ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ

Date:

ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ಗೆ ವಿವಿಧ ಕ್ಷೇತ್ರದ ಆರು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಹಾಗೂ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.

ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ್ (ಸಾಹಿತ್ಯ ಕ್ಷೇತ್ರ), ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರ ಆರ್. ಕೃಷ್ಣ (ಪತ್ರಿಕೋದ್ಯಮ ಕ್ಷೇತ್ರ), ಕನ್ನಿಕಾ ಕಾವೇರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಎಂ.ಸಿ. ಚೋಂದಮ್ಮ (ಶಿಕ್ಷಣ ಕ್ಷೇತ್ರ), ಜಿಲ್ಲಾ ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ (ಸಮಾಜ ಸೇವಾ ಕ್ಷೇತ್ರ), ವಿಸ್ಮಯ ಪ್ರಕಾಶನದ ಮುಖ್ಯಸ್ಥ ಹಾಲತಿ ಲೋಕೇಶ್ (ಪುಸ್ತಕ ಪ್ರಕಾಶನ), ಮೈಸೂರು ತಾಲ್ಲೂಕು ಶಿಕ್ಷಕರ ಸಂಘದ ನಿರ್ದೇಶಕ ಜಿ. ಮಹೇಶ್ (ಸಂಘಟನಾ ಕ್ಷೇತ್ರ) ಅವರು ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಧಕರಾಗಿದ್ದಾರೆ.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಅ. 6ರಂದು ಸಂಜೆ 5.30 ಗಂಟೆಗೆ ನಡೆಯಲಿರುವ ಸಮಾರಂಭವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೈಸೂರು

ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಭವನದ ವಿಶ್ರಾಂತ ನಿರ್ದೇಶಕ ಡಾ.ಎಸ್. ಶಿವರಾಜಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಅಭಿನಂದನಾ ಮತ್ತು ಆಶಯ ನುಡಿಗಳನ್ನಾಡಲಿದ್ದಾರೆ. ಬಳಿಕ ಖ್ಯಾತ ಕತೆಗಾರ ವಸುಧೇಂದ್ರ ಅವರ ಸಣ್ಣಕತೆಯ ಆಧಾರಿತ ‘ನಮ್ಮಮ್ಮ ಅಂದ್ರೆ ನಂಗಿಷ್ಟ’ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನು ಓದಿದ್ದೀರಾ? ರಾಯಚೂರು | ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶಾಸಕ ದದ್ದಲ್‌ಗೆ ಮನವಿ

ವಿನೋದ್ ಸಿ. ಮೈಸೂರು ಅವರು ಈ ಕತೆಯನ್ನು ರಂಗರೂಪಕ್ಕೆ ಅಳವಡಿಸಿ ನಿರ್ದೇಶನ ಮಾಡಿದ್ದಾರೆ. ನಾಟಕಕ್ಕೆ ನೂರು ರೂಪಾಯಿ ಪ್ರೋತ್ಸಾಹ ಧನವಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...