ಮೈಸೂರು | ಬೆಳ್ಳಿಹಬ್ಬ ಸಂಭ್ರಮ; ಜು.29, 30ರಂದು ದಲಿತ ಸಾಹಿತ್ಯ ಸಮ್ಮೇಳನ

Date:

ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ಜುಲೈ 29 ಮತ್ತು 30ರಂದು 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು‌ ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಸಂಯೋಜಕ ಡಾ. ಚಂದ್ರಗುಪ್ತ ತಿಳಿಸಿದರು.

ಮೈಸೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸದ್ಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದಲಿತ ಪ್ರಜ್ಞೆ, ಸಂವೇದನೆ ಹೊಂದಿದ ಲೇಖಕರಿಗೆ ಅವಕಾಶ ಇಲ್ಲದಂತಾಗಿದೆ. ಹಾಗಾಗಿ ದಮನಿತ ಹಾಗೂ ಶೋಷಿತರಿಗೆ ತುಡಿಯುವ, ದಲಿತ ಸಂವೇದನೆಯ ಲೇಖಕರಿಗೆ ಅವಕಾಶ ಕಲ್ಪಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ” ಎಂದರು.

“ಎರಡು ದಿನ ಸಮ್ಮೇಳನ ನಡೆಯಲಿದ್ದು, ಪ್ರಬುದ್ಧ ಭಾರತ, ಸಂವಿಧಾನ ರಕ್ಷಣೆ, ಮೀಸಲಾತಿ ವಿಷಯದ ಕುರಿತು ಸಂವಾದ ಹಾಗೂ ಚರ್ಚೆಗಳು ನಡೆಯಲಿವೆ. ಸಮತಾಗೀತೆ, ಸಂವಿಧಾನ ಪ್ರಸ್ತಾವನೆ ಓದು, ಬುದ್ಧ ಚಿಂತನೆಗಳ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ, ಬೆಳ್ಳಿ ಸಂಭ್ರಮ ಪ್ರಶಸ್ತಿ ಸಮಾರಂಭ, ಗೌರವ ಸಮಾರಂಭ, ಪುಸ್ತಕಗಳ ಬಿಡುಗಡೆ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Press meet
ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ಬೆಳ್ಳಿಹಬ್ಬ ಸಂಭ್ರಮಕ್ಕೆ ಕರೆಯೋಲೆ

“ಕಾಂಗ್ರೆಸ್‌ನ ಕೆಪಿಸಿಸಿ ಕಾರ್ಯದರ್ಶಿ ಹಾಗೂ ನಾಗವಾಲ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸಿ ನರೇಂದ್ರ ನಾಗವಾಲ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿದ್ದು, ರಾಜ್ಯ ಸಮಿತಿಯು ಇವರನ್ನು ಗೌರವ ಪ್ರಶಸ್ತಿಗೆ ಅಯ್ಕೆ ಮಾಡಿದೆ. ಹಾಗೆಯೇ ಯುವ ಬರಹಗಾರ, ದಲಿತ ಚಿಂತಕ ರವೀಂದ್ರ ಹಾರೋಹಳ್ಳಿ ಅವರನ್ನೂ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ರಾಗಿ ಲಕ್ಷ್ಮಣಯ್ಯ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ: ಸಚಿವ ಚಲುವರಾಯಸ್ವಾಮಿ

“ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ಅವರ ನೇತೃತ್ವದಲ್ಲಿ ಈ ಸಮ್ಮೇಳನ ನಡೆಯುತ್ತಿದ್ದು, ದಲಿತ ಸಾಹಿತ್ಯ ಸಂಪದ ಕೃತಿಯನ್ನು ಬಿಡುಗಡೆ ಮಾಡಲು ಚಿಂತಿಸಲಾಗಿದೆ. ಅದುದರಿಂದ ದಲಿತ ಲೇಖಕರು, ಚಳವಳಿಗಾರರು, ಚಿಂತಕರು, ವಿಚಾರವಾದಿಗಳು, ವಿಮರ್ಶಕರು, ಪ್ರಗತಿಪರರು, ಸಂಶೋಧಕರು, ವಿದ್ಯಾರ್ಥಿಗಳು ಸೇರಿದಂತೆ ಇತರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸುವ ಜಿಲ್ಲಾ ಕವಿಗಳು ತಾವು ರಚಿಸಿರುವ ಕವನದ ಪ್ರತಿಯನ್ನು ಸಮಿತಿಯ ಸಂಯೋಜಕ ಡಾ. ಚಂದ್ರಗುಪ್ತ (9591799053), ಅಧ್ಯಕ್ಷ ಡಾ.ರಂಗಸ್ವಾಮಿ ಕಾಳಿಹುಂಡಿ(8217656459), ಕಾರ್ಯದರ್ಶಿ ಡಾ.ಮಂಜು ಟಿ, ಸತ್ತಿಗೆಹುಂಡಿ (7353344365) ಅವರ ವಾಟ್ಸಪ್ ನಂಬರ್ ಹಾಗೂ ಅಥವಾ ಇಮೇಲ್ cgupta877@gmail.com‌, rangaswamykalihundi@gmail.com, manjusghundi@gmail.com ಈ ವಿಳಾಸಕ್ಕೆ 3ಡಿ ಕವನಗಳನ್ನು ಕಳುಹಿಸಲು ಕೋರಿದೆ” ಎಂದರು.

ಸುದ್ದಿಗೋಷ್ಠಿಯ್ಲಿ ಜಿಲ್ಲಾ ಉಪಾಧ್ಯಕ್ಷೆ ಜಯಶೀಲ, ಜಿಲ್ಲಾ ಕಾರ್ಯದರ್ಶಿ ಮಂಜು ಸತ್ತಿಗೆ ಉಂಡಿ, ರಂಗಸ್ವಾಮಿ ಕಾಳಿಹುಂಡಿ, ಖಜಾಂಚಿ ಡಾ. ಶಿವಶಂಕರ್‌ ಬಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...