ಮೈಸೂರು | ಬಳ್ಳೆ ವನ್ಯಜೀವಿ ವಲಯದಲ್ಲಿ ಮೃತ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಪ್ರತಿಮೆ ಅನಾವರಣ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯದಲ್ಲಿ ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದ ಐಎಫ್ಎಸ್ ಅಧಿಕಾರಿ ಮಣಿಕಂಠನ್ ರವರ ಪ್ರತಿಮೆಯನ್ನು ‘ವಿಶ್ವ ವನ್ಯಜೀವಿ ದಿನ ‘ದ ಅಂಗವಾಗಿ ಡಿಸಿಎಫ್ ಪಿ ಎ ಸೀಮಾ ಅನಾವರಣಗೊಳಿಸಿದರು.

ಏಳು ವರ್ಷಗಳ ಹಿಂದೆ ಬಳ್ಳೆ ವನ್ಯಜೀವಿ ವಲಯದ,ಡಿಬಿ ಕುಪ್ಪೆ ಕಾಡಿನಲ್ಲಿ ಫೈರ್ ಲೈನ್ ಕಾಮಗಾರಿ ವೀಕ್ಷಣೆ ಮಾಡುವಾಗ ಕಾಡಾನೆ ಏಕಾಏಕಿ ಅಧಿಕಾರಿ ಮಣಿಕಂಠನ್ ಅವರ ಮೇಲೆ ದಾಳಿ ಮಾಡಿತ್ತು. ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಕೆಳಗೆ ಬಿದ್ದಾಗ ಕಾಡನೆ ತುಳಿದಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟು, ಜೊತೆಯಲ್ಲಿದ್ದ ಆರ್ ಎಫ್ ಓ ಸುಬ್ರಮಣ್ಯ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

ವಿಶ್ವ ವನ್ಯ ಜೀವಿ ದಿನದಂದೆ ಮೃತರಾಗಿದ್ದ ಮಣಿಕಂಠನ್ ಅವರ ಪ್ರತಿಮೆಯನ್ನು ವೀರನಹೊಸಹಳ್ಳಿ ಮಾರ್ಗದಿಂದ ಕೇರಳದ ಕಡೆಗೆ ತೆರಳುವ ಮಾರ್ಗ ಮಧ್ಯವಾದ ಬಳ್ಳೆ ಸಮೀಪದಲ್ಲಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಮೆ ಅನಾವರಣ ಮಾಡಿ ಮಾತಾಡಿದ ಡಿಸಿಎಫ್ ಪಿ ಎ ಸೀಮಾ ” ದಕ್ಷ ಅಧಿಕಾರಿ ಮಣಿಕಂಠನ್ ಅವರು ನಿಷ್ಠಾವಂತರಾಗಿ, ದಕ್ಷತೆಯಿಂದ ಕೆಲಸ ಮಾಡಿದವರು. ಅರಣ್ಯ ಸೇವೆಗೆ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಕಾಡಿನ ಬಗ್ಗೆ ಒಲವು, ಕಾಳಜಿ ಹೊಂದಿದ್ದ ಅಧಿಕಾರಿಯನ್ನು ಕಳೆದುಕೊಂಡು ಏಳು ವರ್ಷಗಳೇ ಸಂದಿವೆ ಆದರೆ ಇಂದು ಅವರ ಪ್ರತಿಮೆ ಅನಾವರಣ ಮಾಡಿದ್ದು ನಮ್ಮೆಲ್ಲರಿಗೂ ಸ್ಫೂರ್ತಿ ತರುವಂತದ್ದು ” ಎಂದರು.

” ಕಾಡಿನಲ್ಲಿ ಕೆಲಸ ಮಾಡುವಾಗ ಜಾಗರೂಕತೆ ವಹಿಸಬೇಕು, ತಮ್ಮ ರಕ್ಷಣೆಯ ಕಡೆಗೆ ಗಮನ ಹರಿಸಬೇಕು. ಇಂತಹ ಘಟನೆಗಳು ಎಂದಿಗೂ ಮರುಕಳಿಸಬಾರದು, ಕಾಡಿನಲ್ಲಿ ಓಡಾಡುವಾಗ ಎಚ್ಚರಿಕೆಯಿಂದ ಇರಬೇಕು.ಕಾಡು ಪ್ರಾಣಿಗಳ ಸಂಚಾರ ಇರುವುದನ್ನ ಖಾತ್ರಿ ಮಾಡಿಕೊಂಡು ಓಡಾಡುವುದು ಸೂಕ್ತ. ಕಾಡಿನಲ್ಲಿ ಪ್ರಾಣಿಗಳ ಇರುವಿಕೆ ಗಮನಿಸುವುದು, ಸೂಕ್ಷ್ಮವಾಗಿ ಆಲಿಸುವುದು ಸಿಬ್ಬಂದಿಗಳಿಗೆ ಅತ್ಯಗತ್ಯ. ಬಹಳ ಎಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಣೆ ಮಾಡಿ ” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವೀರಪ್ಪನ್ ಅಡಗುದಾಣಗಳಲ್ಲಿ ಒಂದಾದ ಪಾಲಾರ್ ಹಾಡಿ‌ಗೆ ಬೆಳಕು; ಬುಡಕಟ್ಟುಗಳ ಮೊಗದಲ್ಲಿ ಮಂದಹಾಸ

ಕಾರ್ಯಕ್ರಮದಲ್ಲಿ ಎಸಿಎಫ್ ಗಳಾದ ಮಧು, ಎನ್ ಲಕ್ಷ್ಮಿಕಾಂತ್, ಅಂತರಸಂತೆ ವಲಯ ಅರಣ್ಯಧಿಕಾರಿ ಸಿದ್ದರಾಜು ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...