ಮೈಸೂರು | ತಾಪಮಾನ ಹೆಚ್ಚಳ; ಪಕ್ಷಿಗಳಿಗೆ ನೀರಡಿಕೆ ನೀಗಿಸುವ ಜಾಗೃತಿ ಜಾಥಾ

Date:

ಬೇಸಿಗೆಯ ತಾಪಮಾನ ಹೆಚ್ಚಳವಾಗುತ್ತಿರುವ ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಹೀಗಾಗಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ನಗರದ ಕಡಕೋಳದಲ್ಲಿರುವ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳು, ಹಾಗೆಯೇ ರೋಟರಿ ಕ್ಲಬ್ ಶ್ರೀರಂಗಪಟ್ಟಣ ಮತ್ತು ಅಚೀವರ್ಸ್ ಅಕಾಡೆಮಿಯಿಂದ ಜಾಗೃತಿ ಜಾಥಾ ಅಭಿಯಾನ ಆಯೋಜನೆ ಮಾಡಿದ್ದರು.

ಈ ಅಭಿಯಾನಕ್ಕೆ ಶ್ರೀರಂಗನಾಯಕಿ ಸಮಾಜದ ಮುಖ್ಯಸ್ಥ ಆಶಲತಾ ಪುಟ್ಟೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎನ್‌ಎಸ್‌ಎಸ್ ಅಧಿಕಾರಿ ಡಾ. ರಾಘವೇಂದ್ರ ಮಾತನಾಡಿ, “ಮನುಷ್ಯನಾದರೆ, ನನಗೆ ಹಸಿವಾಗಿದೆ, ದಾಹವಾಗಿದೆಯೆಂದು ಕೇಳುವುದರ ಮೂಲಕ ತನ್ನ ಹಸಿವೆಯನ್ನು ನೀಗಿಸಿಕೊಳ್ಳುತ್ತಾನೆ. ಆದರೆ ಮೂಕಪ್ರಾಣಿ ಪಕ್ಷಿಗಳು ಅದರಲ್ಲೂ ಪಕ್ಷಿಗಳು ತಮ್ಮ ಹಸಿವನ್ನೇ ಹೇಳಿಕೊಳ್ಳಲಾಗದೆ ಸಂಕಟಪಡುತ್ತಿರುತ್ತವೆ. ಆದ್ದರಿಂದ ದಯಮಾಡಿ ಸಾರ್ವಜನಿಕರು ಸುತ್ತಲಿನ ಪರಿಸರದಲ್ಲಿ ಹಾಗೂ ಮನೆಯ ಮೇಲೆ ನೀರು ಮತ್ತು ಆಹಾರವನ್ನು ಇಟ್ಟು ಪಕ್ಷಿಗಳ ದಾಹವನ್ನು ನೀಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಬೀದಿಗಳಿಗೆ ತೆರಳಿ ಘೋಷವಾಕ್ಯವನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಅಭಿಯಾನಕ್ಕೆ ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಮಂಜು ರಾಮ ಪುಟ್ಟೇಗೌಡ, ನಿರ್ದೇಶಕ ನಾಗೇಂದ್ರ, ಶ್ರೀನಿವಾಸ, ಕಾಂತರಾಜ್, ವಿದ್ಯಾರ್ಥಿಗಳಾದ ಹರ್ಷ ಹೃದಯ್, ಶಾಂಭವಿ, ವಿಹಾನ್ ಮುರಳಿ ದಿವಿತ್, ಪರಶುರಾಮ್ ಸೇರಿದಂತೆ ಇತರರು ಈ ಅಭಿಯಾನಕ್ಕೆ ಸಾತ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...