಎಐಟಿವೈಓ ಜಿಲ್ಲಾಧ್ಯಕ್ಷ ಸುನಿಲ್ ಟಿ ಆರ್, ಕಾರ್ಯದರ್ಶಿ ಸುಮಾ ಎಸ್, ನೀತುಶ್ರೀ, ಸಿಂಚನ, ಶಿವು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಗ್ರಹಗಳು

  • ಭಾರತೀಯ ರೈಲ್ವೆಯ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ನಿಲ್ಲಿಸಬೇಕು
  • ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಿ ಮತ್ತು ರೈಲ್ವೆ ಸೇವೆಗಳ ವಿಸ್ತರಣೆಗೆ ಅನುಗುಣವಾಗಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಬೇಕು
  • ರೈಲುಗಳಲ್ಲಿ ಕಾಯ್ದಿರಿಸದ (UR) ಮತ್ತು ಸೆಕೆಂಡ್ ಕ್ಲಾಸ್ ಸ್ಲೀಪರ್ (SL) ಕೋಚ್‌ಗಳನ್ನು ಹೆಚ್ಚಿಸಬೇಕು
  • ವಲಸೆ ಕಾರ್ಮಿಕರಿಗಾಗಿ ಸಂಪೂರ್ಣ ಕಾಯ್ದಿರಿಸದ ರೈಲುಗಳನ್ನು ಓಡಿಸಬೇಕು.
  • ಹಿರಿಯ ನಾಗರಿಕರ ರಿಯಾಯಿತಿಗಳನ್ನು ಮರುಸ್ಥಾಪಿಸಿ. ತತ್ಕಾಲ್ ಪ್ರೀಮಿಯಂ ಸುಲಿಗೆಯನ್ನು ಕೊನೆಗೊಳಿಸಬೇಕು.
  • ಬುಕ್ ಮಾಡಿದ ಟಿಕೆಟ್‌ಗಳ ಮೇಲಿನ ರದ್ದತಿ ಶುಲ್ಕಗಳನ್ನು ತೆಗೆದುಹಾಕಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...