ಮೈಸೂರು | ರಾಜ್ಯ ಮಟ್ಟದ ಯೋಗ ಸ್ಪರ್ಧೆ; ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಣೆ

Date:

ಬಲಿಷ್ಟ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗ ಮಾಡಬೇಕು‌. ಹಿಂದೆ ಹರಿದ್ವಾರ ಅಥವಾ ಋಷಿಕೇಶವನ್ನು ಯೋಗದ ರಾಜಧಾನಿ ಎನ್ನಲಾಗುತ್ತಿತ್ತು. ಆದರೆ ಈಗಾ ಮೈಸೂರನ್ನು ಯೋಗದ ರಾಜಧಾನಿ ಎನ್ನಲಾಗುತ್ತಿದೆ ಎಂದು ಮೈಸೂರಿನ ಯೋಗ ಫೆಡರೇಶನ್‌ನ ಅಧ್ಯಕ್ಷ ಶ್ರೀಹರಿ ಹೇಳಿದರು.

10ನೇ ಅಂತಾರಾಷ್ಟ್ರೀಯ ಯೋಗ ದಿನೋತ್ಸವ ಮತ್ತು ಯೋಗಗುರು ಡಾ ಗಣೇಶ್ ಕುಮಾರ್ ಅವರ ಜನ್ಮ ಷಷ್ಠಾಬ್ದಿಯ ಅಂಗವಾಗಿ ಯೋಗ ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಮೈಸೂರು ವಿಶ್ವವಿದ್ಯಾಲಯ ಯೋಗ ಭವನದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಯೋಗ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಯೋಗ ಕ್ಷೇತ್ರ ಇಂದು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅಂತಾರಾಷ್ಟ್ರೀಯ ಯೋಗದಿನದಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನ ಗಿನ್ನೀಸ್ ದಾಖಲೆ ನಿರ್ಮಿಸಿದೆ‌. ಇದರ ಜತೆಗೆ ಮತ್ತೊಂದು ಮುಕುಟ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗದಿನದಲ್ಲಿ ಪಾಲ್ಗೊಂಡು ಈ ನೆಲೆದ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ. ಮೈಸೂರಿನ ಈ ಶ್ರೀಮಂತ ಪರಂಪರೆ ಮತ್ತಷ್ಟು ಹೆಚ್ಚಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿ‌ನ‌ ಸ್ಥಾನಿಕ ವೈದ್ಯಾಧಿಕಾರಿ ಡಾ ಎಚ್ ಎ ಶಶಿರೇಖಾ ಮಾತನಾಡಿ, “ದೈನಂದಿನ ಜೀವನದಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ದೈಹಿಕ ಆರೋಗ್ಯ, ಮಾನಸಿಕ ಆರೋಗ್ಯ, ಸಾಮಾಜಿಕ ಆರೋಗ್ಯ ಸುಸ್ಥಿರತೆಗೆ ಯೋಗ ಅಡಿಪಾಯವಾಗಿದೆ. ದೇಹವು ದೈಹಿಕವಾಗಿ ಆರೋಗ್ಯಕರವಾಗಿದ್ದಾಗ, ಮನಸ್ಸು ಸ್ಪಷ್ಟವಾಗಿ ಕೇಂದ್ರೀಕೃತವಾಗಿರುತ್ತದೆ. ಒತ್ತಡವು ನಿಯಂತ್ರಣದಲ್ಲಿರುತ್ತದೆ. ಯೋಗದ ಮೊರೆ ಹೋದವರು ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ” ಎಂದರು.

ಯೋಗಗುರು ಡಾ ಗಣೇಶ್ ಕುಮಾರ್ ಮಾತನಾಡಿ, “ಮೈಸೂರು ಅರಸರು ಯೋಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ಪರಂಪರೆಯನ್ನು ನಾವು ಮತ್ತಷ್ಟು ಹೆಚ್ಚಿಸಬೇಕಿದೆ. ಒಲಂಪಿಕ್ಸ್‌ನಲ್ಲಿ ಯೋಗವನ್ನು ಒಂದು ಕ್ರೀಡೆಯನ್ನಾಗಿ ಸೇರ್ಪಡೆ ಮಾಡಲಾಗಿದೆ. ಇದರ ಜತೆಗೆ 2036ಕ್ಕೆ ಭಾರತದಲ್ಲಿ ಒಲಂಪಿಕ್ಸ್ ಆಯೋಜಿಸಲು ಚಿಂತಿಸಲಾಗಿದೆ‌. ಇದರಲ್ಲಿ ನಮ್ಮ ಯೋಗಾಪಟುಗಳು ಪಾಲ್ಗೊಂಡು ದೇಶದ ಕೀರ್ತಿ ಹೆಚ್ಚಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕಿದೆ” ಎಂದು ಸಲಹೆ ನೀಡಿದರು.

ಯೋಗ ಸ್ಪರ್ಧೆ 2

ಮಂಡ್ಯ ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ ಕೆ ಲೋಕೇಶ್ ಮಾತನಾಡಿ, “ಕೋಪ, ತಾಪ, ದುಡುಕುತನದಿಂದ ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕೈದಿಗಳು ಜೈಲಿನಲ್ಲಿ ಬಂಧಿಯಾಗಿದ್ದಾರೆ. ನಮ್ಮಲ್ಲಿ ಅಂಥವರಿಗೆ ನಿತ್ಯ ಯೋಗಭ್ಯಾಸ ಮಾಡಿಸಲಾಗುತ್ತಿದೆ. ಇದರಿಂದ ಅವರಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ನಿಟ್ಟಿನಲ್ಲಿ ಯೋಗ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ ಗಣೇಶ್ ಕುಮಾರ್ ಹಾಗೂ ಡಾ.ಎಚ್ ಎ ಶಶಿರೇಖಾ ಅವರಿಗೆ ಅವರ ಶಿಷ್ಯಂದಿರು ಗುರುವಂದನೆ ಸಲ್ಲಿಸಿದರು.

ರಾಜ್ಯ ಮಟ್ಟದ ಯೋಗ ಸ್ಪರ್ಧೆ ಕಾರ್ಯಕ್ರಮಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ಬಳ್ಳಾರಿ, ರಾಯಚೂರು, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಸ್ಫರ್ದಿಗಳು ಪಾಲ್ಗೊಂಡಿದ್ದರು.

ಯೋಗ ಸ್ಪರ್ಧೆ 1

ಸ್ಪರ್ಧೆಯು 8 ವರ್ಷಕ್ಕಿಂತ ಮೊದಲು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷಕ್ಕೂ ಮೇಲ್ಪಟ್ಟು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಪ್ರತಿಯೊಂದು ವಿಭಾಗದಲ್ಲೂ ಪ್ರತ್ಯೇಕವಾಗಿ (ಬಾಲಕ/ಬಾಲಕಿ) ನಗದು ಬಹುಮಾನ ನೀಡಲಾಯಿತು. ಮೊದಲ ಬಹುಮಾನವಾಗಿ ₹1000, ಎರಡನೇ ಬಹುಮಾನವಾಗಿ ₹700, ಮೂರನೇ ಬಹುಮಾನವಾಗಿ ₹500ರ ಜತೆಗೆ ಪ್ರಮಾಣ ಪತ್ರ ಹಾಗೂ ಆಕರ್ಷಕ ಬಹುಮಾನ ನೀಡಲಾಯಿತು.

ಸೋಲೋ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಬಾಲಕ/ಬಾಲಕಿಯರ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಮೊದಲ ಮೂರು ಸ್ಥಾನಗಳಿಗೆ ನಗದು ಬಹುಮಾನ ನೀಡಲಾಯಿತು. 4, 5 ಮತ್ತು 6ನೇ ಸ್ಥಾನ ಪಡೆದವರಿಗೆ ಪ್ರಮಾಣ ಪತ್ರ ಮತ್ತು ಆಕರ್ಷಕ ಬಹುಮಾನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅತ್ಯಂತ ಅಸಮರ್ಥ ವಿಪಕ್ಷ ನಾಯಕ ಆರ್ ಅಶೋಕ್‌: ಶಾಸಕ ಪ್ರದೀಪ್‌ ಈಶ್ವರ್‌ ಕಿಡಿ

ಕಾರ್ಯಕ್ರಮದಲ್ಲಿ ಮೈಸೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ ವೆಂಕಟೇಶ, ಮೈಸೂರು ಯೋಗ ಒಕ್ಕೂಟದ ಗೌರವಾಧ್ಯಕ್ಷ ಡಾ ಚಂದ್ರಶೇಖರ್, ಅಧ್ಯಕ್ಷ ಟಿ ಜಲೇಂದ್ರ ಕುಮಾರ್, ಯೋಗ ಫೆಡರೇಶನ್ ಆಫ್ ಮೈಸೂರಿನ ಕಾರ್ಯದರ್ಶಿ ಶಶಿಕುಮಾರ್, ಯೋಗ ಸ್ಪೋರ್ಟ್ಸ್ ಫೌಂಡೇಶನ್ ಖಜಾಂಚಿ ಎಂ ಎನ್ ಮೋಹನ್, ಕರ್ನಾಟಕ ಸ್ಟೇಟ್ಸ್ ಅಮೆಚೂರ್ ಯೋಗ ಅಸೋಸಿಯೇಷನ್ ಉಪಾಧ್ಯಕ್ಷ ಗಿರೀಶ್, ಕಾರ್ಯದರ್ಶಿ ಎ ನಟರಾಜು, ಬಸವಮಾರ್ಗ ಸಂಸ್ಥೆಯ ಎಸ್ ರಾಜು, ಯೋಗ ಗುರುಗಳಾದ ಗೀತಾ ಕುಮಾರ್, ಪ್ರೇಮ್ ಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...