ಮೈಸೂರು | ಅಜ್ಞಾತವಾಗಿ ಉಳಿದಿರುವ ತತ್ವಪದಕಾರರ ಸಮೀಕ್ಷೆ ನಡೆಸಬೇಕು: ಪ್ರೊ. ನಂಜಯ್ಯ

Date:

ಮೈಸೂರಿನ ಗಾಂಧಿನಗರದಲ್ಲಿರುವ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಪೂಜ್ಯ ಲಿಂಗೈಕ್ಯ ಶ್ರೀ ಸಿದ್ದಪ್ಪ ಮಹಾಸ್ವಾಮಿ ಸ್ಮರಣಾರ್ಥ “ಶರಣರ ಚಿಂತನೆ- ತತ್ವಪದಕಾರರ ಸಂಗಮ” ಕಾರ್ಯಕ್ರಮ ನಡೆಯಿತು.

ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರ ರಂಗದ ನಿರ್ದೇಶಕ ಪ್ರೊ. ಎಂ ನಂಜಯ್ಯ ಹೊಂಗನೂರು ಮಾತನಾಡಿ, ‘ದಿನನಿತ್ಯದ ಬದುಕಿನ ಸಂವೇದನೆಗಳನ್ನು ಪದಗಳನ್ನಾಗಿ ಕಟ್ಟಿ ಹಾಡಿ, ಗ್ರಾಮೀಣ ಪ್ರದೇಶದಲ್ಲಿ ಅಜ್ಞಾತವಾಗಿ ಉಳಿದಿರುವ ತತ್ವ ಪದಕಾರರ ಸಮೀಕ್ಷೆ ನಡೆಸಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

ತತ್ವ ಪದಕಾರರಿಗೆ ಮಾಶಾಸನ ನೀಡಿ ಆರ್ಥಿಕ ಭದ್ರತೆ ಕಲ್ಪಿಸಬೇಕು. ತತ್ವ ಪದಕಾರರ ರಾಜ್ಯ ಮಟ್ಟದ‍ ಸಮಾವೇಶ ಸಂಘಟಿಸಬೇಕು, ಕನ್ನಡ ತತ್ವ ಪದಕಾರರ ಕೊಡುಗೆ ಅನನ್ಯವಾಗಿದೆ. ತತ್ವ ಪದಕಾರರ ನೆಲಮೂಲ ಸಂಸ್ಕೃತಿಯ ಕಣಜ. ಅವರ ತತ್ವ ಪದಗಳಲ್ಲಿ ಜೀವ ವೈವಿಧ್ಯತೆಯ ಸಮೃದ್ಧತೆ ಇದೆ. ವಿಶ್ವಮಾನವ ಪ್ರಜ್ಞೆಯ ನೆಲೆ, ತತ್ವ ಪದ ಸಾಹಿತ್ಯಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತವರು ಮನೆಯಾಗಿದ್ದು, ಕಲಬುರ್ಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ವಿಜಯನಗರ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಾರೆ. ಹಳೇ ಮೈಸೂರು ಭಾಗದ ಗ್ರಾಮೀಣ ಪ್ರದೇಶದಲ್ಲಿ ಗುರು ಮಕ್ಕಳು ಎಂದು ಕರೆಯುವ ವಾಡಿಕೆ ಇದೆ. ಇಂಥ ತತ್ವ ಪದಗಳಿಗೆ ಮೂಲವೇ 12 ನೇ ಶತಮಾನದ ಶರಣ ಸಂಸ್ಕೃತಿ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತತ್ವಪದ ಎಂದರೆ ತತ್ವದಲ್ಲಿ ಹಾಡಿದ ಪದ. ಪದದಲ್ಲಿ ಹೇಳಿದ ತತ್ವ. ನಿಜ ಸ್ಥಿತಿಯನ್ನ ಅಥವಾ ಜೀವನ ದರ್ಶನವನ್ನು ಹಾಡಿನ ಮೂಲಕ ಅಭಿವ್ಯಕ್ತಿಗೊಳಿಸುವ ಕ್ರಿಯೆಗೆ ತತ್ವಪದ ಎಂದರ್ಥ. ಒಟ್ಟಾರೆ ವಸ್ತು ಮತ್ತು ಅಭಿವ್ಯಕ್ತಿಯನ್ನು ಸಮನ್ವಯಗೊಳಿಸಿರುವುದೇ ತತ್ವಪದ. ಅನನ್ಯ ಸಂವೇದನೆ ಕಟ್ಟಿಕೊಡುವ ತತ್ವಪದಗಳು ಮೌಖಿಕ ಪರಂಪರೆಯಿಂದ ಹುಟ್ಟಿ ಬಂದವು ಎಂದರು.

ನಿಜಗುಣ‍ ಶಿವಯೋಗಿ, ಕೈವಾರ ತಾತಯ್ಯ, ಸಂತ ಶಿಶುನಾಳ ಷರೀಫ, ಕಡಕೊಳ ಮಡಿವಾಳಪ್ಪ, ಜನ್ನೂರು ಜಲಾಲ ಸಾಹೇಬರು, ಬಿದನೂರ ಗಂಗಮ್ಮ, ಜತ್ತ ಶಿವಲಿಂಗಮ್ಮ, ಸೊಲ್ಲಾಪುರದ ಜಯದೇವಿ ಮುಂತಾದ ತತ್ವ ಪದಕಾರರು ಪ್ರಸಿದ್ಧರಾಗಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಭಾರತದ ಸಂತ ಸಂಪ್ರದಾಯವನ್ನು ಮರುಶೋಧಿಸಬೇಕಿದೆ

ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, ಉರಿಲಿಂಗಿ ಪೆದ್ದಿ ಮಠವು ಕಲೆ ಸಂಸ್ಕೃತಿ ಸಾಹಿತ್ಯಕ್ಕೆ ಪ್ರೋತ್ಸಾಹ‍ ನೀಡುತ್ತಿದೆ. ತತ್ವ ಪದಕಾರರ ಜೀವನ ಅನುಭವವನ್ನು ಜನರಿಗೆ ತಿಳಿಸಲು ಸಮ್ಮೇಳನ ಆಯೋಜಿಸಲಾಗುವುದು. ತತ್ವಪದಕಾರರ ಅಕಾಡೆಮಿ ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.

ಗುರು ಮಲ್ಲೇಶ್ವರ ಮಠದ ಜಯದೇವಿ ತಾಯಿ,ಮಹಾದೇವ ಸ್ವಾಮಿ, ಪರಮೇಶ್ವರ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...