ಮೈಸೂರು | ಎಸ್ಎಸ್ಎಲ್ಸಿ, ಪಿಯುಸಿ ನಂತರ ಮುಂದೇನು? ವಿಚಾರ ಸಂಕೀರಣ

Date:

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಣಗಾಲು ಗ್ರಾಮದ ಮಹಾಚೇತನ ಯುವ ವೇದಿಕೆ ವತಿಯಿಂದ ಸಾವಿತ್ರಿ ಬಾಯಿ ಪುಲೆ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಬಳಿಕೆ ಮುಂದೇನು? ಎನ್ನುವ ಕುರಿತಾಗಿ ವಿಚಾರ ಸಂಕೀರಣ ನಡೆಯಿತು.

ಕುಶಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಸಿ. ಎಂ. ರಾಜೇಶ್ ಮಾತನಾಡಿ ” ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು. ಹೆಚ್ಚು ಅಂಕ ಬಂದರೆ ಹಿಗ್ಗುವುದು, ಕಡಿಮೆ ಅಂಕ ಬಂದಾಗ ಕುಕ್ಕುವ ಅಗತ್ಯವಿಲ್ಲ. ಯಾವುದೇ ಹಿಂಜರಿಕೆ, ನಾನು ಕಡಿಮೆ ಅಂಕ ಗಳಿಸಿದೆ ಎನ್ನುವ ಮುಜುಗರ ಪಡುವುದನ್ನು ಬಿಡಬೇಕು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದ ಆಯ್ಕೆಗಳು ಸಹಜವಾಗಿ ಕೊರತೆ ಇರುತ್ತದೆ. ಆಯ್ಕೆ ಯಾವತ್ತಿಗೂ ನಿಮ್ಮ ಇಚ್ಛಾನುಸಾರ ಇದ್ದರೆ ಸೂಕ್ತ. ಮನೆಯವರ ಬಲವಂತಕ್ಕೆ ಕಾಲೇಜು ಸೇರಿ ನನಗೆ ಕಲಿಕೆ ಕಷ್ಟವಾಗುತ್ತಿದೆ ಅನ್ನುವ ಖಿನ್ನತೆ ಬರ ಕೂಡದು. ಅಲ್ಲದೆ ಪೋಷಕರು ಸಹ ಸಹಕರಿಸಬೇಕು.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

” ಮಕ್ಕಳಿಗೆ ಒತ್ತಡ ಹೇರುವುದು, ಹೆಚ್ಚು ಅಂಕಗಳಿಸಿದ ಮಕ್ಕಳ ಬಗ್ಗೆ ಉದಾಹರಣೆ ಕೊಟ್ಟು ಮಾನಸಿಕವಾಗಿ ಕುಗ್ಗಿಸುವ ಕೆಲಸ ಎಂದಿಗೂ ಮಾಡಬಾರದು. ಪಟ್ಟಣ ಪ್ರದೇಶದಲ್ಲಿ ಓದುವ ಮಕ್ಕಳಿಗೆ ಸಿಗುವ ಅನುಕೂಲ ಗ್ರಾಮೀಣ ಭಾಗದ ಮಕ್ಕಳಿಗೆ ಸಿಗುವುದಿಲ್ಲ. ಅಂತಹ ವ್ಯವಸ್ಥೆ ಇಲ್ಲದೆಯೂ ಸಹ ಸಾಕಷ್ಟು ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ ಇಲ್ಲವೇ ಸ್ವಂತ ಉದ್ದಿಮೆ ಸ್ಥಾಪಿಸಲು ಸಹಕಾರಿ. ಆಯ್ಕೆಯು ಸಹ ಸಕಾಲದಲ್ಲಿ ಸೂಕ್ತವಾಗಿ ಇದ್ದರೆ. ನಿಮ್ಮ ಆಯ್ಕೆ ನಿಮ್ಮದೇ ಹಾದಿಯಲ್ಲಿ ಸಾಗಲು ಸಹಕರಿಸುತ್ತದೆ. ಅಲ್ಲದೆ, ಕೆಲಸ ಗಳಿಸಲು ಓದು ಅನ್ನುವಂತೆ ಆಗದೆ. ಜ್ಞಾನರ್ಜನೆ ಬಹಳ ಮುಖ್ಯ ಅನ್ನುವುದು ಮಕ್ಕಳ ಅರಿವಿನಲ್ಲಿ ಇರಬೇಕು.”

” ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಬದುಕಿನಲ್ಲಿ ತಿರುವು ಕೊಡುವ ಸಂದರ್ಭ. ಆಯ್ಕೆಯು ಸಹಜವಾಗಿ ಕೂಡಿರಬೇಕು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು ಸಹಕಾರಿ. ನಮ್ಮಿಂದ ಸಾಧ್ಯವಿಲ್ಲ ಅನ್ನುವ ಮನೋಧೋರಣೆ ಇರಬಾರದು. ಮನೆಯ ಆರ್ಥಿಕ ಪರಿಸ್ಥಿತಿ, ಮನೆಯಲ್ಲಿನ ಜಂಜಾಟಗಳು ನಮಗೆ ಉನ್ನತ ವ್ಯಾಸಂಗಕ್ಕೆ ತೋಡಕಾಗುತ್ತಿದೆ ಎಂದುಕೊಳ್ಳದೆ ಉತ್ತಮವಾಗಿ ಓದುವ ಕಡೆಗೆ ಲಕ್ಷ್ಯ ವಹಿಸಬೇಕು.

ಓದುವ ಹಂತಗಳಲ್ಲಿ ಸ್ಕಾಲರ್ಶಿಪ್ ಪಡೆದುಕೊಳ್ಳುವುದು ರಾಜ್ಯ, ಕೇಂದ್ರ ಸರ್ಕಾರಗಳ ಯೋಜನೆಗಳಲ್ಲಿ ಉನ್ನತ ವ್ಯಾಸಂಗಕ್ಕೆ ಇರುವ ಧನ ಸಹಾಯ ಮಾಹಿತಿ, ಬ್ಯಾಂಕ್ ಮೂಲಕ ನೆರವು ಇತ್ಯಾದಿ ಮಾಹಿತಿಗಳ ಅರಿವು ಮೂಡಿಸಿಕೊಳ್ಳಬೇಕು. ಆತ್ಮಸ್ಥೈರ್ಯದಿಂದ ವಿದ್ಯಾರ್ಥಿಗಳು ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಇಂಜಿನಿಯರ್ ವಿಜಯ್ ಕುಮಾರ್, ವಿದ್ಯಾರ್ಥಿಗಳಾದ ಸಾನ್ಯ, ರಕ್ಷಿತಾ, ಮೌಲ್ಯ, ಐಶ್ವರ್ಯ, ಬಿ. ಜೆ. ರೋಹಿತ್, ಬಿ. ಆಕಾಶ್, ಶರತ್ ಕಿಶೋರ್, ಬಿ. ಆರ್. ಪವನ್, ಪ್ರಶಾಂತ್, ಡೀನ, ಯೋಕ್ಷಾ, ಬಿ. ಆರ್. ಪವನ್, ದಿನೇಶ್, ಸೋನಿತ್, ಶ್ರೀಹಾನ್, ಪ್ರಣವರಾಜ್ ಹಾಗೂ ಪೋಷಕರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...